ಪರಿಹಾರ ವಿತರಣೆಯಲ್ಲಿ ತಾರತಮ್ಯ

ನಿರಾಶ್ರಿತರ ಆರೋಪ ಅಧಿಕಾರಿಗಳ ಧೋರಣೆ ಖಂಡಿಸಿ ಧರಣಿ ಸತ್ಯಾಗ್ರಹ

Team Udayavani, Nov 21, 2019, 3:15 PM IST

21-November-16

ಹೊಳೆಆಲೂರ: ನೆರೆಹಾವಳಿಯಿಂದ ಮನೆ ಕಳೆದುಕೊಂಡು ನಿರ್ಗತಿಕರಾಗಿರುವ ನಿರಾಶ್ರಿತರ ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡಿರುವ ಧೋರಣೆ ಖಂಡಿಸಿ ಹೊಳೆಆಲೂರ ನಾಡ ಕಚೇರಿ ಎದುರು ಸಾರ್ವಜನಿಕರು ಬೆಳಗ್ಗೆಯಿಂದ ಸಂಜೆಯವರೆಗೆ ಧರಣಿ ಸತ್ಯಾಗ್ರಹ ನಡೆಸಿದರು.

ಸಂಜೆ ತಹಶೀಲ್ದಾರ್‌ ಸಮಾಧಾನ ಪಡಿಸಿದ್ದರಿಂದ ಧರಣಿ ಕೈಬಿಡಲಾಯಿತು. ಮೊದಲ ಹಂತದಲ್ಲಿ ಅವಕಾಶ ವಂಚಿತರಾಗಿದ್ದ ನಿರಾಶ್ರಿತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ಪರಿಣಾಮ ಪುನಃ ಸಮೀಕ್ಷೆ ಮಾಡಿ 320 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಆದರೆ ಅವರಿಗೆ ಇದುವರೆಗೆ ಜಿಪಿಎಸ್‌ ಮಾಡದಿರುವುದರಿಂದ ಪರಿಹಾರ ಬಂದಿರಲಿಲ್ಲ. ಸಂಪೂರ್ಣ ಬಿದ್ದ ಮನೆಗಳನ್ನು ಎ ಗ್ರೇಡ್‌ನ‌ಲ್ಲಿ ಪರಿಗಣಿಸುವ ಬದಲು ಕೇವಲ ಸಿ ಗ್ರೇಡ್‌ ನೀಡಿದ್ದರಿಂದ ಆಕ್ರೋಶಗೊಂಡ ಸಂತ್ರಸ್ತರು ಎಲ್ಲವನ್ನು ಸರಿಪಡಿಸುವಂತೆ ಧರಣಿ ಸತ್ಯಾಗ್ರಹ ಕೈಗೊಂಡಿದ್ದರು.

ಇವರನ್ನು ಸಮಾಧಾನ ಪಡಿಸಲು ಸ್ಥಳಕ್ಕೆ ಭೇಟಿ ನೀಡಿದ ಉಪ ತಹಶೀಲ್ದಾರ್‌ ಕೆ.ವೈ. ಬೆಟಗೇರಿ, ಕಂದಾಯ ಅಧಿಕಾರಿ ಆರ್‌.ಸಿ.ಬಾರಕೇರ, ಪಿಎಸ್‌ಐ ಪರಮೇಶ್ವರ ಕವಟಗಿ ಸಂತ್ರಸ್ತರ ಮನವೊಲಿಸಲು ಪ್ರಯತ್ನಿಸಿದರೂ ಅದಕ್ಕೆ ನಿರಾಶ್ರಿತರು ಜಗ್ಗಲಿಲ್ಲ. ಸಂಜೆ 5ಕ್ಕೆ ಧರಣಿ ನಿರತ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಜೆ.ಬಿ. ಜಕ್ಕನಗೌಡ್ರ ಮಾತನಾಡಿ, ಸರಕಾರ ರಾಜೀವಗಾಂಧಿ ನಿಗಮದ ತಂತ್ರಾಂಶ ತಾತ್ಕಾಲಿಕವಾಗಿ ಬಂದ್‌ ಮಾಡಿರುವುದರಿಂದ 320 ಮನೆಗಳ ಜಿಪಿಎಸ್‌ ಕೆಲಸ ನಿಂತಿದ್ದು, ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟು ನಾನೇ ಸ್ವತಃ ಹಾನಿಗೊಳಗಾದ ಪ್ರತಿ ಮನೆಗೆ ಭೇಟಿ ನೀಡಿ ಶೀಘ್ರ ಪರಿಹಾರ ಒದಗಿಸಿ ನಿಜವಾದ ಸಂತ್ರಸ್ತರಿಗೆ ಪ್ರಾಮಾಣಿಕವಾಗಿ ನ್ಯಾಯ ಕೊಡಿಸುತ್ತೇನೆ ಎಂದು ಭರವಸೆ ನೀಡಿದರು.ಇದರಿಂದಾಗಿ ಧರಣಿ ಕೈಬಿಡಲಾಯಿತು.

ನರಗುಂದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರವೀಣ ಯಾವಗಲ್ಲ, ತಾ.ಪಂ. ಅಧ್ಯಕ್ಷ ಪ್ರಕಾಶ ತಿರಕನಗೌಡ್ರ, ಪ್ರಕಾಶ ಬಜೇಂತ್ರಿ, ಬಸವರಾಜ ಪಾಟೀಲ, ಎಫ್‌.ಎಸ್‌.ಚಿಕ್ಕಮಣ್ಣೂರ, ಮಹಾಬಳೇಶ ಗಾಣಿಗೇರ, ವಾಣಿಜ್ಯೋದ್ಯಮ ಸಂಸ್ಥೆ ಮಾಜಿ ಅಧ್ಯಕ್ಷ ಎಸ್‌.ಜಿ. ತೋಟದ, ಗ್ರಾ.ಪಂ. ಅಧ್ಯಕ್ಷೆ ಸುಮಂಗಲಾ ಕಾತರಕಿ, ಉಪಾಧ್ಯಕ್ಷೆ ಸರೋಜಮ್ಮ ಗೌರಿಮಠ, ರೈತ ಸಂಘದ ಅಧ್ಯಕ್ಷೆ ಶಾಂತಾ ಕಾತರಕಿ, ಶರಣಮ್ಮ ಯಾದವಾಡ, ಲಕ್ಷ್ಮೀ ಭಾಯಿ ಹೆಗ್ರಿ, ಭಾರತಿ ಕಾತರಕಿ, ಶಾವಕ್ಕ ಕಂದಗಲ್ಲ, ದ್ರಾಕ್ಷಾಯಣಿ ಹೆಬ್ಬಳ್ಳಿ ಶಾಂತಾ ದೂಡ್ಡಮನಿ, ಲಕ್ಷ್ಮೀಭಾಯಿ ಮಡಿವಾಳರ ಇದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.