ಹಳ್ಳ ಹಿಡಿದ ಹಿರೇಹಳ್ಳ ಸೇತುವೆ ಫುಟ್‌ಪಾತ್‌

ಶಿಥಿಲಗೊಂಡ ಸೇತುವೆ ದುರಸ್ತಿಗೆ ನಿರ್ಲಕ್ಷé „ ಯಾಮಾರಿದ್ರೆ ಜೀವಕ್ಕೆ ಅಪಾಯ „ ತಿಪ್ಪೆಗುಂಡಿಯಂತಾದ ಹಳ್ಳದ ದಂಡೆ

Team Udayavani, Dec 13, 2019, 4:39 PM IST

13-December-20

„ಚಂದ್ರಶೇಖರ ಯರದಿಹಾಳ
ಸಿಂಧನೂರು:
ಇಲ್ಲಿನ ರಾಯಚೂರು ರಸ್ತೆಯಲ್ಲಿನ ಹಿರೇಹಳ್ಳದ ಮುಖ್ಯ ಸೇತುವೆಯ ಪಾದಚಾರಿ ರಸ್ತೆ ಸಂಪೂರ್ಣ ಕುಸಿಯುವಂತಾಗಿದ್ದು, ಪಾದಚಾರಿಗಳು, ವಾಹನ ಸವಾರರು ಯಾಮಾರಿದ್ರೆ ಜೀವಕ್ಕೆ ಸಂಚಕಾರ ತರುವಂತಿದೆ.

2000-2001ರಲ್ಲಿ ಕೆ.ಎಸ್‌.ಎಸ್‌.ಐ.ಪಿ. ಯೋಜನೆ ಅನುದಾನದಲ್ಲಿ ರಾಯಚೂರಿನ ಶಕ್ತಿನಗರದಿಂದ ಸಿಂಧನೂರುವರೆಗೂ ರಾಜ್ಯ ಹೆದ್ದಾರಿ ನಿರ್ಮಿಸಲಾಗಿದೆ. ಸಿಂಧನೂರು ನಗರ ಪ್ರವೇಶಿಸುವ ಹಿರೇಹಳ್ಳಕ್ಕೆ ಸೇತುವೆ ನಿರ್ಮಿಸಲಾಗಿತ್ತು. ಸೇತುವೆ ನಿರ್ಮಿಸಿ 19 ವರ್ಷವಾದರೂ ನಿರ್ವಹಣೆಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮುಂದಾಗದ್ದರಿಂದ ಸೇತುವೆ ಶಿಥಿಲಗೊಳ್ಳುತ್ತಿದೆ. ಅದರಲ್ಲೂ ಸೇತುವೆಯ ಪಾದಚಾರಿ ರಸ್ತೆ ಹಳ್ಳ ಹಿಡಿದಿದೆ.

ಭಾರೀ ವಾಹನ ಸಂಚಾರ: ರಾಜ್ಯ ಹೆದ್ದಾರಿಯ ಮುಖ್ಯ ಸೇತುವೆ ಇದಾಗಿದ್ದು, ನಿತ್ಯ ಸಾವಿರಾರು ವಾಹನಗಳು ಸೇತುವೆ ಮೇಲೆ ಸಂಚರಿಸುತ್ತವೆ. ಭಾರೀ ವಾಹನಗಳ ಓಡಾಟದಿಂದ ಸೇತುವೆ ಶಿಥಿಲಗೊಂಡು ಅಲ್ಲಲ್ಲಿ ಕುಸಿಯುವಂತಾಗಿದೆ. ಈ ಸೇತುವೆ ಬೀದರ, ಬೆಂಗಳೂರು, ಮೈಸೂರು, ಶ್ರೀರಂಗಪಟ್ಟಣ, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ ಸೇರಿದಂತೆ ಹೊರರಾಜ್ಯಗಳಾದ ಹೈದ್ರಾಬಾದ್‌, ಮಹಾರಾಷ್ಟ್ರ, ತೆಲಂಗಾಣ, ತಮಿಳುನಾಡಿಗೆ ಸಂಪರ್ಕ ಕಲ್ಪಿಸುತ್ತದೆ. ಹೀಗಾಗಿ ಸೇತುವೆ ಮೇಲೆ ಲೋಡ್‌ ತುಂಬಿದ ಭಾರೀ ವಾಹನಗಳು ಸಂಚರಿಸುತ್ತಿವೆ. ಆದರೆ ಹಿರೇಹಳ್ಳದ ಸೇತುವೆ ಶಿಥಿಲಗೊಂಡು ತೂಗುಯ್ನಾಲೆಯಂತಾಗಿದ್ದು, ಪಾದಚಾರಿಗಳು, ವಾಹನ ಸವಾರರು ಅಂಗೈಯಲ್ಲಿ ಜೀವ ಹಿಡಿದುಕೊಂಡು ಸಂಚರಿಸಬೇಕಿದೆ. ಇದೇ ಮಾರ್ಗವಾಗಿ ಪಿಡಬ್ಲ್ಯೂಡಿ ಕ್ಯಾಂಪಿನವರೆಗೂ ಅನೇಕ ಶಾಲಾ ಕಾಲೇಜುಗಳಿದ್ದು, ವಿದ್ಯಾರ್ಥಿಗಳು ನಿತ್ಯ ಭಯದಲ್ಲೇ ಸಂಚರಿಸಬೇಕಿದೆ.

ಜಾಲಿಗಿಡಗಳು: ಇನ್ನು ಹಿರೇಹಳ್ಳದ ಸುತ್ತಲು ಇರುವ ಖಾಲಿ ಜಾಗೆಗಳಲ್ಲಿ ಜಾಲಿಗಿಡಗಳು ಬೆಳೆದಿವೆ. ಹಿರೇಹಳ್ಳದ ದಂಡೆ ಮೇಲೆ ಪ್ಲಾಸ್ಟಿಕ ತ್ಯಾಜ್ಯ, ಕೋಳಿ ಮಾಂಸದ ತ್ಯಾಜ್ಯ ಎಸೆಯಲಾಗುತ್ತಿದೆ. ಒಂದು ಕಾಲದಲ್ಲಿ ಸಿಂಧನೂರು ಜನರ ದಾಹ ತಣಿಸುತ್ತಿದ್ದ ಹಿರೇಹಳ್ಳ ಇಂದು ತಿಪ್ಪೆಗುಂಡಿಯಂತಾಗಿದೆ. ಹಳ್ಳದ ಮೇಲೆ ಸಂಚರಿಸುವವರು ಮೂಗು ಮುಚ್ಚಿಕೊಂಡು ಹೋಗಬೇಕಿದೆ. ಅಕ್ರಮ ಮರಳು ಸಾಗಣೆಯಿಂದಾಗಿ ಹಳ್ಳದ ಒಡಲು ಬರಿದಾಗಿ ಜಾಲಿಗಿಡಗಳು ಬೆಳೆದಿವೆ. ಸೇತುವೆಯ ಕೆಳಭಾಗದಲ್ಲಿ ದೊಡ್ಡ ದೊಡ್ಡ ಕಂದಕಗಳು ಬಿದ್ದಿವೆ. ಆಸುಪಾಸಿನಲ್ಲಿ ಮರಳು ಸಾಗಾಣಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಮರಳು ಸಾಗಾಣಿಕೆ ತಡೆಗೆ ಅಧಿಕಾರಿಗಳು ಮುಂದಾಗುತ್ತಿಲ್ಲ. ಕೂಡಲೇ ಸಂಬಂಧಿ ಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಸೇತುವೆ ದುರಸ್ತಿಗೆ ಮುಂದಾಗಬೇಕು. ಹಳ್ಳದ ದಂಡೆಗೆ ತ್ಯಾಜ್ಯ ಎಸೆಯುವುದನ್ನು ತಡೆಯಬೇಕು. ಹಳ್ಳದಲ್ಲಿನ ಮರಳು ಸಾಗಾಟ ತಡೆಯಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.