ಭಾರತದಲ್ಲಿ ಜಾತೀಯತೆ ಜೇನುಗೂಡಿದ್ದಂತೆ

ಬಸವಣ್ಣನ ಕನಸಿನ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಮುರುಘಾ ಮಠ ಯತ್ನ: ಮುರುಘಾ ಶರಣರು

Team Udayavani, Aug 14, 2019, 12:19 PM IST

14-AGUST-18

ಹೊಳಲ್ಕೆರೆ: ಅವಿನಹಟ್ಟಿಯಲ್ಲಿ ನಡೆದ 'ಕಲ್ಯಾಣ ದರ್ಶನ ಕಾರ್ಯಕ್ರಮದಲ್ಲಿ ಡಾ| ಶಿವಮೂರ್ತಿ ಮುರುಘಾ ಶರಣರು ಆಶೀರ್ವಚನ ನೀಡಿದರು.

ಹೊಳಲ್ಕೆರೆ: ಬಸವ ಸಮಾಜ ಎಂದರೆ ಶರಣ ಸಮಾಜ. ಅದು ಅಕ್ಕರೆ, ಅಂತಃಕರಣ ಹಾಗೂ ಅಪ್ಪಿಕೊಳ್ಳುವ ಸಮಾಜವಾಗಿತ್ತು ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಮುರುಘಾ ಮಠದ ಬಸವ ಕೇಂದ್ರ ಹಾಗೂ ಅವಿನಹಟ್ಟಿ ಗ್ರಾಮಸ್ಥರ ಸಹಯೋಗದಲ್ಲಿ ತಾಲೂಕಿನ ಆವಿನಹಟ್ಟಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಕಲ್ಯಾಣ ದರ್ಶನ’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶರಣರು ಆರ್ಶಿವಚನ ನೀಡಿದರು.

ನಮಗೆಲ್ಲ ಎರಡು ಜಾತಿಗಳು ಕಾಣುತ್ತವೆ. ಮುಟ್ಟಿಸಿಕೊಳ್ಳುವ ಜಾತಿ ಅಂದರೆ ಬುದ್ಧ, ಬಸವ, ಪೈಗಂಬರ್‌, ಕ್ರೈಸ್ತರ ಜಾತಿಗಳಾಗಿದ್ದರೆ ಮುಟ್ಟಿಸಿಕೊಳ್ಳದೇ ಇರುವುದು ಎಂದರೆ ಜನರನ್ನು ಹತ್ತಿರಕ್ಕೆ ಬಿಟ್ಟುಕೊಳ್ಳದಂತೆ ದೂರವಿರುವುದು. ಎಲ್ಲ ಸಮಾಜ ಸುಧಾರಕರು ಅಸ್ಪ್ರಶ್ಯತೆಯ ವಿರುದ್ಧ ಹೋರಾಡಿದರು. ಹಾಗಾಗಿ ಸಮಾಜದ ಕಲ್ಯಾಣಕ್ಕೆ ಶ್ರಮಿಸಿದ ಸರ್ವ ದಾರ್ಶನಿಕರ ಆಚಾರ-ವಿಚಾರಗಳನ್ನು ನೆನಪಿಸುವ ಕೆಲಸವನ್ನು ಮುರುಘಾ ಮಠ ಮಾಡುತ್ತಿದೆ ಎಂದರು.

ಮುರುಘಾ ಮಠ ಕೈಗೊಳ್ಳುತ್ತಿರುವ ಬಸವ ಚಿಂತನೆಯ ‘ಕಲ್ಯಾಣ ದರ್ಶನ’ ಕಾರ್ಯಕ್ರಮ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಮುರುಘಾ ಮಠ ಎಂದಿಗೂ ಎಲ್ಲ ಸಮುದಾಯದವರ ಬಳಿ ಹೋಗುತ್ತಿದೆ. ಸಮಾಜದಲ್ಲಿರುವ ಜಾತಿ ಕಂದಕವನ್ನು ನಿವಾರಣೆ ಮಾಡಲು ಬಸವಣ್ಣನವರ ಚಿಂತನೆಯನ್ನು ಬಿತ್ತರಿಸುತ್ತಿದ್ದೇವೆ. ನಮ್ಮ ದೇಶದಲ್ಲಿ ಜಾತೀಯತೆ ಎನ್ನುವುದು ಜೇನುಗೂಡು ಇದ್ದಂತೆ. ಅದನ್ನು ಮುಟ್ಟುವುದು ಸುಲಭದ ಮಾತಲ್ಲ. ಆದರೆ ಅದರಲ್ಲಿ ಒಂದು ಸಮ ಸಮಾಜದ ಕಳಕಳಿ ಇದೆ. ಹಲವಾರು ಸಮಸ್ಯೆಗಳ ಮಧ್ಯೆಯೂ ಮುರುಘಾ ಮಠ ಜಾತ್ಯತೀತ ಸಮಾಜವನ್ನು ಕಟ್ಟುವ ಮೂಲಕ ಬಸವಣ್ಣನ ಚಿಂತನೆಯನ್ನು ಸಾಕಾರಗೊಳಿಸಲು ಯತ್ನಿಸುತ್ತಿದೆ ಎಂದು ತಿಳಿಸಿದರು.

‘ಮೌಡ್ಯಮುಕ್ತ ಸಮಾಜ’ ವಿಷಯದ ಕುರಿತು ಸಾಹಿತಿ ನಿರಂಜನ ದೇವರಮನೆ ಉಪನ್ಯಾಸ ನೀಡಿ, 12ನೇ ಶತಮಾನ ಮಹತ್ವಪೂರ್ಣವಾದುದು. ಸಮಾಜದ ಎಲ್ಲ ಜನರನ್ನು ಒಗ್ಗೂಡಿಸುವುದು ಬಸವಾದಿ ಶರಣರ ಕೆಲಸವಾಗಿತ್ತು. ಅಂದು ಕಾಯಕವೇ ಶ್ರೇಷ್ಠವಾಗಿತ್ತು. ಕಾಯಕದಲ್ಲಿ ದೇವರನ್ನು ಕಾಣಬೇಕು. ಕ್ರಿಯಾ ಶುದ್ಧಿ, ಭಾವ ಶುದ್ಧಿ ನಮ್ಮದಾಗಬೇಕು. ಕೆಲವು ಧಾರ್ಮಿಕರು ಮೌಡ್ಯ, ಕಂದಾಚಾರಗಳನ್ನು ನಮ್ಮಂತಹ ಜ್ಞಾನವಿಲ್ಲದವರ ಮೇಲೆ ಹೇರಿದರು. ಆದರೆ ವಚನಕಾರರು ಇದನ್ನು ಕಿತ್ತೂಗೆದರು. ಕಂದಾಚಾರಗಳಿಂದ ಮುಕ್ತರಾಗಲು ಚಲನಶೀಲರಾಗಬೇಕು. ಸೂತಕಗಳನ್ನು ಬಿಟ್ಟು ಬಿಡಬೇಕು. ಅರಿವನ್ನು ಪಡೆಯಬೇಕು ಎಂದು ಕರೆ ನೀಡಿದರು.

ಮಾಜಿ ಶಾಸಕ ಉಮಾಪತಿ ಮಾತನಾಡಿ, ನಮ್ಮ ಗ್ರಾಮದಲ್ಲಿ ಬಹಳಷ್ಟು ಜನ ಯಾದವ ಸಮುದಾಯಕ್ಕೆ ಸೇರಿದವರು. ನಮ್ಮಲ್ಲಿ ಮೂಢನಂಬಿಕೆ ಜಾಸ್ತಿ ಇದೆ. ಮುರುಘಾ ಶರಣರು ಬರುವುದರಿಂದ ನಮ್ಮ ಊರು ಆವಿನಹಟ್ಟಿ, ಅರಿವಿನ ಹಟ್ಟಿಯಾಗಬೇಕು. ಊರಿನಲ್ಲಿ ಹಸು ಮತ್ತು ಎತ್ತುಗಳನ್ನು ಸಾಕುತ್ತಿದ್ದರು. ನಮ್ಮೂರಿನ ಎತ್ತುಗಳು ದೆಹಲಿಗೆ ಹೋದಾಗ ಮಹಾರಾಜರು ಬಹುಮಾನ ಕೊಟ್ಟ ಪರಂಪರೆ ಇದೆ. ಸಾಕಷ್ಟು ಮೌಡ್ಯ ಇದ್ದ ನಮ್ಮ ಊರಿನಲ್ಲಿ ಇಂದು ಬಹಳಷ್ಟು ಜನ ವಿದ್ಯಾವಂತರಾಗಿದ್ದಾರೆ. ಆದರೂ ಮೌಡ್ಯವಿದೆ. ನಮ್ಮ ಊರಿಗೂ ಮುರುಘಾ ಮಠಕ್ಕೂ ಅವಿನಾಭಾವ ಸಂಬಂಧ ಇದೆ ಎಂದು ಹಿಂದಿನ ನೆನಪುಗಳನ್ನು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಶ್ರೀ ಕೇತೇಶ್ವರ ಸ್ವಾಮಿಗಳು, ಶ್ರೀ ತಿಪ್ಪೇರುದ್ರ ಸ್ವಾಮಿಗಳು, ಶ್ರೀ ತಿಳುವಳ್ಳಿ ಸ್ವಾಮಿಗಳು, ಮುಖಂಡರಾದ ತಿರುಮಲೇಶ್‌, ನಾಗರಾಜಪ್ಪ, ಬಿ.ಪಿ. ಓಂಕಾರಪ್ಪ ಮತ್ತಿತರರು ಭಾಗವಹಿಸಿದ್ದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ರಾಮಚಂದ್ರಪ್ಪ ಸ್ವಾಗತಿಸಿದರು. ಶ್ರೀನಿವಾಸ್‌ ನಿರೂಪಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.