ಸ್ವಚ್ಛ ಭಾರತ ನಿರ್ಮಾಣಕ್ಕೆ ಕೈ ಜೋಡಿಸಿ

ಸರ್ಕಾರವೇ ಎಲ್ಲಾ ಕೆಲಸ ಮಾಡುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹೊರ ಬನ್ನಿ: ವಿನೋತ್‌ ಪ್ರಿಯಾ

Team Udayavani, Aug 18, 2019, 1:23 PM IST

18-Agust-30

ಹೊಳಲ್ಕೆರೆ: ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಅವರು ಪಟ್ಟಣದ ಬಯಲು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಹೊಳಲ್ಕೆರೆ: ಸ್ವಚ್ಛ ಭಾರತ ನಿರ್ಮಾಣಕ್ಕೆ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಆಗ ಮಾತ್ರ ಪ್ರತಿಯೊಂದು ಸ್ಥಳವನ್ನು ಸ್ವಚ್ಛವಾಗಿಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು.

ಪಟ್ಟಣ ಪಂಚಾಯತ್‌ ಸಹಯೋಗದಲ್ಲಿ ಆಯೋಜಿಸಿದ್ದ ‘ನಮ್ಮ ಚಿತ್ತ ಸ್ವಚ್ಛತೆಯತ್ತ’ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಐತಿಹಾಸಿಕ ಕಾಲಬೈರವೇಶ್ವರ ಪುಷ್ಕರಣಿ ಸ್ವಚ್ಛತೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಐತಿಹಾಸಿಕ ಪುಷ್ಕರಣಿಯನ್ನು ಉಳಿಸುವ ಕೆಲಸ ಮಾಡಬೇಕು. ಜಲಮೂಲಗಳಾಗಿರುವ ಬಾವಿ, ಹೊಂಡಗಳನ್ನು ಉಳಿಸಿಕೊಳ್ಳುವುದರ ಜತೆ ಅವುಗಳನ್ನು ಶುದ್ಧವಾಗಿ ಇಟ್ಟುಕೊಳ್ಳುವ ಕೆಲಸ ಆಗಬೇಕು. ನಮ್ಮ

ಸುತ್ತ ಜಲಮೂಲಗಳಾದ ಪುಷ್ಕರಣಿಗಳು, ಹೊಂಡಗಳು, ಬಾವಿಗಳು ಇದ್ದರೂ, ಅವುಗಳನ್ನು ಅಶುದ್ಧಗೊಳಿಸಿ ಬೇರೆ ಕಡೆಯಿಂದ ನೀರು ತರುವಂತೆ ಬಯಸುವುದು ಸರಿಯಾದ ಕ್ರಮವಲ್ಲ. ನಮ್ಮಲ್ಲಿರುವ ನೀರನ್ನು ಸಮರ್ಪಕವಾಗಿ ಉಳಿಸಿಕೊಳ್ಳಲು ಚಿಂತಿಸಬೇಕು. ಇರುವ ನೀರಿನ ಸೌಲಭ್ಯಗಳನ್ನು ರಕ್ಷಣೆ ಮಾಡಿಕೊಳ್ಳಬೇಕು. ಎಲ್ಲವನ್ನೂ ಸರ್ಕಾರವೇ ಮಾಡುತ್ತದೆ ಎಂಬ ನಿರೀಕ್ಷೆ ಇಟ್ಟುಕೊಳ್ಳುವುದು ಸರಿಯಲ್ಲ ಎಂದರು.

ಸ್ಥಳೀಯ ಜಲಮೂಲ ಸಂಪತ್ತು ರಕ್ಷಣೆ ಮಾಡಿಕೊಳ್ಳಲು ಸ್ಥಳೀಯವಾಗಿರುವ ಸಂಘಟನೆಗಳ ಸಹಕಾರ ಪಡೆಯಬೇಕು. ಸರ್ಕಾರವೇ ಎಲ್ಲವನ್ನೂ ಮಾಡುತ್ತದೆ ಎನ್ನುವ ಭಾವನೆಯನ್ನು ತೊರೆದು ನಮ್ಮ ಗ್ರಾಮದ ಸ್ವಚ್ಛತೆ ನಮ್ಮದೇ ಹೊಣೆ ಎನ್ನುವ ಭಾವನೆ ಬೆಳೆಸಿಕೊಂಡು ಸುತ್ತಮುತ್ತಲಿನ ಪರಿಸರವನ್ನು ಶುದ್ಧವಾಗಿ ಇಟ್ಟುಕೊಂಡಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬಹುದು ಎಂದು ತಿಳಿಸಿದರು.

ನ್ಯಾಯವಾದಿ ಎಸ್‌. ವೇದಮೂರ್ತಿ ಮಾತನಾಡಿ, ಐತಿಹಾಸಿಕ ಕಾಲಬೈರವೇಶ್ವರ ಪುಷ್ಕರಣಿಗೆ ಸಾವಿರಾರು ವರ್ಷಗಳ ಐತಿಹಾಸವಿದೆ. ಪಟ್ಟಣವನ್ನು ಕಟ್ಟುವಾಗ ನಿರ್ಮಾಣಗೊಂಡಿದೆ. ಪುಷ್ಕರಣಿ ಸಂಪೂರ್ಣ ಶಿಥಿಲಾವವಸ್ಥೆಯಲ್ಲಿದ್ದು, ಸುತ್ತಲೂ ಗೋಡೆ ನಿರ್ಮಾಣ ಮಾಡಬೇಕು. ಅದರ ಮೇಲೆ ಕಬ್ಬಿಣದ ಕಂಬಿಗಳನ್ನು ಹಾಕುವ ಮೂಲಕ ಸಾರ್ವಜನಿಕರು ಪ್ರವೇಶ ನಿಲ್ಲಿಸಬೇಕು. ತಗಡಿನ ಛಾವಣಿ ಮಾಡುವ ಮೂಲಕ ಮಳೆ ಕೊಯ್ಲು ಮಾಡಲು ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದರು.

ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ವಾಸಿಂ ಮಾತನಾಡಿ, ಪಟ್ಟಣದ ಸ್ವಚ್ಛತೆ ನಿಟ್ಟಿನಲ್ಲಿ ಈಗಾಗಲೆ ಮೊದಲ ಮತ್ತು ನಾಲ್ಕನೇ ಶನಿವಾರ ‘ನಮ್ಮ ಚಿತ್ತ ಸ್ವಚ್ಛತೆಯತ್ತ’ ಕಾರ್ಯಕ್ರಮವನ್ನು ರೂಪಿಸಿಕೊಂಡು ಸ್ವಚ್ಛತೆ, ಸಸಿ ನೆಡುವ ಹಾಗೂ ಬಾವಿ, ಹೊಂಡ, ಪುಷ್ಕರಣಿ ಶುದ್ಧಗೊಳಿಸುವ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಪಟ್ಟಣದಲ್ಲಿರುವ ಕೊಳಚೆಯನ್ನು ಸಂಪೂರ್ಣ ಶುದ್ಧಗೊಳಿಸಲು ಪೌರ ಕಾರ್ಮಿಕರು, ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸ್ವಚ್ಛತಾ ಆಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಪಪಂ ಮಾಜಿ ಸದಸ್ಯ ಬಿ. ಶಿವರುದ್ರಪ್ಪ ಮಾತನಾಡಿ, ಅನಾದಿ ಕಾಲದಿಂದ ಜನರು ಈ ಪುಷ್ಕರಣಿಯ ನೀರನ್ನು ಆಶ್ರಯಿಸಿಕೊಂಡು ಜೀವನ ನಡೆಸಿಕೊಂಡು ಬಂದಿದ್ದಾರೆ. ಇತ್ತೀಚೆಗೆ ಘನತ್ಯಾಜ್ಯ ಪುಷ್ಕರಣಿಯನ್ನು ಸೇರುತ್ತಿದೆ. ಇದರಿಂದಾಗಿ ಜನರು ನೀರನ್ನು ಬಳಕೆ ಮಾಡುವುದನ್ನು ನಿಲ್ಲಿಸಿದ್ದಾರೆ. ಶುದ್ಧಗೊಳಿಸಿದಲ್ಲಿ ಉತ್ತಮ ಕುಡಿಯುವ ನೀರಾಗಿ ಬಳಕೆ ಮಾಡಲು ಸಾಧ್ಯ ಎಂದು ಹೇಳಿದರು.

ಜಿಲ್ಲಾ ಯೋಜನಾಧಿಕಾರಿ ರಾಜಶೇಖರ್‌, ತಹಶೀಲ್ದಾರ್‌ ನಾಗರಾಜ್‌, ಇಂಜನಿಯರ್‌ ಸ್ವಾಮಿ, ವೆಂಕಟೇಶ್‌, ರೋಟರಿ ಕ್ಲಬ್‌ ಅಧ್ಯಕ್ಷ ಹರೀಶ್‌, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎ.ಸಿ. ಗಂಗಾಧರಪ್ಪ, ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬಿ.ಕೆ. ಸುಮಿತ್ರಕ್ಕ, ಬಿ.ಪಿ. ಕಾಲೇಜು ಪ್ರಾಚಾರ್ಯ ಮಹೇಂದ್ರಪ್ಪ, ಡಾ| ತಿಪ್ಪೇಸ್ವಾಮಿ, ಪಿಎಸ್‌ಐ ಮಹೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.