ಕಾಯಕ ತತ್ವ ಅಳವಡಿಸಿಕೊಳ್ಳಿ


Team Udayavani, Jun 26, 2019, 12:16 PM IST

26-June-17

ಹೊಳಲ್ಕೆರೆ: ತಾಲೂಕಿನ ನುಲೇನೂರು ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿಗೆ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.

ಹೊಳಲ್ಕೆರೆ: ಶಿವಶರಣ ನುಲಿಯ ಚಂದಯ್ಯನವರ ‘ಕಾಯಕವೇ ಕೈಲಾಸ’ ಎನ್ನುವ ಕಾಯಕ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.

ತಾಲೂಕಿನ ಆರ್‌. ನುಲೇನೂರಿನಲ್ಲಿ ನಡೆದ ವಚನಕಾರ ನುಲಿಯ ಚಂದ್ರಯ್ಯನವರ ಸ್ಮರಣೋತ್ಸವ ಹಾಗೂ ಕೆರೆ ಅಭಿವೃದ್ಧಿಗೆ ಚಾಲನೆ ನೀಡಿ ಶ್ರೀಗಳು ಆಶೀರ್ವಚನ ನೀಡಿದರು.

ಮಹಾಪುರುಷರ ತತ್ವಗಳನ್ನು ಬದುಕಿನಲ್ಲಿ ಅನುಷ್ಠಾನಕ್ಕೆ ತರದೆ ಅವರ ಮೂರ್ತಿಗಳನ್ನು ಇಟ್ಟುಕೊಂಡು ಪೂಜೆ ಮಾಡುವುದು ದೇಶದ ದೊಡ್ಡ ದುರಂತ. ಶರಣರು ಪ್ರತಿಮಾ ಸಂಸ್ಕೃತಿಯ ಪ್ರತಿಪಾದಕರಲ್ಲ. ತಮ್ಮ ಚಿಂತನೆಗಳನ್ನು ಕಾಯಕದ ಮೂಲಕ ಜಾರಿಗೆ ತಂದವರು ಎಂದರು.

ಇಂದು ಎಲ್ಲರೂ ಸಂಪತ್ತಿನ ಹಿಂದೆ ಓಡುತ್ತಿದ್ದಾರೆ. ಸಂಪತ್ತಿನ ಮೋಹದಿಂದ ಹೊರಬರಬೇಕು. ಸಜ್ಜನರಾಗಿ ಬದುಕುವ ಚಿಂತನೆ ಬೆಳೆಸಿಕೊಳ್ಳಬೇಕು. ನುಲಿಯ ಚಂದಯ್ಯ ಕಾಯಕ ಮುಖ್ಯವೇ ವಿನಃ ದೇವರಲ್ಲ ಎಂದು ಪ್ರತಿಪಾದಿಸಿದರು. ದೇವರಿಗೆ ಕಾಯಕವನ್ನು ಕಲಿಸಿದರು. ಹಾಗಾಗಿ ಕಾಯಕದ ಮೂಲಕ ಸಾಮಾಜಿಕ ಬದಲಾವಣೆ ಶ್ರಮಿಸಬೇಕು ಎಂದು ಹೇಳಿದರು.

ಇಂದು ಪ್ರಕೃತಿಯ ಮೇಲೆ ಮಾನವ ಎಸಗುತ್ತಿರುವ ದ್ರೋಹದಿಂದ ಬರಗಾಲ ಬಂದಿದೆ. ಆದ್ದರಿಂದ ಪ್ರತಿಯೊಬ್ಬರೂ ಸಸಿ ನೆಟ್ಟು ಮರವನ್ನಾಗಿ ಬೆಳೆಸಬೇಕು. ಸ್ವಾರ್ಥ ಮನೋಭಾವದಿಂದ ಮನೆ ಮುಂದಿನ ಕಸವನ್ನು ಗ್ರಾಪಂ ಸದಸ್ಯ ಬಂದು ಹೊಡೆಯಬೇಕೆನ್ನುವ ಸ್ಥಿತಿ ನಿರ್ಮಾಣವಾಗಿದೆ. ಶರಣರು ನಮ್ಮ ಮನೆಯ ಕೆಲಸವನ್ನು ನಾವೇ ಮಾಡಿಕೊಳ್ಳಬೇಕು ಎಂದಿದ್ದರು. ಆದ್ದರಿಂದ ನಮ್ಮ ಮನಸ್ಸಿನ ಕೊಳೆಯನ್ನು ತೊಳೆಯಲು ಸತ್ಸಂಗ, ವಚನಗಳ ಸಂದೇಶವನ್ನು ಅರಿತುಕೊಳ್ಳಬೇಕೆಂದರು.

ಶಾಸಕ ಎಂ. ಚಂದ್ರಪ್ಪ ಮಾತನಾಡಿ, ನುಲೇನೂರು ಕೆರೆ ಅಭಿವೃದ್ಧಿಗೆ ಒಂದು ಕೋಟಿ ರೂ. ಅನುದಾನ ನೀಡಲಾಗಿದೆ. ಕೆರೆಯಲ್ಲಿರುವ ಮುಳ್ಳಿನ ಗಿಡಗಳನ್ನು ತೆರವುಗೊಳಿಸಲಾಗುತ್ತದೆ. ನಂತರ ಹೂಳು ತೆಗೆದು ನೀರು ತುಂಬಿಸಲಾಗುವುದು. ಬಸಾಪುರ ಗೇಟ್ನಿಂದ ರಾಮಗಿರಿ ಮಾರ್ಗದ ರಸ್ತೆ ಡಾಂಬರಿಕರಣಕ್ಕೆ 1.5 ಕೋಟಿ ರೂ. ಬಿಡುಗಡೆಯಾಗಿದೆ ಎಂದು ತಿಳಿಸಿದರು.

ಸಾಹಿತಿ ಈಶ್ವರ ಮಂಟೂರು ಉಪನ್ಯಾಸ ನೀಡಿದರು. ಜಿಪಂ ಸದಸ್ಯ ಮಹೇಶ್‌, ತಾಪಂ ಅಧ್ಯಕ್ಷೆ ಸುಜಾತಾ ಧನಂಜಯ, ಸಾಹಿತಿ ಜಿ.ಎನ್‌. ಬಸವರಾಜ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.