ಹಿರಿಯೂರು ನಗರಸಭೆಯಲ್ಲಿ ಮೈತ್ರಿ ಮೇಲುಗೈ

ಬಹುಮತದೊಂದಿಗೆ ಕಾಂಗ್ರೆಸ್‌-ಜೆಡಿಎಸ್‌ಗೆ ಅಧಿಕಾರದ ಚುಕ್ಕಾಣಿ•ಬಿಜೆಪಿ ಕೈಹಿಡಿಯದ ಮತದಾರ

Team Udayavani, Jun 1, 2019, 11:58 AM IST

Udayavani Kannada Newspaper

ಚಿತ್ರದುರ್ಗ: ತೀವ್ರ ಕುತೂಹಲ ಮೂಡಿಸಿದ್ದ ಹಿರಿಯೂರು ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷಗಳು ಸರಳ ಬಹುಮತದೊಂದಿಗೆ ಅಧಿಕಾರ ಚುಕ್ಕಾಣಿ ಹಿಡಿಯಲಿದೆ.

ಕಾಂಗ್ರೆಸ್‌ 13, ಜೆಡಿಎಸ್‌-3, ಬಿಜೆಪಿ-6 ಹಾಗೂ ಪಕ್ಷೇತರರು ಒಟ್ಟು 9 ಸದಸ್ಯರು ಆಯ್ಕೆಯಾಗಿದ್ದಾರೆ. ಹಿರಿಯೂರು ನಗರಸಭೆಯಲ್ಲಿ ಒಟ್ಟು 31 ಸದಸ್ಯರಿದ್ದು ಕಾಂಗ್ರೆಸ್‌ 13ರಲ್ಲಿ ಜಯಭೇರಿ ಬಾರಿಸಿದರೆ, ಮೈತ್ರಿ ಜೆಡಿಎಸ್‌ ಕೇವಲ 3 ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ. ಅಲ್ಲದೆ ದಿನೇ ದಿನೇ ಜೆಡಿಎಸ್‌ ವರ್ಚಸ್ಸು ಕುಗ್ಗುತ್ತಿರುವುದು ಕಾರ್ಯಕರ್ತರಲ್ಲಿ ಆತಂಕ ಸೃಷ್ಠಿಸಿದೆ.

ಬಿಜೆಪಿಗೆ ಸಮಾಧಾನ: ಹಾಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರಿಗೆ ನಗರಸಭೆ ಚುನಾವಣೆಯಲ್ಲಿ ಮುಖಭಂಗವಾಗಿದ್ದರೂ ನಗರಸಭೆ ಇತಿಹಾಸದಲ್ಲೇ ಬಿಜೆಪಿ 6 ಸ್ಥಾನಗಳನ್ನು ಗೆಲ್ಲುವ ಮೂಲಕ ಖಾತೆ ತೆರೆದಿರುವುದು ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಕೊಂಚ ಸಮಾಧಾನ ತಂದಿದೆ. ಲೋಕಸಭಾ ಚುನಾವಣೆಯಲ್ಲಿ ಹಿರಿಯೂರು ಕ್ಷೇತ್ರವು ಬಿಜೆಪಿಗೆ ಹೆಚ್ಚಿನ ಮತಗಳನ್ನು ನೀಡಿತ್ತು. ಆದರೆ ನಗರಸಭೆ ಚುನಾವಣೆಯಲ್ಲಿ ಸಂಪೂರ್ಣ ನೆಲಕಚ್ಚುವ ಮೂಲಕ ಕಾರ್ಯಕರ್ತರಲ್ಲಿ ನಡುಕ ಆರಂಭವಾಗಿದೆ.

ಪಕ್ಷೇತರರ ಪಾರುಪತ್ಯ: ಪಕ್ಷೇತರರು 9 ಮಂದಿ ಆಯ್ಕೆಯಾಗುವ ಮೂಲಕ ಪಾರುಪತ್ಯ ಮೆರೆದಿದ್ದಾರೆ. ಕಳೆದ ಮೇ 29 ರಂದು ಹಿರಿಯೂರು ನಗರಸಭೆಗೆ ತುರುಸಿನ ಚುನಾವಣೆ ನಡೆದಿತ್ತು. ಹೇಗಾದರೂ ಮಾಡಿ ಅಧಿಕಾರ ಹಿಡಿಯುವ ಹುಮ್ಮಸ್ಸಿನಲ್ಲಿದ್ದ ಬಿಜೆಪಿ ಅಕ್ಷರಶಃ ಮುಖಭಂಗವಾಗಿದೆ.

ಹಾಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರೇ ಬಹುತೇಕ ವಾರ್ಡ್‌ಗಳಲ್ಲಿ ಮಿಂಚಿನ ಸಂಚಾರ ಮಾಡಿ ಭರ್ಜರಿ ಮತ ಪ್ರಚಾರ ನಡೆಸಿದ್ದರು. ಅಲ್ಲದೆ ಲೋಕಸಭಾ ಚುನಾವಣೆಯ ಫಲಿತಾಂಶ ಮುಂದಿಟ್ಟು ಹಾಗೂ ಮೋದಿ ಹೆಸರೇಳಿ ಮತ ಭಿಕ್ಷೆ ಕೋರಿದ್ದರು. ಶಾಸಕಿ ಚುನಾವಣೆಯ ನೇತೃತ್ವ ವಹಿಸಿದ್ದು ಮತದಾರರು ಸಂಪೂರ್ಣ ತಿರಸ್ಕರಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ನೂತನ ಸಂಸದರು ಗಳಿಸಿದ ಮತಗಳ ತುಲನೆ ಮಾಡಿದರೆ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ಕಳಪೆ ಸಾಧನೆ ಮಾಡಿದೆ. ಇದು ಬಿಜೆಪಿ ನಾಯಕರು ಮತ್ತು ಹಾಲಿ ಶಾಸಕರಿಗೆ ಎಚ್ಚರಿಕೆ ಗಂಟೆಯಾಗಿದೆ.

ನೆಲ ಕಚ್ಚಿದ ಜೆಡಿಎಸ್‌: ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷಕ್ಕೆ ತನ್ನದೇ ಆದ ನೆಲೆ ಇದೆ. ಜಿಲ್ಲಾಧ್ಯಕ್ಷ ಡಿ.ಯಶೋಧರ ಹಿರಿಯೂರು ನಿವಾಸಿ, 2ನೇ ನಾಯಕ ಎಂ.ಜಯಣ್ಣ ಕೂಡ ಹಿರಿಯೂರು ನಿವಾಸಿ. ಆದರೂ ಜೆಡಿಎಸ್‌ ಕೇವಲ 3 ಸ್ಥಾನದಲ್ಲಿ ಗೆದ್ದಿರುವುದು ಆ ಮುಖಂಡರಿಗೆ ರಾಜಕೀಯವಾಗಿ ದೊಡ್ಡ ಪೆಟ್ಟನ್ನು ಮತದಾರರು ನೀಡಿದ್ದಾರೆ.

ಕೈ-ತೆನೆ ಮೈತ್ರಿ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಾಲುದಾರ ಪಕ್ಷವಾಗಿ ಹೊಂದಾಣಿಕೆ ಮಾಡಿಕೊಳ್ಳಲಾಗಿತ್ತು. 31 ಸ್ಥಾನಗಳಲ್ಲಿ ಜೆಡಿಎಸ್‌ ಪಕ್ಷಕ್ಕೆ 9 ಸೀಟು ಹಂಚಿಕೆ ಮಾಡಲಾಗಿತ್ತು. 9 ವಾರ್ಡ್‌ ಗಳಲ್ಲಿ 1 ಅವಿರೋಧ ಆಯ್ಕೆಯಾಗಿತ್ತು. ಉಳಿದ 8 ವಾರ್ಡ್‌ ಗಳಲ್ಲಿ 2 ಸೀಟು ಗೆಲ್ಲುವ ಮೂಲಕ ತೀರಾ ಕಳಪೆ ಸಾಧನೆ ಮಾಡಿದೆ.

ಕಾಂಗ್ರೆಸ್‌ 22 ವಾರ್ಡ್‌ ಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. 22ರಲ್ಲಿ 13 ಸೀಟು ಗೆಲ್ಲುವ ಮೂಲಕ ಮಾನ ಉಳಿಸಿಕೊಂಡಿದೆ. ಉಳಿದ ವಾರ್ಡ್‌ಗಳಲ್ಲಿ ಮಾಜಿ ಶಾಸಕ ಡಿ.ಸುಧಾಕರ್‌ ಅವರಿಗೆ ಸಡ್ಡೊಡೆದು ಬಂಡಾಯವೆದ್ದು ಪಕ್ಷೇತರಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ.

ಸೋತ ಘಟಾನುಘಟಿಗಳು: ಜಿದ್ದಾಜಿದ್ದಿ ನಗರಸಭೆ ಚುನಾವಣೆಯಲ್ಲಿ ಘಟಾನುಘಟಿ ಸ್ಥಳೀಯ ಮುಖಂಡರು ಸೋತು ಸುಣ್ಣವಾಗಿದ್ದಾರೆ. ಬಿಜೆಪಿಯ ಬೆಂಬಲಿತ ಮಾಜಿ ನಗರಸಭಾಧ್ಯಕ್ಷೆ ಮಂಜುಳಾ, ಮಾಜಿ ಪುರಸಭಾ ಉಪಾಧ್ಯಕ್ಷ ರವಿಚಂದ್ರನಾಯ್ಕ, ಶಾಸಕರ ಪರಮಾಪ್ತ ನಿಕಟಪೂರ್ವ ನಗರಸಭಾ ಸದಸ್ಯ ಪ್ರೇಮ್‌ ಕುಮಾರ್‌ ಪರಾಭವಗೊಂಡಿದ್ದಾರೆ.

ಹೆಚ್ಚು ಲೀಡ್‌ ಪಡೆದ ಯುವಕ: ನಗರಸಭಾ ಚುನಾವಣೆಯಲ್ಲಿ ಹರಿಯಬ್ಬೆ ಗ್ರಾಮದ ಮೂಲ ನಿವಾಸಿ ಎಚ್.ಎಂ. ಗುಂಡೇಶ್‌ 5 ವಾರ್ಡ್‌ನಲ್ಲಿ ಸ್ಪರ್ಧಿಸಿ ಬಿಜೆಪಿಯ ಅಭ್ಯರ್ಥಿ ವಿರುದ್ಧ 349 ಮತಗಳ ಲೀಡ್‌ ಪಡೆದು ಆಯ್ಕೆಯಾಗಿರುವುದು ಈ ಸಲದ ಚುನಾವಣೆಯ ದಾಖಲೆ ಲೀಡ್‌ ಆಗಿದೆ.

ಟಾಪ್ ನ್ಯೂಸ್

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.