ಎತ್ತುಗಳಿಗೆ ನಾಲು ಕಟ್ಟುವವರ ಜೀವನ ಬೀದಿ ಪಾಲು!

ಕೃಷಿ ಯಾಂತ್ರೀಕರಣದಿಂದ ಕೌಟುಂಬಿಕ ಉದ್ಯೋಗಕ್ಕೆ ಹೊಡೆತ

Team Udayavani, May 27, 2019, 2:51 PM IST

27-May-22

ಹೊನ್ನಾಳಿ:ಎತ್ತಿಗೆ ಹಲ್ಲೆ ಕಟ್ಟುವ ದೃಶ್ಯ.

ಹೊನ್ನಾಳಿ: ಕಾಲ ಬದಲಾದಂತೆ ಕೃಷಿ ಚಟುವಟಿಕೆಗಳಲ್ಲೂ ಬದಲಾವಣೆಗಳು ಕಂಡು ಬರುತ್ತಿವೆ. ಒಂದು ಕಾಲದಲ್ಲಿ ಎತ್ತುಗಳಿಲ್ಲದಿದ್ದರೆ ಬೇಸಾಯವೇ ಇಲ್ಲ ಎನ್ನುವ ಪರಿಸ್ಥಿತಿ ಇತ್ತು. ಕೃಷಿ ಯಾಂತ್ರೀಕರಣದಿಂದ ಎತ್ತುಗಳ ಪ್ರಾಮುಖ್ಯತೆ ಕ್ಷೀಣಿಸಿ, ಎತ್ತಿನ ಗೊರಸುಗಳಿಗೆ ನಾಲು(ಹಲ್ಲೆ) ಕಟ್ಟುವ ಕಾಯಕಕ್ಕೆ ದೊಡ್ಡ ಹೊಡೆತ ಬಿದ್ದು, ಇದನ್ನೆ ನಂಬಿದ್ದ ಕುಟುಂಬಗಳು ಬೀದಿಗೆ ಬಂದು ನಿಂತಿವೆ.

ಹಳ್ಳಿಗಳಲ್ಲಿ ಪ್ರತಿ ಮನೆ ಮನೆಗೆ ಎತ್ತುಗಳಿದ್ದಾಗ ವರ್ಷಕ್ಕೆ 2 ಬಾರಿ ಎತ್ತುಗಳಿಗೆ ನಾಲು ಕಟ್ಟುವ ಕಾಯಕ ಮಾಡಿಕೊಂಡು ತಮ್ಮ ಸಂಸಾರದ ನೊಗವನ್ನು ಹೊತ್ತು ಬದುಕಿನ ಬಂಡಿ ಸಾಗಿಸುತ್ತಿದ್ದರು.

ಜಾಗತೀಕರಣ, ಔದ್ಯೋಗಿಕರಣದಿಂದ ಎತ್ತುಗಳ ಸಂಖ್ಯೆ ಕಡಿಮೆಯಾದಂತೆ ಹಲ್ಲೆ ಕಟ್ಟುವ ಕುಟುಂಬಗಳಿಗೆ ಇನ್ನಿಲ್ಲದ ತೊಂದರೆಯಾಗಿ ಕೆಲ ಕುಟುಂಬಗಳು ಬೇರೆ ವೃತ್ತಿ ಮಾಡಿಕೊಂಡು ತಮ್ಮ ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿದ್ದಾರೆ. ಏನೇ ಆಗಲಿ ನಮ್ಮ ಪೂರ್ವಜರು ಮಾಡಿಕೊಂಡು ಬರುತ್ತಿದ್ದ ಎತ್ತುಗಳ ಗೊರಸುಗಳಿಗೆ ಹಲ್ಲೆ ಕಟ್ಟುವ ಕಾಯಕವನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಚೀಲೂರು ಗ್ರಾಮದ ಖಲೀಲ ಹೇಳುತ್ತಾರೆ.

ತಂದೆ ಸಬ್‌ಜಾನ್‌ಸಾಬ್‌ ಬದುಕಿನ ದಾರಿ ತೋರಿಸಿಕೊಟ್ಟಿರುವ ಕಾಯಕ ನಾಲು(ಹಲ್ಲೆ) ಕಟ್ಟುವುದು. ಎತ್ತುಗಳು ದೇವರ ಸ್ವರೂಪ. ಬಸವಣ್ಣನ ಪಾದಗಳಿಗೆ ನಾಲಾಗಳು ಪಾದರಕ್ಷೆಗಳಿದ್ದಂತೆ. ನಾಲು ಕಟ್ಟಿದ ಮೇಲೆ ಎತ್ತುಗಳು ಸಂತೋಷದಿಂದ ಕುದುರೆ ಓಡಿದಂತೆ ಡಾಂಬಾರ್‌ ರಸ್ತೆಗಳಲ್ಲಿ, ಹೊಲ ಗದ್ದೆಗಳಲ್ಲಿ, ಬದುಗಳಲ್ಲಿ ಸಂಚರಿಸುತ್ತವೆ. ಇದೊಂದು ಪುಣ್ಯದ ಕಾಯಕ ಎಂದು ನನ್ನ ತಂದೆ ಸಬ್‌ಜಾನ್‌ಸಾಬ್‌ ಹೇಳುತ್ತಿದ್ದ ಕಾರಣ ಈ ಕಾಯಕವನ್ನು ಮಾಡುತ್ತಿದ್ದೇನೆ. ಈ ಕೆಲಸಕ್ಕೆ ಸೊಂಟ ಗಟ್ಟಿ ಇರಬೇಕು. ಶಕ್ತಿ ಇರುವಷ್ಟು ದಿನ ಈ ಕೆಲಸ ಮಾಡುತ್ತೇನೆ. ಮುಂದಿನದು ದೇವರಿಗೆ ಬಿಟ್ಟಿದ್ದು ಎನ್ನುತ್ತಾರೆ ಖಲೀಲ್.

ಹಲ್ಲೆ ಕಟ್ಟಲು ಕಬ್ಬಿಣದ ಮೊಳೆಗಳು, ನಾಲಗಳು, ಸುತ್ತಿಗೆ, ಹಗ್ಗ ಸೇರಿದಂತೆ ಇತರ ಪರಿಕರಗಳನ್ನು ತೆಗೆದುಕೊಂಡು ಕರೆದವರ ಮನೆ ಬಾಗಿಲಿಗೆ ತೆರಳಿ ಕೆಲಸ ಮಾಡಿ ಬರುತ್ತೇನೆ. ಪ್ರಸ್ತುತ ದಿನದಲ್ಲಿ ಜೋಡೆತ್ತಿಗೆ ಹಲ್ಲೆ ಹಾಕಲು ರೂ. 700ರಿಂದ 800 ಪಡೆಯುತ್ತಿದ್ದು, ಕೆಲಸ ಸರಿಯಾಗಿ ಸಿಕ್ಕರೆ ತಿಂಗಳಿಗೆ ರೂ. 8 ಸಾವಿರದವರೆಗೆ ಆಗುತ್ತದೆ. ಅದರಲ್ಲಿ ಗಂಡ, ಹೆಂಡತಿ ಮತ್ತು ಮೂವರು ಮಕ್ಕಳ ಸಂಸಾರ ಸಾಗಬೇಕು ಎಂದು ಅವರು ಹೇಳಿದರು.

ಗ್ರಾಮೀಣ ಕಸಬುಗಳಲ್ಲಿ ಹಲ್ಲೆ ಕಟ್ಟುವುದೂ ಒಂದಾಗಿದ್ದು ಸರ್ಕಾರ ನಮ್ಮಂತವರಿಗೆ ದಾರಿ ತೋರಬೇಕು ಎಂದು ಹೇಳಿದರು.

ಎತ್ತುಗಳಿಗೆ ಹಲ್ಲೆ ಕಟ್ಟದಿದ್ದರೆ ಡಾಂಬರ್‌ ರಸ್ತೆಗಳಲ್ಲಿ ಮುಂದೆ ಸಾಗುವುದಿಲ್ಲ. ಮನುಷ್ಯರಿಗೆ ಚಪ್ಪಲಿಗಳು ಹೇಗೆ ಅವಶ್ಯಕವೋ ಹಾಗೆಯೇ ಹೂಡು ಎತ್ತುಗಳಿಗೆ ಹಲ್ಲೆಗಳು ಅವಶ್ಯಕ.
ನೀಲಪ್ಪ, ರೈತ, ಹಿರೇಮಠ ಗ್ರಾಮ. ಹೊನ್ನಾಳಿ.

10 ವರ್ಷಗಳ ಹಿಂದೆ ತಾಲೂಕಿನಲ್ಲಿ ಸರಿ ಸುಮಾರು 35 ಜನ ನಾಲು ಕಟ್ಟುತ್ತಿದ್ದರು. ಬೇಸಾಯ ಪದ್ಧತಿ ಬದಲಾದಂತೆ ಹಾಗೂ ಎತ್ತುಗಳ ಸಂಖ್ಯೆ ಕಡಿಮೆಯಾದಂತೆ ಇದರಲ್ಲಿ ಬದುಕುವುದು ಕಷ್ಟ ಎಂದು ಅನೇಕರು ಬೇರೆ ವೃತ್ತಿ ಹುಡುಕಿಕೊಂಡಿದ್ದಾರೆ. ಸದ್ಯಕ್ಕೆ ತಾಲೂಕಿನಲ್ಲಿ ಕೇವಲ 6ರಿಂದ 8 ಜನರು ನಾಲು ಕಟ್ಟುವ ಕಾಯಕದಲ್ಲಿ ತೊಡಗಿದ್ದಾರೆ.
•ಖಲೀಲ್,
ನಾಲು ಕಟ್ಟುವ ಕೆಲಸಗಾರ, ಚೀಲೂರು, ನ್ಯಾಮತಿ ತಾಲೂಕು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.