ಅನುಭವಕ್ಕಿದೆ ಜೀವನ ಪರಿಪಕ್ವಗೊಳಿಸುವ ಶಕ್ತಿ

ಹಣ-ಅಧಿಕಾರದ ಆಸೆಗೆ ಬಲಿಯಾಗದೆ ಅನುಭವ ಮಾರ್ಗದಿಂದ ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಿ: ಶಿಮುಶ

Team Udayavani, Aug 21, 2019, 1:28 PM IST

21-Agust-18

ಹೊಳಲ್ಕೆರೆ: ತಾಲೂಕಿನ ಎನ್‌.ಜಿ. ಹಳ್ಳಿಯಲ್ಲಿ ನಡೆದ 'ಕಲ್ಯಾಣ ದರ್ಶನ' ಕಾರ್ಯಕ್ರಮದಲ್ಲಿ ಡಾ| ಶಿವಮೂರ್ತಿ ಮುರುಘಾ ಶರಣರು ಆಶೀರ್ವಚನ ನೀಡಿದರು.

ಹೊಳಲ್ಕೆರೆ: ಕುಳಿತ ವ್ಯಕ್ತಿಗೆ ಅನುಭವಗಳಾಗುವುದಿಲ್ಲ. ಅನನ್ಯ ಅನುಭವಗಳಾಗಬೇಕಾದರೆ ಜಗತ್ತಿನ ಪರ್ಯಟನೆ ಮಾಡಬೇಕು. ಆಗ ಮಾತ್ರ ಅನುಭವ ಪಡೆಯಲು ಸಾಧ್ಯ ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಶ್ರಾವಣ ಮಾಸದ ಅಂಗವಾಗಿ ಚಿತ್ರದುರ್ಗ ಮುರುಘಾ ಮಠದ ಬಸವ ಕೇಂದ್ರದ ವತಿಯಿಂದ ಶ್ರಾವಣಮಾಸದ ಅಂಗವಾಗಿ ತಾಲೂಕಿನ ನಾರಾಯಣಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಕಲ್ಯಾಣ ದರ್ಶನ’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶರಣರು ಆಶೀರ್ವಚನ ನೀಡಿದರು.

ಶರಣರ ಸಿದ್ಧಾಂತಗಳು ಅನುಭವದ ಸಿದ್ಧಾಂತ. 50ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಬಸವ ತತ್ವವನ್ನು ಪ್ರಚಾರ ಮಾಡಲಾಗಿದೆ. ಸಾಕಷ್ಟು ಅನುಭವಗಳು ಈ ಸಂದರ್ಭದಲ್ಲಿ ಆಗಿವೆ. ಅನುಭವ ಎಂದರೆ ವಿಚಾರ. ಅನುಭವಗಳಿಗೆ ಜೀವನವನ್ನು ಪರಿಪಕ್ವಗೊಳಿಸುವ ಶಕ್ತಿಯಿದೆ. ಅನುಭವದ ಪ್ರಭಾವದಿಂದಾಗಿ ಸಾತ್ವಿಕತೆ, ಸೌಜನ್ಯ, ಸನ್ನಡತೆಯನ್ನು ಹೊಂದಲು ಸಾಧ್ಯವಾಗುತ್ತದೆ ಎಂದರು.

ಅನುಭವದಿಂದ ಜೀವನಕ್ಕೆ ಮೂರ್ತ ಸ್ವರೂಪ ಸಿಗಲಿದೆ. ಅನುಭವ ವ್ಯಕ್ತಿಯನ್ನು ಅರಳಿಸುತ್ತದೆ. ವ್ಯಕ್ತಿತ್ವವನ್ನು ಮಾಗಿಸುತ್ತದೆ. ಕಲ್ಯಾಣದರ್ಶನ ಕಾರ್ಯಕ್ರಮದ ಮೂಲಕ ನಾವುಗಳೆಲ್ಲ ಅರಳುವಂತಾಗಬೇಕು. ಹಣ, ಅಧಿಕಾರ, ಸೌಂದರ್ಯ ಅಲ್ಪಕಾಲಿಕವಾದವು. ಯಾರು ಅನುಭವದ ಮಾರ್ಗವನ್ನು ಅನುಸರಿಸುತ್ತಾರೆಯೋ ಅಂಥವರು ಜೀವನದಲ್ಲಿ ಇತಿಹಾಸವನ್ನು ನಿರ್ಮಿಸುತ್ತಾರೆ. ಯಶಸ್ಸು ಅನುಭವದ ಮುಖಾಂತರ ಬರುತ್ತದೆ. ಅನುಭವದದಿಂದ ಯಶಸ್ವಿ ವ್ಯಕ್ತಿಗಳಾಗಬೇಕು ಎಂದು ಕರೆ ನೀಡಿದರು.

ಶರಣ ಏಕತಾ ಮೇಳವನ್ನು ಈ ಬಾರಿ ಸಾವಿರಾರು ಜನರ ಸಮ್ಮುಖದಲ್ಲಿ ರಾಜಸ್ಥಾನದ ಮೌಂಟ್ ಅಬುವಿನಲ್ಲಿ ಏರ್ಪಡಿಸಲಾಗುವುದು. ಕಾಗೆ ಕೆಲವರಿಗೆ ಶೂದ್ರ ಪಕ್ಷಿ, ಇನ್ನು ಕೆಲವರಿಗೆ ದಾಸೋಹ ಪಕ್ಷಿ. ಕಾಗೆ ಸಂಸ್ಕೃತಿಯು ಕರೆದುಣ್ಣುವ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ತಿಳಿಸಿದರು.

‘ಯಶಸ್ಸಿನ ಹೆಜ್ಜೆಗಳು’ ವಿಷಯದ ಕುರಿತು ಉಪನ್ಯಾಸ ನೀಡಿದ ಬಿ.ಎಂ. ಸಿದ್ದಪ್ಪ, ವಿಧೇಯತೆ ಒಂದು ನಿರಹಂಕಾರಿ ಗುಣವುಳ್ಳದ್ದು. ಅದು ಎಲ್ಲರನ್ನೂ ಆಕರ್ಷಿಸುತ್ತಿದೆ. ಮೊದಲು ನಮ್ಮನ್ನು ನಾವು ಅರ್ಥ ಮಾಡಿಕೊಳ್ಳಬೇಕು. ನಂತರ ತನ್ನ ಕಾರ್ಯವನ್ನು ತನ್ನ ಸಮಾಜವನ್ನು ಅರ್ಥ ಮಾಡಿಕೊಂಡು ಮುನ್ನಡೆಯಬೇಕು. ಜ್ಞಾನ ಯಶಸ್ಸಿನ ಹೆಜ್ಜೆಗಳಲ್ಲಿ ಮಹತ್ವದ್ದು. ಸಮ್ಯಕ್‌ ಜ್ಞಾನ ಅವಶ್ಯವಾದುದು. ಸಮ್ಯಕ್‌ ಜ್ಞಾನ ಎಂದರೆ ಉತ್ತಮ ಜ್ಞಾನ. ಆಲಿಸುವುದು ಯಶಸ್ಸಿಗೆ ಮತ್ತೂಂದು ಮಹತ್ವದ ಹೆಜ್ಜೆ. ಕಲಿಯುವುದಕ್ಕೆ ತಿಳಿಯುವುದಕ್ಕೆ ಆಲಿಸಬೇಕು. ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಯಾರು ಕೆಲಸ ನಿರ್ವಹಿಸುತ್ತಾನೋ ಅವನು ಯಶಸ್ಸು ಗಳಿಸುತ್ತಾನೆ. ಸದಾ ಆಶಾವಾದಿಗಳಾಗಿರಬೇಕು. ಆಸೆ ಪಡುವುದು ತಪ್ಪಲ್ಲ, ಆದರೆ ದುರಾಸೆ ಪಡುವುದು ತಪ್ಪು. ಪ್ರಬುದ್ಧತೆಯೂ ಯಶಸ್ಸಿನ ಹೆಜ್ಜೆಗಳಲ್ಲೊಂದು ಎಂದು ಅಭಿಪ್ರಾಯಪಟ್ಟರು.

ಗ್ರಾಮದ ಮುಖಂಡರಾದ ಶಿವಪ್ರಕಾಶ್‌, ಗುರುಸ್ವಾಮಿ, ಜಿಪಂ ಮಾಜಿ ಅಧ್ಯಕ್ಷ ಎಲ್.ಬಿ. ರಾಜಶೇಖರ್‌ ಮತ್ತಿತರರು ಇದ್ದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ‘ಕಲ್ಯಾಣ ದರ್ಶನ’ ಕಾರ್ಯಕ್ರಮದ ಅಂಗವಾಗಿ ಗ್ರಾಮವನ್ನು ಗ್ರಾಮಸ್ಥರು ಸ್ವಚ್ಛಗೊಳಿಸಿ ಸ್ವಚ್ಚತಾ ಜಾಗೃತಿ ಮೂಡಿಸಿದರು. ವಚನ ಕಿರುಹೊತ್ತಿಗೆಯನ್ನು ತಲೆ ಮೇಲೆ ಹೊತ್ತು ಮೆರವಣಿಗೆ ಮಾಡಿ ಡಾ| ಶಿವಮೂರ್ತಿ ಮುರುಘಾ ಶರಣರನ್ನು ಸ್ವಾಗತಿಸಿದರು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.