ಧ್ಯಾನ್‌ಚಂದ್‌ ವ್ಯಕ್ತಿತ್ವ ಮಾದರಿ

ಮೂರು ಒಲಿಂಪಿಕ್‌ಗಳಲ್ಲಿ ದೇಶಕ್ಕೆ ಚಿನ್ನ ತಂದ ಮಹಾನ್‌ ಕ್ರೀಡಾಪಟು: ಧರಣೇಂದ್ರಯ್ಯ

Team Udayavani, Aug 30, 2019, 3:41 PM IST

30-Agust-28

ಹಿರಿಯೂರು: ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ದೈಹಿಕ ಶಿಕ್ಷಕ ಆರ್‌. ಶಿವಶಂಕರ ಮಠದ್‌ ಅವರನ್ನು ಸನ್ಮಾನಿಸಲಾಯಿತು.

ಹಿರಿಯೂರು: ವಿಶ್ವ ಶ್ರೇಷ್ಠ ಹಾಕಿ ಆಟಗಾರ ಧ್ಯಾನಚಂದ್‌ರವರ ವ್ಯಕ್ತಿತ್ವ, ಆದರ್ಶ ಗುಣಗಳು ಮತ್ತು ಅವರ ದೇಶಪ್ರೇಮ ದೇಶದ ಯುವ ಸಮೂಹಕ್ಕೆ ಮಾದರಿ ಎಂದು ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಡಿ. ಧರಣೇಂದ್ರಯ್ಯ ಹೇಳಿದರು.

ನಗರದ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಧ್ಯಾನಚಂದ್‌ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸೈನಿಕರಾಗಿದ್ದ ಧ್ಯಾನ್‌ಚಂದ್‌, ಶ್ರದ್ಧೆ, ಆಸಕ್ತಿಯಿಂದ ಹಾಕಿ ಆಟವನ್ನು ಕಲಿತು ಆಟದ ನೈಪುಣ್ಯ ರೂಢಿಸಿಕೊಂಡು ಭಾರತಕ್ಕೆ ಮೂರು ಒಲಿಂಪಿಕ್‌ಗಳಲ್ಲಿ ಬಂಗಾರದ ಪದಕವನ್ನು ತಂದುಕೊಟ್ಟ ಮಹಾನ್‌ ಕ್ರೀಡಾಪಟುವನ್ನು ನೆನೆಯುವುದು ಅತ್ಯಂತ ಸೂಕ್ತ. ಅವರ ಆಟವನ್ನು ನೋಡಿದ ಇತರೆ ರಾಷ್ಟ್ರದವರು ನೀನು ಭಾರತದಲ್ಲಿ ಸಾಧಾರಣ ಸೈನಿಕನಾಗಿದ್ದೀಯಾ, ನಮ್ಮ ದೇಶದ ಪರ ಆಟವಾಡು, ಸೈನ್ಯದ ಮೇಜರ್‌ ಹುದ್ದೆಯನ್ನೇ ನೀಡುತ್ತವೆಂದು ಆಹ್ವಾನ ನೀಡಿದ್ದರು. ಧ್ಯಾನಚಂದ್‌ರವರು ಅದನ್ನು ತಿರಸ್ಕರಿಸಿ ನನ್ನ ಆಟ ಭಾರತಕ್ಕೆ ಮಾತ್ರ ಮೀಸಲು ಎಂದು ಹೇಳಿ ದೇಶಪ್ರೇಮ ಮೆರೆದಿದ್ದರು. ಅಲ್ಲದೆ ಧ್ಯಾನ್‌ಚಂದ್‌ ಅವರ ಸನ್ಮಾನ ಸಮಾರಂಭದಲ್ಲಿ ಭಾರತದ ಧ್ವಜ ಇಲ್ಲದ್ದಕ್ಕೆ ಸನ್ಮಾನವನ್ನು ತಿರಸ್ಕರಿಸಿದ್ದರು. ಇಂತಹ ಮಹಾನ್‌ ವ್ಯಕ್ತಿಯ ಜನ್ಮದಿನವನ್ನು ಭಾರತ ಸರ್ಕಾರ ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಣೆ ಅರ್ಥಪೂರ್ಣ ಎಂದರು.

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಹಿರಿಯ ದೈಹಿಕ ಶಿಕ್ಷಕ ಆರ್‌. ಶಿವಶಂಕರ ಮಠದ್‌ ಅವರನ್ನು ಸನ್ಮಾನಿಸಲಾಯಿತು. ಡಾ| ಸಿದ್ಧಲಿಂಗಯ್ಯ, ಎಚ್. ತಿಪ್ಪೇಸ್ವಾಮಿ, ಪ್ರೊ| ಜನಾರ್ದನ, ಪ್ರೊ| ರಾಮಪ್ಪ ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ: ತಿಪ್ಪೇಸ್ವಾಮಿ
ರಾಷ್ಟ್ರಪ್ರೇಮ, ರಾಷ್ಟ್ರೀಯ ಭಾವೈಕ್ಯತೆ, ಏಕತೆ, ಐಕ್ಯತೆ ಬೆಳೆಸಲು ಕ್ರೀಡೆ ಸಹಕಾರಿ. ಯುವಕ-ಯುವತಿಯರು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಪರಸ್ಪರ ಸಹಕಾರ ಮನೋಭಾವನೆ, ತಿಳಿವಳಿಕೆ, ನಾಯಕತ್ವದ ಗುಣ, ಧೈರ್ಯ, ಸಾಹಸ ಗುಣಗಳನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಬಹುದು. ಧ್ಯಾನಚಂದ್‌ ವ್ಯಕ್ತಿತ್ವ ಹಾಗೂ ಆದರ್ಶ ಗುಣ ಹಾಗೂ ಕ್ರೀಡಾ ಮನೋಭಾವವನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್. ತಿಪ್ಪೇಸ್ವಾಮಿ ಕರೆ ನೀಡಿದರು.

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.