ಹಣ್ಣುಗಳ ರಾಜ ‘ಮಾವು’ಗೆ ಬೇಡಿಕೆ

ಮಾರುಕಟ್ಟೆಗೆ ಲಗ್ಗೆ ಇಟ್ಟ ವಿವಿಧ ತಳಿಗಳ ಮಾವಿನ ಹಣ್ಣುಗಳ ಖರೀದಿ ಜೋರು

Team Udayavani, May 15, 2019, 10:28 AM IST

15-May-4

ಹೊನ್ನಾಳಿ: ಪಟ್ಟಣದ ತುಮ್ಮಿನಕಟ್ಟೆ ರಸ್ತೆ ಬದಿಯಲ್ಲಿ ಸಾರ್ವಜನಿಕರು ಮಾವಿನ ಹಣ್ಣು ಖರೀದಿಸುತ್ತಿರುವುದು.

ಹೊನ್ನಾಳಿ: ಹಣ್ಣಿನ ರಾಜ ಮಾವು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ವಾರದಿಂದ ಮಾವಿನ ಹಣ್ಣಿನ ಮಾರಾಟ ಪ್ರಾರಂಭವಾಗಿದೆ. ಮಾವು ಪ್ರಿಯರು ಹಣ್ಣುಗಳಿಗೆ ಮುಗಿಬೀಳುತ್ತಿದ್ದಾರೆ.

ಹೋಳಿಗೆ-ಸೀಕರಣೆ ಅತ್ಯುತ್ತಮ ಕಾಂಬಿನೇಷನ್‌ ಆಗಿದ್ದು, ಅದನ್ನು ಸವಿಯಲು ಅಗತ್ಯವಾದ ಮಾವಿನ ಹಣ್ಣು ಅರಸಿ ಕೆಲವರು ಶಿವಮೊಗ್ಗ, ದಾವಣಗೆರೆಯಂಥ ನಗರಗಳಿಗೂ ತೆರಳುತ್ತಾರೆ. ಸದ್ಯಕ್ಕೆ ಹೊನ್ನಾಳಿ ಪಟ್ಟಣದಲ್ಲೂ ಅತ್ಯುತ್ತಮ ತಳಿಯ, ರಾಸಾಯನಿಕ ರಹಿತ ಮತ್ತು ಸಂಸ್ಕರಣೆ ಮಾಡಿದ ಮಾವಿನ ಹಣ್ಣುಗಳು ದೊರೆಯುತ್ತಿವೆ.

ಪಟ್ಟಣದ ತುಮ್ಮಿನಕಟ್ಟೆ ರಸ್ತೆ, ಖಾಸಗಿ ಬಸ್‌ ನಿಲ್ದಾಣದ ಆವರಣ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ವೃತ್ತ, ತಾಲೂಕು ಕಚೇರಿ ವೃತ್ತ, ಟಿ.ಬಿ. ವೃತ್ತ ಸೇರಿದಂತೆ ಮತ್ತಿತರೆಡೆ ಮಾವಿನ ಹಣ್ಣುಗಳನ್ನು ಮಾರಾಟ ಮಾಡಲಾಗುತ್ತಿದೆ. ಬಾದಾಮು (ಆಪೂಸ್‌), ಮಲ್ಲಿಕಾ, ರಸಪೂರಿ ಮತ್ತಿತರ ತಳಿಗಳ ಮಾವಿನ ಹಣ್ಣುಗಳನ್ನು ಕಳೆದ ಒಂದು ವಾರದಿಂದ ಮಾರಾಟ ಮಾಡಲಾಗುತ್ತಿದೆ. ತಾಜಾ ಹಣ್ಣುಗಳನ್ನು ತಂದು ಅಂದೇ ಮಾರಾಟ ಮಾಡುವುದು ಇಲ್ಲಿನ ವಿಶೇಷ.

ಮಾವಿನ ಹಣ್ಣುಗಳ ದರ: ಮಾವಿನ ಹಣ್ಣಿನ ಸೀಜನ್‌ ಆರಂಭವಾಗಿದ್ದು, ಕೆಲ ತಳಿಯ ಹಣ್ಣುಗಳು ಕಡಿಮೆ ದರದಲ್ಲಿ ದೊರೆಯುತ್ತಿವೆ ಎನ್ನಲಾಗಿದೆ. ರತ್ನಗಿರಿ (100 ರೂ. ಪ್ರತಿ ಕೆಜಿಗೆ), ರಸಪೂರಿ (70 ರೂ. ಪ್ರತಿ ಕೆಜಿಗೆ), ಬಾದಾಮಿ (60 ರೂ. ಪ್ರತಿ ಕೆಜಿಗೆ), ಮಲಗೋವಾ (60 ರೂ. ಪ್ರತಿ ಕೆಜಿಗೆ), ಮಲ್ಲಿಕಾ (50 ರೂ. ಪ್ರತಿ ಕೆಜಿಗೆ), ಸಿಂಧೂರ (40 ರೂ. ಪ್ರತಿ ಕೆಜಿಗೆ), ತೋತಾಪುರಿ (40 ರೂ. ಪ್ರತಿ ಕೆಜಿಗೆ), ಜವಾರಿ (40 ರೂ. ಪ್ರತಿ ಕೆಜಿಗೆ).

‘ನಾವು ಮಾವಿನ ಕಾಯಿ ಇಲ್ಲವೇ ಹಣ್ಣುಗಳನ್ನು ಮಾರಾಟ ಮಾಡುವುದಿಲ್ಲ. ನಾವೇ ಸ್ವತಃ ಮಾವಿನ ಕಾಯಿಗಳನ್ನು ಭತ್ತದ ಹುಲ್ಲಿನಲ್ಲಿ ಹಾಕಿ ನೈಸರ್ಗಿಕವಾಗಿ ಹಣ್ಣು ಆಗುವಂತೆ ಮಾಡುತ್ತೇವೆ. ನಂತರ, ಮಾವಿನ ಹಣ್ಣುಗಳನ್ನು ರಸ್ತೆ ಬದಿ ಇಟ್ಟುಕೊಂಡು ಮಾರಾಟ ಮಾಡುತ್ತೇವೆ. ಇದರಿಂದ ಗ್ರಾಹಕರಿಗೆ ಉತ್ತಮ ಹಣ್ಣು ದೊರೆಯುತ್ತದೆ. ತಮಗೆ ಮಧ್ಯವರ್ತಿಗಳ ಕಾಟವೂ ಇರುವುದಿಲ್ಲ’ ಎನ್ನುತ್ತಾರೆ ರೈತ ರಾಜಪ್ಪ.

ರೈತರು ವ್ಯಾಪಾರದಲ್ಲಿ ಮೋಸ ಮಾಡುವುದಿಲ್ಲ ಎಂಬ ನಂಬಿಕೆ ಜನರಿಗಿದೆ. ನೈಸರ್ಗಿಕ ವಿಧಾನದಲ್ಲಿ ರೈತರು ಹಣ್ಣು ಮಾಡಿದ ಮಾವಿನ ಫಸಲನ್ನು ನಾವು ಖರೀದಿಸುತ್ತೇವೆ. ಈ ತಾಜಾ ಹಣ್ಣನ್ನು ಮನೆಮಂದಿ ಎಲ್ಲರೂ ಇಷ್ಟಪಡುತ್ತಾರೆ. ನೈಸರ್ಗಿಕ ವಿಧಾನದಿಂದ ಹಣ್ಣು ಮಾಡಿರುವುದರಿಂದ ವಿಶಿಷ್ಟ ರುಚಿ-ಸಿಹಿ ಇರುತ್ತದೆ ಎಂಬುದು ತಾಲೂಕಿನ ಬಿದರಗಡ್ಡೆ ಗ್ರಾಮದ ಬಿ.ಎಚ್. ಕುಬೇರಗೌಡರ ಅನಿಸಿಕೆ.

ಒಂದು ತಿಂಗಳಿಂದೀಚೆಗೆ ಮಾವಿನ ಹಣ್ಣಿನ ಸೀಜನ್‌ ಪ್ರಾರಂಭವಾಗಿದೆ. ಈಗ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ದರ ಕಡಿಮೆ ಇದೆ. ಮಾವಿನ ಹಣ್ಣಿನ ವ್ಯಾಪಾರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.
ಮಹಮ್ಮದ್‌ ಇಮ್ರಾನ್‌,ಸಮೀವುಲ್ಲಾ, ರಿಯಾಜ್‌
ಮಾವಿನ ಹಣ್ಣಿನ ವ್ಯಾಪಾರಿಗಳು, ಹೊನ್ನಾಳಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.