ಲೋಕದ ಅಂಕು ಡೊಂಕು ತಿದ್ದಿದ ದಾಸರು

ದಾಸರ ಕೀರ್ತನೆಗಳನ್ನು ಮಕ್ಕಳೂ ಅಭ್ಯಸಿಸಲಿಮಹಾತ್ಮರು ಜಾತಿಗೆ ಸೀಮಿತ ಬೇಡ

Team Udayavani, Nov 16, 2019, 11:25 AM IST

16-November-4

ಹೊನ್ನಾಳಿ: ಕನಕದಾಸರ ಸಾಹಿತ್ಯದಲ್ಲಿ ನೈತಿಕ ಮೌಲ್ಯಗಳು ಬೀಜಮಂತ್ರದಂತೆ ಬಿತ್ತರಗೊಂಡಿವೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಪಟ್ಟಣದ ಪ.ಪಂ.ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನಕದಾಸರು ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು. ಇಂತಹ ದಾರ್ಶನಿಕರು ಸಮಾಜದ ಅಂಕುಡೊಂಕುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.

ಕೇವಲ ವೇದಿಕೆಗಳಲ್ಲಿ ಬರೀ ಭಾಷಣ ಮಾಡದೆ ಅವರ ಆದರ್ಶಗಳನ್ನು ಮೊದಲು ಮೈಗೂಡಿಸಿಕೊಂಡು, ಅವರು ಹಾಕಿಕೊಟ್ಟ ಮೇಲ್ಪಂಕ್ತಿ ಯಲ್ಲಿ ನಡೆದಾಗ ಮಾತ್ರ ಅವರ ಜಯಂತಿ ಆಚರಣೆಗೆ ಸಾರ್ಥಕತೆ ಬರುತ್ತದೆ ಎಂದರು. ಕನಕದಾಸ, ಬುದ್ಧ, ಬಸವ,ಅಂಬಿಗರ ಚೌಡಯ್ಯ, ಕಿತ್ತೂರುರಾಣಿ ಚೆನ್ನಮ್ಮ, ವಿವೇಕಾನಂದ ಇನ್ನೂ ಅನೇಕ ಅವತಾರ ಪುರುಷರು ಜನಿಸಿದ್ದಾರೆ. ಅಂತಹ ಮಹನೀಯರನ್ನು ಒಂದೇ ಜಾತಿಗೆ ಸೀಮಿತ ಮಾಡಬೇಡಿ. ಅವರು ಸರ್ವಜನರಿಗೂ ಸಲ್ಲುವ ಆದರ್ಶ ಪುರುಷರು. ಅವರ ಜಯಂತಿತ್ಯುತ್ಸವದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮಾಡಬೇಕು ಎಂದರು.

ದಾಸ ಸಾಹಿತ್ಯದಲ್ಲಿ ಅತೀ ಶ್ರೇಷ್ಠವಾದ ಕನಕದಾಸರ ಕೀರ್ತನೆಗಳನ್ನು ಮಕ್ಕಳಿಗೆ ಪರಿಚಯ ಮಾಡುವ ರೀತಿಯಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು. ಕೀರ್ತನೆಗಳನ್ನು ಅಭ್ಯಾಸ ಮಾಡುವ ಮಕ್ಕಳು ಸಂಸ್ಕಾರವಂತರಾಗಿ ಸನ್ಮಾರ್ಗದಲ್ಲಿ ನಡೆಯುತ್ತಾರೆ ಎಂದರು.

ಉಪನ್ಯಾಸಕ ಬಸವರಾಜ್‌ ಕನಕದಾಸರ ಬಗ್ಗೆ ಉಪನ್ಯಾಸ ನೀಡಿ, ಕನಕದಾಸರು ರಚಿಸಿದ ಹರಿಭಕ್ತಸಾರ ಕನ್ನಡ ಭಗವದ್ಗೀತೆ ಎಂದು ಚಿರಪರಿಚಿತವಾಗಿದೆ ಎಂದರು. ತಾಲೂಕು ಕುರುಬ ಸಮಾಜದ ಮುಖಂಡರಾದ ಕುಂಬಳೂರು ಹಾಲಪ್ಪ, ತಹಶೀಲ್ದಾರ್‌ ತುಷಾರ್‌ ಬಿ ಹೊಸೂರ, ಜಿ.ಪಂ ಸದಸ್ಯರಾದ ಎಂ.ಆರ್‌. ಮಹೇಶ್‌, ಡಿ.ಜಿ. ವಿಶ್ವನಾಥ್‌ ಮಾತನಾಡಿದರು.

ತಾ.ಪಂ.ಅಧ್ಯಕ್ಷೆ ಚಂದ್ರಮ್ಮ ಹಾಲೇಶಪ್ಪ, ಜಿ.ಪಂ. ಉಪಾಧ್ಯಕ್ಷ ಸುರೇಂದ್ರನಾಯ್ಕ, ಪ.ಪಂ. ಸದಸ್ಯರಾದ ಧರ್ಮಪ್ಪ, ಸುರೇಶ್‌ ಹೊಸಕೇರಿ, ಕೆ.ವಿ. ಶ್ರೀಧರ್‌, ಪ.ಪಂ. ಮುಖ್ಯಾಧಿಕಾರಿ ವೀರಭದ್ರಯ್ಯ, ಕುರುಬ ಸಮಾಜದ ಮುಖಂಡರಾದ ಕತ್ತಿಗೆ ನಾಗರಾಜ್‌, ವಾಸಪ್ಪ, ರಾಜು ಕಣಗಣ್ಣಾರ್‌, ಬಿಇಒ ರಾಜೀವ್‌, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸಣ್ಣ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.