ಬಿಸಿಲಿನ ತಾಪ: ತಂಪು ಪಾನೀಯಕ್ಕೆ ಹೆಚ್ಚಿನ ಬೇಡಿಕೆ


Team Udayavani, Apr 4, 2019, 10:27 AM IST

4-April-3

ಗುರುಮಠಕಲ್‌: ಬಿಸಿಲಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಜನರು ಕಲ್ಲಂಗಡಿ ಹಣ್ಣು ಖರೀದಿಸುತ್ತಿರುವುದು.

ಗುರುಮಠಕಲ್‌: ದಿನೇ ದಿನೇ ಬಿಸಲಿನ ತಾಪ ಹೆಚ್ಚಾಗುತ್ತಿದ್ದು, ಬಿಸಲಿನಿಂದ ತಪ್ಪಿಸಿಕೊಳ್ಳಲು ಜನರು ಏನೆಲ್ಲಿ ಸಹಾಸ ಪಡುತ್ತಿದ್ದಾರೆ. ಬಿರು ಬಿಸಲಿನ ತಾಪದಿಂದ ಜನರು ಯಾತನೆ ಅನುಭವಿಸುತ್ತಿದ್ದು, ದಾಹ ತೀರಿಸಿಕೊಳ್ಳುವುದರ ಜತೆಗೆ ದೇಹ ತಂಪು ಮಾಡಿಕೊಳ್ಳಲು ಹಾತೊರೆಯುವಂತೆ ಮಾಡಿದೆ. ಆದರಲ್ಲೂ ವೃದ್ದರು ಪಡುತ್ತಿರುವ ತೊಂದರೆ ಹೇಳತೀರದು. ಇದರಿಂದ ತಂಪು ಪಾನೀಯದ ಜತೆಗೆ ಕಲ್ಲಂಗಡಿ, ದ್ರಾಕ್ಷಿಗಳು ಪಡೆದು ಹೊಟ್ಟೆ ತನ್ನಗಾಗಿಸಿಕೊಂಡು ಬಿಸಿಲಿನ ತಾಪದಿಂದ ರಕ್ಷಿಸಿಕೊಳ್ಳಲು ಮುಂದಾಗುತ್ತಿರುವುದು ಸಾಮಾನ್ಯವಾಗಿದೆ.

ವೃದ್ಧರು ಅಂಗಿ ಬಿಚ್ಚಾಕಿ ತಣ್ನನೆ ಗಾಳಿಗೆ ಹಾತೋರಿಯುವಂತೆ ಮಾಡಿದೆ. ತೀವ್ರಗೊಂಡ ಸೆಕೆ, ಬೆವರಿನಿಂದ ತಪ್ಪಿಸಿಕೊಳ್ಳಲು ಫ್ಯಾನ್‌ಗಳಿಗೆ ಮೊರೆ ಹೋಗಿದ್ದಾರೆ. ಮನೆ ಒಳಗಿದ್ದರೆ ಸೆಕೆ, ಹೊರಗೆ ಬಂದರೆ ಬಿಸಿಲು. ಅಲುಗದೆ ನಿಂತಿರುವ ಗಿಡ-ಮರಗಳು, ಯಾವಾಗ ಗಾಳಿ ಬಿಸಿತೋ ಎಂದು ಕಾದು ಕುಳಿತ್ತಿದ್ದಾರೆ. ಮೇಲಿಂದ ಮೇಲೆ ವಿದ್ಯತ್‌ ಕೈಕೊಟ್ಟು ವೃದ್ಧರನ್ನು ನರಳುವಂತೆ ಮಾಡುತ್ತಿದೆ.

ಕಲ್ಲಂಗಡಿಗೆ ಬೇಡಿಕೆ: ಸುಡು ಬಿಸಲಿನ ತಾಪದಿಂದಾಗಿ ಜನರು ತಂಪು ಪಾನೀಯಗಳತ್ತ ಸಾಗುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಕಲ್ಲಂಗಡಿ ಮಾರಾಟ ಜೋರಾಗಿದ್ದು, ಬೇಡಿಕೆ ಹೆಚ್ಚಾದಂತೆ ಬೆಲೆಯೂ ಹೆಚ್ಚಾಗತೊಡಗಿದೆ. ಬೋಗಸೆ ಆಕಾರದ ಕಲ್ಲಂಗಡಿಗೆ 15 ರೂ. ಕೆಜಿಯಿಂದ ಆರಂಭವಾಗಿ 30-35ರೂ. ವರೆಗೆ ದರ ಇದೆ. ಪಟ್ಟಣದ ಬಸ್‌ ನಿಲ್ದಾಣ ಸುತ್ತಮುತ್ತ, ವಿವಿಧ ಸ್ಥಳಗಳಲ್ಲಿ ಕಲ್ಲಂಗಡಿ ಮಾರಾಟ ಜೋರಾಗಿದೆ.

ತಂಪು ಪಾನಿಯಕ್ಕೆ ಬೇಡಿಕೆ: ಸೂರ್ಯ ಮೇಲೇಳುತ್ತಿದ್ದಂತೆ ಚುರುಚುರು ಬಿಸಿಲಿನ ತಾಪ ಏರತೊಡಗಿದಂತೆ ನೆರಳು ಹುಡುಕಿ ಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಸುಡು ಬಿಸಲಿನಿಂದ ತಪ್ಪಿಸಿಕೊಂಡು ದೇಹ ತಂಪಾಗಿಸಿಕೊಳ್ಳುವುದು ಸಾಮಾನ್ಯವಾಗಿದೆ. ಪಟ್ಟಣದ ಬಹುತೇಕ ತಂಪು ಪಾನೀಯ ಅಂಗಡಿಯಲ್ಲಿ ಸೋಡಾ, ಶರಬತ್‌, ಮಜ್ಜಿಗೆ ಮುಂತಾದ ತಂಪು ಪಾನೀಯಗಳಿಗೆ ಜನ
ಮುಗಿ ಬೀಳುತ್ತಿದ್ದಾರೆ.

ಬಿಸಲಿನ ಪ್ರತಾಪ ಯಾವ ಮಟ್ಟಕ್ಕೆ ಏರಿದೆ ಎಂದರೆ ಕಾಂಕ್ರಿಟ್‌ ಕಟ್ಟಡ ಬಿಟ್ಟು ಮಣ್ಣಿನ ಮನೆಯತ್ತ ಓಡುವ ಸ್ಥಿತಿ ನಿರ್ಮಾಣವಾಗದೆ. ಕಾಂಕ್ರಿಟ್‌ ಕಟ್ಟಡ ಜತೆಗೆ ಸಿಂಟೆಕ್ಸ್‌ನಲ್ಲಿ ಭರಿಸಲಾದ ನೀರು ಸುಡುತ್ತಿದೆ. ಇಡೀ ಕಟ್ಟಡ ಕಾಯ್ದು ಕಂಡದಂತಾಗಿ ಫ್ಯಾನ್‌ನಿಂದ ಬರುವ ಬಿಸಿಗಾಳಿಯಿಂದ, ಬೆವರಿನ ವಾಸನೆಯಿಂದ ಮತ್ತೇ ಮತ್ತೆ ಸ್ನಾನ ಮಾಡಿ ತಂಪಾಗುವಂತೆ ಬಿಸಲಿನ ತಾಪ ಏರತೊಡಗಿದೆ. ರಾತ್ರಿ ಹಗಲೆನ್ನದೆ ಇಡೀ ದಿವಸ ಫ್ಯಾನ್‌ಗಳು ತಿರುಗುತ್ತಿದ್ದು, ಇದರಿಂದ ವಿದ್ಯುತ್‌ ಬಳಕೆ ಹೆಚ್ಚಲು ಕಾರಣವಾಗಿದೆ.

ಗಿಡ-ಮರಗಳಡಿ ಇರುವ ಕಟ್ಟಡಗಳು, ಗುಡಿ ಗುಂಡರಾಗಳಲ್ಲಿ ಜನರು ವಿಶ್ರಾಂತಿ ಪಡೆಯುತ್ತಿರುವುದು ಕಂಡು ಬರುತ್ತಿದೆ. ಕಾಂಕ್ರಿಟ್‌ ಮನೆಗಳು ಮತ್ತು ಸಿಂಟೆಕ್ಸ್‌ ನೀರು ಬಿಸಿಯಾಗದಂತೆ ಬಿಳಿ ಬಣ್ಣ ಬಡಿಯಲು ಮುಂದಾಗುತ್ತಿರುವುದು ಕಂಡು ಬಂದಿದೆ. ಹೀಗೆ ಬಿರು ಬಿಸಲಿನ ತಾಪ ದಿನೇ ದಿನೆ ಹೆಚ್ಚಾಗುತ್ತಿದೆ.

ಚನ್ನಕೇಶವುಲು ಗೌಡ

ಟಾಪ್ ನ್ಯೂಸ್

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.