ಮಳೆಗೆ ಮೈದುಂಬಿದ ವಿವಿ ಸಾಗರ
ಎರಡೇ ದಿನದಲ್ಲಿ ಜಲಾಶಯಕ್ಕೆ ಹರಿದು ಬಂತು 20 ಅಡಿ ನೀರುಮಳೆ ಮುಂದುವರಿದರೆ ಕೆಲವೇ ದಿನದಲ್ಲಿ ಭರ್ತಿ ಸಾಧ್ಯತೆ
Team Udayavani, Oct 24, 2019, 2:53 PM IST
ಹಿರಿಯೂರು: ಕೇವಲ ಎರಡೇ ದಿನಗಳಲ್ಲಿ ರಾತ್ರಿ ಕಳೆದು ಬೆಳಗಾಗುವುದರೊಳಗಾಗಿ ವಾಣಿವಿಲಾಸ ಸಾಗರ ಜಲಾಶಯಕ್ಕೆ ಸುಮಾರು 20 ಅಡಿ ನೀರು ಹರಿದು ಬಂದಿದೆ. ಜಲಾಶಯದ ನೀರಿನ ಮಟ್ಟ ಸುಮಾರು 90 ಅಡಿ ತಲುಪಿದ್ದು, ದಶಕಗಳ ನಂತರ ವಾಣಿವಿಲಾಸ ಸಾಗರ ಹಿಂದಿನ ಗತವೈಭವವನ್ನು ಮರಳಿ ಪಡೆಯುವ ಸೂಚನೆ ಕಂಡು ಬಂದಿದೆ.
ವಾಣಿವಿಲಾಸ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಸೋಮವಾರ ರಾತ್ರಿ ಹಾಗೂ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದಾಗಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಬಂದಿದ್ದು, ಸುಮಾರು ಎರಡು ದಶಕಗಳ ತರುವಾಯ ವಿವಿ ಸಾಗರಕ್ಕೆ ನಿರೀಕ್ಷೆಗೂ ಮೀರಿ ನೀರು ಹರಿದು ಬಂದಿದೆ. ಇದು ತಾಲೂಕಿನ ಕೃಷಿಕರು ಹಾಗೂ ಜನರಲ್ಲಿ ಸಂತಸ ಮೂಡಿಸಿದೆ.
2001-2002ರಲ್ಲಿ ರಾಜ್ಯಾದ್ಯಂತ ಬರಗಾಲ ತಾಂಡವವಾಡುತ್ತಿರುವಾಗ ಅಚ್ಚರಿ ಎಂಬಂತೆ ವಿವಿ ಸಾಗರ ಜಲಾಶಯದ ನೀರಿನ ಮಟ್ಟ 122 ಅಡಿ ತಲುಪಿತ್ತು. ಈಗ ಎರಡು ದಶಕಗಳ ತರುವಾಯ ಮತ್ತೆ ಗತವೈಭವ ಮರುಕಳಿಸುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿವೆ. ಈಗಾಗಲೇ ಜಲಾಶಯದಲ್ಲಿ 90 ಅಡಿಯಷ್ಟು ನೀರು ಸಂಗ್ರಹವಾಗಿರುವುದರಿಂದ ತಾಲೂಕಿನ ರೈತರಲ್ಲಿ ಹೊಸ ಭರವಸೆ ಮೂಡಿಸಿದೆ.
ಮೈದುಂಬಿಕೊಂಡಿರುವ ವಾಣಿವಿಲಾಸ ಸಾಗರ ಜಲಾಶಯ ವೀಕ್ಷಣೆಗೆ ಜನರು ಪ್ರವಾಹೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ಹೊಸದುರ್ಗ ತಾಲೂಕಿನ ಕೆಲ್ಲೋಡು, ಹೊಳಲ್ಕೆರೆ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದ ವೇದಾವತಿ ನದಿ ತುಂಬಿ ಹರಿಯುತ್ತಿದೆ. ಅಕ್ಟೋಬರ್ ತಿಂಗಳೊಂದರಲ್ಲೇ ವಿವಿ ಸಾಗರಕ್ಕೆ 20 ಅಡಿ ನೀರು ಹರಿದು ಬಂದಿರುವುದು ದಾಖಲೆ ನಿರ್ಮಿಸಿದಂತಾಗಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಇದೇ ರೀತಿ ಒಳಹರಿವು ಮುಂದುವರಿದರೆ ನೀರು ಸಂಗ್ರಹ ಮಟ್ಟ 100 ಅಡಿ ದಾಟುವುದರಲ್ಲಿ ಯಾವುದೇ ಅನುಮಾನವಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ