9 ವರ್ಷದ ಬಳಿಕ ವಿವಿ ಸಾಗರಕ್ಕೆ 100 ಅಡಿ ನೀರು

ತಳ ಮಟ್ಟ ತಲುಪಿದ್ದ ಜಲಾಶಯಕ್ಕೀಗ ಜೀವ ಕಳೆ ■ ಉತ್ತಮ ಮಳೆಯಾಗಿದ್ದರಿಂದ ಹರಿದು ಬರುತ್ತಿದೆ ನೀರು

Team Udayavani, Dec 12, 2019, 1:39 PM IST

12-December-12

ಸಿದ್ಧಗಂಗಾ ಶಿವಶಂಕರ್‌

ಹಿರಿಯೂರು: ಬರೋಬ್ಬರಿ 9 ವರ್ಷಗಳ ಬಳಿಕ ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ 100 ಅಡಿ ನೀರು ಹರಿದು ಬಂದಿದೆ. ಜಲಾಶಯದ ಕೋಡಿ ಮಟ್ಟ 130 ಅಡಿ ಇದ್ದರೆ, ತೂಬಿನ ಮಟ್ಟ 60 ಅಡಿ ಇದೆ. ತಾಲೂಕಿನಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ವಾಣಿವಿಲಾಸ ಸಾಗರದ ಮೇಲ್ಭಾಗದಲ್ಲಿರುವ ಹೊಸದುರ್ಗ ತಾಲೂಕು, ಚಿಕ್ಕಮಗಳೂರಿನ ಕಡೂರು, ಬೀರೂರು , ಅಜ್ಜಂಪುರ ತಾಲೂಕುಗಳ ಕೆರೆ ಕಟ್ಟೆಗಳು ಕೋಡಿ ಒಡೆದಿದ್ದವು. ಇದರಿಂದಾಗಿ ವಾಣಿ ವಿಲಾಸ ಸಾಗರಕ್ಕೆ ಹೆಚ್ಚಿನ ನೀರು ಬಂದಿದೆ. ಅಲ್ಲದೆ ಕಳೆದ ಮೂರ್‍ನಾಲ್ಕು ವರ್ಷಗಳಿಗಿಂತ ಈ ಬಾರಿ ಜಲಾಶಯದ ಮೇಲ್ಭಾಗದಲ್ಲಿ ಉತ್ತಮ ಮಳೆಯಾದ ಕಾರಣ ವಿವಿ ಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬಂದಿದೆ.

ಮಳೆಗಾಲ ಆರಂಭವಾಗುವುದಕ್ಕಿಂತ ಮುನ್ನ ಜಲಾಶಯದಲ್ಲಿ ಕೇವಲ 61. 4 ಅಡಿ ನೀರಿತ್ತು. ತಾಲೂಕಿನಲ್ಲಿ ನೀರಿನ ಹಾಹಾಕಾರ ಉಂಟಾಗಿ ಜನ-ಜಾನುವಾರಗಳಿಗೆ ಕುಡಿಯಲು ನೀರಿಲ್ಲದೆ ಪರಿತಪಿಸುವಂತಹ ಸ್ಥಿತಿ ನಿರ್ಮಾಣವಾಗಿತ್ತು. ನಂತರ ವರುಣ ಕೃಪೆ ತೋರಿದ್ದರಿಂದ ಉತ್ತಮ ಮಳೆಯಾಗಿ ವಿವಿ ಸಾಗರದಲ್ಲಿ 100 ಅಡಿ ನೀರು ಸಂಗ್ರಹಗೊಳ್ಳುವಂತಾಗಿದೆ.

ವಾಣಿವಿಲಾಸ ಸಾಗರ 30 ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರುಣಿಸುತ್ತದೆ. ಅಡಿಕೆ, ತೆಂಗು ಬೆಳೆಗಳಿಗೆ ಆಧಾರವಾಗಿದೆ. ಇಷ್ಟೇ ಅಲ್ಲ, ಹಿರಿಯೂರು ನಗರ, ಚಿತ್ರದುರ್ಗ, ಚಳ್ಳಕೆರೆ ತಾಲೂಕುಗಳಿಗೆ ಇಲ್ಲಿಂದಲೇ ನೀರು ಪೂರೈಕೆಯಾಗುತ್ತಿದೆ.

ವೇದಾವತಿ ನದಿಗೆ ಅಡ್ಡಲಾಗಿ ವಾಣಿವಿಲಾಸ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. 2015ರಲ್ಲಿ 81.50 ಅಡಿ ನೀರು ಬಂದಿದ್ದನ್ನು ಬಿಟ್ಟರೆ ಇತ್ತೀಚಿನ ವರ್ಷಗಳಲ್ಲಿ ಇಷ್ಟೊಂದು ನೀರು ಸಂಗ್ರಹಗೊಂಡಿದ್ದು ಇದೇ ಮೊದಲು. 2016ರಲ್ಲಿ 71 ಅಡಿ,
2017ರಲ್ಲಿ 66 ಅಡಿ ನೀರಿನ ಸಂಗ್ರಹವಿತ್ತು. 2019ರ ಮೇ ತಿಂಗಳವರೆಗೆ ನೀರು ಖಾಲಿಯಾಗಿ ಕನಿಷ್ಠ ಮಟ್ಟ 61 ಅಡಿಗೆ ಬಂದು ಡೆಡ್‌ ಸ್ಟೋರೇಜ್‌ ಹಂತ ತಲುಪಿತ್ತು.

ಮಳೆಗಾಲ ಆರಂಭವಾದ ನಂತರ ಜಲಾಶಯಕ್ಕೆ ನೀರು ಬರಲು ಪ್ರಾರಂಭವಾಯಿತು. ಜೂನ್‌ನಿಂದ ಇಲ್ಲಿಯವರೆಗೆ 40 ಅಡಿಗಿಂತ ಹೆಚ್ಚು ನೀರು ಬಂದಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಕಳೆದ ಹತ್ತು ದಿನಗಳಿಂದ 2 ಅಡಿ ನೀರು ಹರಿದು ಬಂದಿದೆ. ಮಾರ್ಚ್‌ 30ರ ತನಕ ಪ್ರತಿ ದಿನ ಬೆಟ್ಟದತಾವರೆ ಕೆರೆಯಿಂದ ವಿವಿ ಸಾಗರಕ್ಕೆ 460 ಕ್ಯೂಸೆಕ್‌ ನೀರು ಹರಿದು ಬರಲಿದೆ.

ಸತತ ಬರಗಾಲದಿಂದ 4 ಲಕ್ಷ ತೆಂಗಿನಮರಗಳು ಒಣಗಿ ರೈತರು ಸಂಕಷ್ಟದಲ್ಲಿದ್ದಾರೆ. ಈಗ ನೀರು ಸಂಗ್ರಹಗೊಳ್ಳುತ್ತಿರುವುದರಿಂದ ನೀರಾವರಿ ಇಲಾಖೆ ಅಧಿಕಾರಿಗಳು ವಿವಿ ಸಾಗರದ ಎಡ ಮತ್ತು ಬಲ ನಾಲೆಗಳನ್ನು ಸ್ವತ್ಛಗೊಳಿಸಬೇಕು. ತೂಬುಗಳನ್ನು ರಿಪೇರಿ ಮಾಡಬೇಕು. ನಾಲೆಗಳಿಗೆ ಅಕ್ರಮ ಪಂಪ್‌ಸೆಟ್‌ ಅಳವಡಿಸಿ ನೀರು ಕಳ್ಳತನ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
. ಕೆ.ಸಿ. ಹೊರಕೇರಪ್ಪ,
ತಾಲೂಕು ರೈತ ಸಂಘದ ಗೌರವಾಧ್ಯಕ್ಷ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.