ಸರ್ಕಾರಿ ನೌಕರರ ಸಂಘದ ಚುನಾವಣಾ ಫಲಿತಾಂಶ ಪ್ರಕಟ
Team Udayavani, Jun 14, 2019, 5:05 PM IST
ಹಿರಿಯೂರು: ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರರಾಗಿ ಆಯ್ಕೆಯಾದವರು ಬೆಂಬಲಿಗರೊಂದಿಗೆ ಸಂಭ್ರಮಿಸಿದರು.
ಹಿರಿಯೂರು: ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಆಯ್ಕೆಗೆ ಗುರುವಾರ ನಗರದ ತಾಲೂಕು ಕಚೇರಿ ಆವರಣದಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಚುನಾವಣೆ ನಡೆಯಿತು. ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ಶಿಕ್ಷಕರು ಮತ್ತು ಉಪನ್ಯಾಸಕರು ಮತದಾನ ಮಾಡಿದರು. ಸಂಜೆ ಮತಗಳ ಎಣಿಕೆ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಯಿತು.
ಪ್ರಾಥಮಿಕ ಶಾಲಾ ವಿಭಾಗದ 4 ಸ್ಥಾನಗಳಿಗೆ 9 ಶಿಕ್ಷಕರು ಕಣದಲ್ಲಿದ್ದರು. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಯಬ್ಬೆ ಪಾಳ್ಯದ ಮಂಜುನಾಥ್, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪುಟ್ಟಯ್ಯನಕಟ್ಟೆಯ ಎಚ್. ಕೃಷ್ಣಮೂರ್ತಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಹಟ್ಟಿ-ಮ್ಯಾಕ್ಲೂರಹಳ್ಳಿಯ ಆರ್. ಟಿ. ಪರಮೇಶ್ವರಪ್ಪ , ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಬ್ಬೂರು ಫಾರಂನ ಬಿ. ರಮೇಶ್ ಆಯ್ಕೆಯಾದರು
ಪ್ರೌಢಶಾಲಾ ವಿಭಾಗದ ಎರಡು ಸ್ಥಾನಗಳಿಗೆ ಮೂರು ಶಿಕ್ಷಕರು ಸ್ಪರ್ಧಿಸಿದ್ದರು. ಸರ್ಕಾರಿ ಪ್ರೌಢಶಾಲೆ ಪಿಲಾಲಿಯ ಮಂಜುನಾಥ್ ಹಾಗೂ ಸರ್ಕಾರಿ ಪ್ರೌಢಶಾಲೆ ಹರಿಯಬ್ಬೆಯ ಶಿವಕುಮಾರ್ ಗೆಲುವಿನ ನಗು ಬೀರಿದರು. ಪದವಿಪೂರ್ವ ಕಾಲೇಜು ವಿಭಾಗದ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು ಕಣದಲ್ಲಿದ್ದರು. ದೇವರಕೊಟ್ಟ ಸರ್ಕಾರಿ ಪದವಿಪೂರ್ವ ಕಾಲೇಜಿನ ವೆಂಕಟೇಶ್ ಆಯ್ಕೆಯಾದರು.
ಎಸ್ಎಸ್ಎ ವಿಭಾಗದ ಒಂದು ಸ್ಥಾನಕ್ಕೆ ಐದು ಜನ ಸ್ಪರ್ಧೆ ಮಾಡಿದ್ದರು. ಹಿರಿಯೂರು ಬಿಆರ್ಸಿ ಕೇಂದ್ರದ ಬಿಆರ್ಪಿ ಶ್ರೀನಿವಾಸ್ ಆಯ್ಕೆಗೊಂಡರು. ನ್ಯಾಯಾಂಗ ಇಲಾಖೆಯ ಒಂದು ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದು, ರಮೇಶ್ ಆಯ್ಕೆಯಾಗಿದ್ದಾರೆ.
ತಾಲೂಕು ಪಂಚಾಯತ್ದ ಎರಡು ಸ್ಥಾನಗಳಿಗೆ ಮೂರು ಜನ ಸ್ಪರ್ಧಿಸಿದ್ದರು. ಶಿವಮೂರ್ತಿ ಹಾಗೂ ನಜೀರ್ ಅಹಮದ್ ಆಯ್ಕೆಯಾದರು. ಲೋಕೋಪಯೋಗಿ ಇಲಾಖೆಯ ಒಂದು ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದರು. ಆಂಥೋನಿ ಆಯ್ಕೆಯಾದರು. ಆರೋಗ್ಯ ಇಲಾಖೆಯ ಐದು ಸ್ಥಾನಗಳಿಗೆ ಆರು ಜನ ಕಣದಲ್ಲಿದ್ದರು. ಅಂತಿಮವಾಗಿ ತಿಪ್ಪೇಸ್ವಾಮಿ, ನಟರಾಜ್, ರಂಗಸ್ವಾಮಿ, ರಮೇಶ್, ಯಶೋಧರ ಗೆಲುವು ಸಾಧಿಸಿದರು. ಒಟ್ಟು ಎಂಟು ಇಲಾಖೆಗಳಿಂದ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆಯಿತು. ಕೆಲವರು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಯಾಗಿ ಎಲ್. ಜಯಣ್ಣ ಕಾರ್ಯನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ