ಬಸವಣ್ಣನವರಿಗಿತ್ತು ಮಹಿಳಾ ಪರ ಕಾಳಜಿ

ಸ್ತ್ರೀ ಸಮಾನತೆ-ಹಕ್ಕುಗಳಿಗಾಗಿ ಹೋರಾಟ ನಡೆಸಿದ ಮೊದಲ ದಾರ್ಶನಿಕರು: ಮುರುಘಾ ಶ್ರೀ

Team Udayavani, Aug 29, 2019, 10:26 AM IST

29-Agust-4

ಹೊಳಲ್ಕೆರೆ: ತಾಲೂಕಿನ ಚೀರನಹಳ್ಳಿ ಗ್ರಾಮದಲ್ಲಿ ನಡೆದ 'ಕಲ್ಯಾಣ ದರ್ಶನ' ಕಾರ್ಯಕ್ರಮದಲ್ಲಿ ಡಾ| ಶಿವಮೂರ್ತಿ ಮುರುಘಾ ಶರಣರು ಆಶೀರ್ವಚನ ನೀಡಿದರು.

ಹೊಳಲ್ಕೆರೆ: ಹನ್ನೆರಡನೇ ಶತಮಾನದಲ್ಲಿ ಮೂಢನಂಬಿಕೆ, ಕಂದಾಚಾರಕ್ಕೆ ಬಲಿಯಾಗುತ್ತಿದ್ದ ಮಹಿಳೆಯರಿಗೆ ಶೋಷಣೆ ಮುಕ್ತ್ತ ಬದುಕು ಹಾಗೂ ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ನಡೆಸಲು ಮನೆ ತೊರೆದ ದಾರ್ಶನಿಕ ಬಸವಣ್ಣನವರಾಗಿದ್ದಾರೆ ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಶ್ರಾವಣ ಮಾಸದ ಅಂಗವಾಗಿ ಚಿತ್ರದುರ್ಗ ಮುರುಘಾ ಮಠದ ವತಿಯಿಂದ ತಾಲೂಕಿನ ಚೀರನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದ ‘ಕಲ್ಯಾಣ ದರ್ಶನ’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶರಣರು ಆಶೀರ್ವಚನ ನೀಡಿದರು.

ಸಮಾಜದಲ್ಲಿರುವ ಬಹುತೇಕ ಜನರು ಸ್ವಾರ್ಥ ಸಾಧನೆಗಾಗಿ ಹವಣಿಸುತ್ತಿದ್ದಾರೆ. ಅದು ವೈಯಕ್ತಿಕ ಹಿತಾಸಕ್ತಿಯಾದರೆ, ಸಮಾಜ ಚಿಂತಕರಲ್ಲಿ, ದಾರ್ಶನಿಕರಲ್ಲಿ, ಮಹಾಪುರುಷರಲ್ಲಿ ಸಮಾಜಮುಖೀ ಚಿಂತನೆ ಇರುತ್ತದೆ ಎಂದರು.

ಮಹಿಳೆಯರ ಶೋಷಿತ ಬದುಕು ಬಸವಣ್ಣನವರನ್ನು ಸ್ತ್ರೀ ಪರವಾದ ಧೋರಣೆ ಹೊಂದುವಂತೆ ಮಾಡಿತ್ತು. ಅವರದು ಜನಪರವಾದ ನಿಲುವು, ಸಮಾಜಮುಖೀ ಚಿಂತನೆ. ಪುರುಷ ಮೇಲು, ಸ್ತ್ರೀ ಕೀಳು ಎಂಬ ಭಾವನೆ ಸರಿಯಲ್ಲ. ಅದನ್ನು ಹೊಗಲಾಡಿಸಲು ಬಸವಣ್ಣ ಸಮ ಸಮಾಜ ಸ್ಥಾಪಿಸಿ ಪ್ರತಿಯೊಬ್ಬರು ಸಮಾನರು ಎನ್ನುವ ಸಂದೇಶವನ್ನು ಬಿತ್ತರಿಸಿದ್ದಾರೆ ಎಂದು ತಿಳಿಸಿದರು.

ಮಹಿಳಾ ಸಬಲೀಕರಣ ಮತ್ತು ವ್ಯಕ್ತಿತ್ವ ವಿಕಸನದ ಕುರಿತು ಮಾತನಾಡಿದ ಮುರುಘಾ ಶರಣರು, ಮಾನವ ಹಕ್ಕುಗಳಲ್ಲಿ ಮಹಿಳಾ ಹಕ್ಕುಗಳಿಗೆ ಧಕ್ಕೆಯಾಗಬಾರದು. ನಾನು ಪುರುಷನೆಂದು ನನಗೆ ಉಪನಯನ ಮಾಡಿದಿರಿ, ಆದರೆ ಅಕ್ಕ ನಾಗಮ್ಮಳಿಗೆ ಏಕೆ ಉಪನಯನ ಮಾಡಲಿಲ್ಲ ಎಂದು ಪ್ರಶ್ನಿಸುತ್ತಾರೆ ಬಸವಣ್ಣ. ಬಾಲ್ಯದಲ್ಲೇ ಪ್ರಶ್ನೆ ಮಾಡುವ ಎದೆಗಾರಿಕೆ ಅವರಲ್ಲಿತ್ತು. ಮಹಿಳಾ ಹಕ್ಕುಗಳಿಗಾಗಿ ತನ್ನ ಜಾತಿ, ಕುಟುಂಬವನ್ನೇ ತೊರೆಯುತ್ತಾರೆ. 900 ವರ್ಷಗಳ ಹಿಂದೆ ಬಸವಣ್ಣ ಮಹಿಳೆಯರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡಿಸಲು ಹೋರಾಡಿದ ಮೊದಲಿಗರಾಗಿದ್ದಾರೆ ಎಂದು ಬಣ್ಣಿಸಿದರು.

ವಿಷಯಾವಲೋಕನ ಮಾಡಿದ ನಿವೃತ್ತ ಕೃಷಿ ಅಧಿಕಾರಿ ಚಂದ್ರಶೇಖರ ಗುಂಡೇರಿ, ಕಲ್ಯಾಣ ದರ್ಶನ ಸಮಾಜಕ್ಕೆ ಮಾರ್ಗದರ್ಶನ. ಹೆಣ್ಣು ದಾಸಿಯಲ್ಲ, ಹೆಣ್ಣನ್ನು ಹಾಗೆ ನಡೆಸಿಕೊಂಡಲ್ಲಿ ಬದುಕೇ ನಶ್ವರ. ತಾಯಂದಿರು ಕುಟುಂಬದ ಗೌರವ, ಘನತೆ ಕಾಪಾಡುವವರು. ಪ್ರಕೃತಿಯಲ್ಲಿ ನಾವಿದ್ದೇವೆ. ಬದುಕಿಗೆ ಶಿಕ್ಷಣದ ಅಗತ್ಯವಿದ್ದು, ಅದರಲ್ಲಿ ಹೆಣ್ಣುಮಗುವಿಗೆ ತಪ್ಪದೇ ಶಿಕ್ಷಣ ನೀಡಬೇಕು. ಶಿಕ್ಷಣ ಪಡೆದ ಹೆಣ್ಣು ಇಡೀ ಕುಟುಂಬವನ್ನು ಶಿಕ್ಷಿತಗೊಳಿಸುತ್ತಾಳೆ. ನಗರದ ಮಹಿಳೆ ಮುಂಚೂಣಿಯಲ್ಲಿದ್ದಾಳೆ. ಮಕ್ಕಳ ಪಾಲನೆ, ಆರ್ಥಿಕ ಸ್ಥಿತಿಗತಿಯ ಅವಲೋಕನ ಮಾಡಿ ಕುಟುಂಬದ ಸ್ಥಿರತೆಯನ್ನು ಹೆಚ್ಚಿಸುತ್ತಾಳೆ. ಹಣದಿಂದ ಎಲ್ಲವೂ ಸಿಗುವುದಿಲ್ಲ. ಜ್ಞಾನದ ಬೆಳಕು ಬೇಕು. ಆದರೆ ಇಂದಿನ ಆಕರ್ಷಣೆಗಳು ನಮ್ಮನ್ನು ಅನಾರೋಗ್ಯಕರ ಚಟುವಟಿಕೆಗಳಿಗೆ ದಾಸರಾಗುವಂತೆ ಮಾಡುತ್ತವೆ ಎಂದು ಬೇಸರ ವ್ಯಕ್ತಪಡಿಸಿದರು.

ಎನ್‌.ಆರ್‌. ಪುರ ಬಸವ ಕೇಂದ್ರದ ಶ್ರೀ ಬಸವ ಯೋಗಾನಂದ ಸ್ವಾಮೀಜಿ ಮಾತನಾಡಿ, ಮಹಿಳೆಯರಿಗೆ ಈ ಸಮಾಜ ಹಲವಾರು ನಿರ್ಬಂಧಗಳನ್ನು ಹೇರಿದೆ. ಮಹಿಳೆ ಇನ್ನೂ ಸಂಪೂರ್ಣವಾಗಿ ನಿರ್ಬಂಧ ಗಳಿಂದ ಮುಕ್ತರಾಗಿಲ್ಲ. ಮಹಿಳಾ ಸಬಲೀಕರಣಕ್ಕಾಗಿ ಮುರುಘಾ ಶರಣರು ಅಪಾರ ಕೊಡುಗೆ ನೀಡಿದ್ದಾರೆ. ಲಿಂಗ ಸಮಾನತೆಗೆ ಆದ್ಯತೆ ಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಗ್ರಾಪಂ ಉಪಾಧ್ಯಕ್ಷ ಎಸ್‌. ರಂಗಯ್ಯ, ಎಲ್.ಬಿ. ರಾಜಶೇಖರ್‌, ಡಾ| ಎನ್‌.ಬಿ. ಸಜ್ಜನ್‌, ಜಿಲ್ಲಾ ಪಂಚಾಯ್ತಿ ಸದಸ್ಯ ಎಂ.ಬಿ. ತಿಪ್ಪೇಸ್ವಾಮಿ, ರೈತ ನಾಯಕಿ ಗಂಗಮ್ಮ ಇದ್ದರು. ಜಮುರಾ ಕಲಾವಿದರು ವಚನ ಪ್ರಾರ್ಥನೆ ಮಾಡಿದರು. ನಾಗರಾಜ್‌ ಸ್ವಾಗತಿಸಿದರು.

ಮುರುಘಾ ಶರಣರು ಚೀರನಹಳ್ಳಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಅದ್ಧೂರಿ ಮೆರವಣಿಗೆಯೊಂದಿಗೆ ವೇದಿಕೆಗೆ ಕರೆತರಲಾಯಿತು. ಮಹಿಳೆಯರು ವಚನ ಪುಸ್ತಕಗಳನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.