ಸರ್ಕಾರ ಕೊಟ್ಟರೂ ಸಿಗದ ಸೌಲಭ್ಯ
ಪೂರ್ಣಗೊಳ್ಳದ ಹಿರೇಬಾಗೇವಾಡಿ ಕಾಲೇಜು ಕಟ್ಟಡಗ್ರಾಮೀಣ ಭಾಗದಲ್ಲಿ ಶಿಕ್ಷಣಕ್ಕೆ ಹಿನ್ನಡೆ
Team Udayavani, Nov 7, 2019, 5:38 PM IST
ಶಿವಾನಂದ ಮೇಟಿ
ಹಿರೇಬಾಗೇವಾಡಿ: ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಕಲ್ಪಿಸುವಲ್ಲಿ ಆಡಳಿತ ವ್ಯವಸ್ಥೆಯು ವಿಫಲವಾಗಿದ್ದರಿಂದ ಗ್ರಾಮದಲ್ಲಿ ಶಿಕ್ಷಣ ಹಿನ್ನಡೆ ಅನುಭವಿಸುವಂತಾಗಿದೆ.
ಇದಕ್ಕೆ ಹಿರೇಬಾಗೇವಾಡಿಯ ಸರ್ಕಾರಿ ಪದವಿ ಪೂರ್ವ ವಿದ್ಯಾಲಯವೇ ನಿದರ್ಶನ. ಕೇವಲ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಅವಲಂಬಿಸಿದ ಗ್ರಾಮಕ್ಕೆ ಸರ್ಕಾರಿ ಪ್ರೌಢ ಶಾಲೆ ಹಾಗೂ ಕಾಲೇಜುಗಳು ಬೇಕೆನ್ನುವುದು ಸ್ಥಳೀಯ ಕೆಲ ಶಿಕ್ಷಣ ಪ್ರೇಮಿಗಳ ಆಶಯವಾಗಿತ್ತು. ಈ ದಿಸೆಯಲ್ಲಿ ಕೆಲ ಉತ್ಸಾಹಿಗಳು ಪ್ರಯತ್ನಿಸಿದ್ದರಿಂದ ಹಂತ-ಹಂತವಾಗಿ ಸರ್ಕಾರಿ ಪ್ರೌಢಶಾಲೆ ಹಾಗೂ ಕಾಲೇಜು ಅಸ್ತಿತ್ವಕ್ಕೆ ಬಂದಿವೆ. ಆದರೆ ಸರ್ಕಾರದ ಅನುದಾನ ಲಭ್ಯವಿದ್ದರೂ ಸಕಾಲದಲ್ಲಿ ಸದ್ಬಳಕೆಯಾಗದೇ ವಿದ್ಯಾರ್ಥಿಗಳಿಗೆ ಕಟ್ಟಡ ಸೌಲಭ್ಯ ಸಿಗುತ್ತಿಲ್ಲ.
ಗ್ರಾಮದಲ್ಲಿ 2007ರಲ್ಲಿ ಸರ್ಕಾರಿ ಪಿ.ಯು. ಕಾಲೇಜು ಮಂಜೂರು ಮಾಡಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳನ್ನು ಪ್ರಾರಂಭಿಸಲಾಗಿತ್ತು. ಮೂರು ವಿಭಾಗಗಳಲ್ಲಿ ಸದ್ಯ ಒಟ್ಟು 149 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಭೌತಶಾಸ್ತ್ರ ಉಪನ್ಯಾಸಕರನ್ನು ಹೊರತು ಪಡಿಸಿ, ಉಳಿದ ಒಟ್ಟು 10 ಉಪನ್ಯಾಸಕರು ಶಿಕ್ಷಣ ಸೇವೆಯಲ್ಲಿದ್ದಾರೆ.
ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯವನ್ನು ಕಲ್ಪಿಸಲು ಸರ್ಕಾರ 2016-17ನೇ ಸಾಲಿನಲ್ಲಿ ಐ.ಆರ್.ಡಿ.ಎಫ್-19, ಯೋಜನೆಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ನೀಡಿದೆ. ನಾಲ್ಕು ಕೊಠಡಿಗಳು ಹಾಗೂ ಹೈಟೆಕ್ ಶೌಚಾಲಯಗಳ ನಿರ್ಮಾಣ ಕಾರ್ಯಕ್ಕೆ ಒಟ್ಟು 88.65 ಲಕ್ಷ ರೂ. ಅಂದಾಜು ಮೊತ್ತಕ್ಕೆ ಅನುಮೋದನೆ ನೀಡಿದೆ.
ಟೆಂಡರ್ ಆದ ಈ ಕಾಮಗಾರಿಯ ಕೆಲಸ 2017-18 ರಿಂದಲೂ ಆಮೆಗತಿಯಲ್ಲಿ ಸಾಗಿದ್ದು, ನಿಗದಿ ಪಡಿಸಿದ ಕಾಲಾವಧಿ ಮುಗಿದಿದ್ದು ಇನ್ನೂ ಕೆಲಸ ಪೂರ್ಣಗೊಂಡಿಲ್ಲ. ಈ ಬಗ್ಗೆ ವಿಚಾರಿಸಲು ದೂರವಾಣಿ ಕರೆ ಮಾಡಿದರೆ ಗುತ್ತಿಗೆದಾರ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎನ್ನುವುದು ಕಾಲೇಜಿನ ಪ್ರಾಚಾರ್ಯರು ಹಾಗೂ ಭೂಸೇನಾ ಸಹಾಯಕ ಎಂಜಿನಿಯರ ದೂರು.
ಸರ್ಕಾರ ಅನುದಾನ ನೀಡಿ ಎರಡು ವರ್ಷವಾದರೂ ಕಟ್ಟಡ ಕಾಮಗಾರಿ ಪೂರ್ಣಗೊಳ್ಳದೇ ನೂತನ ಕಟ್ಟಡದಲ್ಲಿ ಕಲಿಯುವ ಭಾಗ್ಯ ಇಲ್ಲಿನ ವಿದ್ಯಾರ್ಥಿಗಳಿಗೆ ಕೂಡಿ ಬಂದಿಲ್ಲ. ಈ ಬಗ್ಗೆ ಕಾಲೇಜಿನ ಅಧ್ಯಕ್ಷರಾಗಿರುವ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಗಮನ ಹರಿಸಿ ಕಟ್ಟಡ ಹಸ್ತಾಂತರ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡಬೇಕೆಂಬುದು ಸ್ಥಳೀಯರ ಅಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ