ಭರಪೂರ ಮಳೆಗೆ ಕೆರೆಗಳೆಲ್ಲ ಭರ್ತಿ


Team Udayavani, Nov 11, 2019, 2:57 PM IST

11-November-32

„ಎಸ್‌. ವೇದಮೂರ್ತಿ
ಹೊಳಲ್ಕೆರೆ:
‘ಕೆರೆ ನಾಡು’ ಎಂದು ಖ್ಯಾತಿ ಪಡೆದಿರುವ ಹೊಳಲ್ಕೆರೆ ಪಟ್ಟಣದ ಸುತ್ತಮುತ್ತಲಿನ ಕೆರೆಗಳು ಧುಮ್ಮಿಕ್ಕಿ ಹರಿಯುತ್ತಿವೆ. ಹಿರೇಕೆರೆ, ಸಣ್ಣಕೆರೆ, ಹೊನ್ನೆಕೆರೆಗೆ ಮಳೆ ಜೀವಕಳೆಯನ್ನುಂಟು ಮಾಡಿದೆ.

ದಾವಣಗೆರೆ ರಸ್ತೆಯ ಹಿರೇಕೆರೆ ಸುಮಾರು 380 ಎಕರೆ ಪ್ರದೇಶದಲ್ಲಿ ಜಲರಾಶಿಯನ್ನು ಹಿಡಿದಿಟ್ಟುಕೊಂಡಿದ್ದರೆ, ಹೊನ್ನಕೆರೆ ಸುಮಾರು 200 ಎಕರೆ ಪ್ರದೇಶದಲ್ಲಿದೆ. ಇನ್ನು 150 ಎಕರೆಯ ಸಣ್ಣಕೆರೆ ಈ ವರ್ಷದ ಮಳೆಗೆ ದಶಕಗಳ ಬಳಿಕ ತುಂಬಿ ಕೋಡಿ ಹರಿಯುವುದು ಹೊಸ ಐತಿಹಾಸ ಸೃಷ್ಟಿಸಿದೆ.

ಕೆರೆ ಸುತ್ತ ಇರುವ ಸುಮಾರು 25 ಹಳ್ಳಿಗಳಿಗೆ ಕೆರೆ ನೀರಿನ ಅಸರೆ ಸಿಕ್ಕಿದೆ. ಬರದಿಂದ ತತ್ತರಿಸುತ್ತಿದ್ದ ತೋಟಗಾರಿಕೆ ಹಾಗೂ ಕೃಷಿ ಚೇತರಿಕೆ ಕಂಡಿವೆ. ಕೊಳವೆಬಾವಿಗೆಂದು ಲಕ್ಷಾಂತರ ರೂ. ವ್ಯಯಿಸುತ್ತಿದ್ದ ಕೃಷಿಕರು ಕೆರೆ ಭರ್ತಿಯಾಗಿದ್ದನ್ನು ಕಂಡು ಸಂತಸಗೊಂಡಿದ್ದಾರೆ.

ಕೆರೆ ಪಾತ್ರದ ಗ್ರಾಮಗಳಾದ ಹೊಳಲ್ಕೆರೆ, ಚೀರನಹಳ್ಳಿ, ಕಂಬದೇವರಹಟ್ಟಿ, ಆಡನೂರು, ಮಲ್ಕಾಪುರ, ಅಗ್ರಹಾರ, ಜೈಪುರ, ಅರೆಹಳ್ಳಿ, ಪುಣಜೂರು, ಶಿವಪುರ, ಕುನುಗಲಿ, ಮಲ್ಲಾಡಿಹಳ್ಳಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಜಲಮೂಲಕ್ಕೆ ಪುನಶ್ಚೇತನ ದೊರೆತಿದೆ. ಮುಚ್ಚಿ ಹೊಗಿದ್ದ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ವೃದ್ಧಿಸಿದೆ.

ಗುಡ್ಡದಲ್ಲಿ ಮಳೆ ಸುರಿದರೆ ನೀರೆಲ್ಲ ಪಟ್ಟಣ ಮೂರು ಕೆರೆಗಳಿಗೂ ಹರಿಯುತ್ತಿತ್ತು. ನಂತರ ಗುಡ್ಡದ ಶ್ರೇಣಿಯಲ್ಲಿ ಕುಡಿನೀರುಕಟ್ಟೆ ಕೆರೆ ನಿರ್ಮಾಣದ ನಂತರ ನೀರಿನ ಹರಿವು ಕಡಿಮೆಯಾಯಿತು. ಮಳೆ ಜಾಸ್ತಿಯಾದಾಗ ಕುಡಿನೀರುಕಟ್ಟೆ ಕೆರೆ ತುಂಬಿ ಕೋಡಿ ಹರಿಯುತ್ತದೆ. ಹೊನ್ನಕೆರೆ, ಸಣ್ಣಕೆರೆ ಹಾಗೂ ಹಿರೇಕೆರೆಗಳು ತುಂಬಲು ಮಳೆ ನೀರನ್ನೇ ಅವಲಂಬಿಸಿವೆ.

ಶಿಥಿಲಗೊಂಡ ಕೆರೆ ಏರಿ: ಪಟ್ಟಣದ ಮೇಲ್ಭಾಗದಲ್ಲಿರುವ ಹೊನ್ನಕೆರೆ ಭರ್ತಿಯಾಗಿದ್ದು ರೈತರಲ್ಲಿ ಸಂತಸವನ್ನುಂಟು ಮಾಡಿದ್ದರೂ, ಕೆರೆ ಏರಿಗಳೂ ಸಂಪೂರ್ಣ ಶಿಥಿಲಗೊಂಡು ನೀರೆಲ್ಲ ಅಲ್ಲಲ್ಲಿ ಜಿನುಗುತ್ತಿದೆ. ಹತ್ತಾರು ವರ್ಷ ಖಾಲಿ ಇದ್ದ ಹಿನ್ನಲೆಯಲ್ಲಿಕೆರೆ ಏರಿ ಬಿರುಕು ಬಿಟ್ಟಿದೆ. ನೀರಿನ ಒತ್ತಡದಿಂದಾಗಿ ಏರಿ ಒಡೆದು ನೀರು ಪಟ್ಟಣದೊಳಗೆ ನುಗ್ಗುವ ಭೀತಿ ಎದುರಾಗಿದೆ.

ಧಾರಾಕಾರ ಮಳೆಗೆ ಕೆರೆಗಳು ಧುಮ್ಮಿಕ್ಕಿ ಹರಿಯುತ್ತಿದ್ದರೂ ಸಣ್ಣ ನೀರಾವರಿ ಇಲಾಖೆ ಕೆರೆ ಕೋಡಿಯಲ್ಲಿ ಬೆಳೆದು ನಿಂತ ಗಿಡ-ಮರಗಳು, ಘನತ್ಯಾಜ್ಯ, ಕೊಚ್ಚೆಯನ್ನು ಸ್ವಚ್ಚಗೊಳಿಸದೆ ನಿರ್ಲಕ್ಷ್ಯ ವಹಿಸಿತ್ತು. ಕೋಡಿಯಲ್ಲಿರುವ ನೂರಾರು ಮನೆಗಳು ನೀರಿನಲ್ಲಿ ಕೊಚ್ಚಿ ಹೊಗುವ ಸ್ಥಿತಿ ನಿರ್ಮಾಣವಾಗುತ್ತಿದ್ದರೂ ಕೋಡಿ ನೀರು ಸರಾಗವಾಗಿ ಹರಿಯುವಂತೆ ಮಾಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಪಟ್ಟಣ ಪಂಚಾಯತ್‌ ಕೋಡಿ ನೀರು ಹರಿಯುವ ನೀರಿನ ಹಳ್ಳಗಳನ್ನು ಸ್ವತ್ಛಗೊಳಿಸುವ ಮೂಲಕ ಜನರ ಪ್ರಶಂಸೆಗೆ ಪಾತ್ರವಾಗಿದೆ.

ದಾವಣಗೆರೆ ರಸ್ತೆ ಕೆರೆ ಏರಿ ಮೇಲೆ ಹಾದು ಹೋಗಿದ್ದು ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಕೆರೆ ಏರಿ ಮಟ್ಟಕ್ಕೆ ನೀರು ನಿಂತಿದ್ದು, ಹತ್ತಾರು ಅಡಿ ಅಳದಲ್ಲಿ ನೀರಿದೆ. ಹಾಗಾಗಿ ಸಂಬಂಧಪಟ್ಟ ಇಲಾಖೆ ಏರಿ ಮೇಲೆ ತಡೆಗೋಡೆ ನಿರ್ಮಾಣ ಮಾಡಬೇಕೆಂದು ಸಾರ್ವಜನಿಕರ ಒತ್ತಾಯ.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.