ಆದರ್ಶ ಜೀವನ ಸಾಗಿಸಿ
ಜನಸಂಖ್ಯೆ ಸ್ಫೋಟ ನುಂಗುತ್ತಿದೆ ದೇಶದ ಅಭಿವೃದ್ಧಿ: ಎಂ.ಪಿ. ರಮೇಶ
Team Udayavani, Dec 14, 2019, 11:29 AM IST
ಹೊನ್ನಾಳಿ: ಸಾಮೂಹಿಕ ವಿವಾಹಗಳಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕಬಹುದು ಎಂದು ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.
ತಾಲೂಕಿನ ಕೂಲಂಬಿ ಗ್ರಾಮದ ಶ್ರೀ ಗುರು ಗದ್ದಿಗೇಶ್ವರಸ್ವಾಮಿ ಕಾರ್ತಿಕೋತ್ಸವ, ರಥೋತ್ಸವ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿದರು. ಕೂಲಂಬಿಯ ಶ್ರೀ ಗುರು ಗದ್ದಿಗೇಶ್ವರ ಸ್ವಾಮಿಯ ಸುಕ್ಷೇತ್ರದಲ್ಲಿ ನಡೆಯುತ್ತಿರುವ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸತಿ-ಪತಿಗಳಾಗುವುದು ಪೂರ್ವಜನ್ಮದ ಪುಣ್ಯದ ಫಲವಾಗಿದೆ. ಆದ್ದರಿಂದ, ಇಲ್ಲಿ ಸಂಗಾತಿಗಳಾಗಿರುವವರು ಆದರ್ಶ ಜೀವನ ನಡೆಸಬೇಕು ಎಂದು ಹೇಳಿದರು.
ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ಬಿಜೆಪಿ ಮುಖಂಡ ಎಂ.ಪಿ. ರಮೇಶ್ ಮಾತನಾಡಿ, ಚಿಕ್ಕ ಸಂಸಾರ ದೇಶಕ್ಕೆ ಹಿತಕರ. ಬೆಳೆಯುತ್ತಿರುವ ಜನಸಂಖ್ಯೆ ನಮ್ಮ ದೇಶದ ಎಲ್ಲಾ ಅಭಿವೃದ್ಧಿಯನ್ನು ನುಂಗಿ ಹಾಕುತ್ತಿದೆ. ಆದ್ದರಿಂದ, ನಾವೆಲ್ಲರೂ ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗಬೇಕಿದೆ. ಹಾಗಾಗಿ, ಸಾಮೂಹಿಕ ವಿವಾಹದಲ್ಲಿ ಸತಿ-ಪತಿಗಳಾದವರು ಚಿಕ್ಕ ಸಂಸಾರಕ್ಕೆ ಮೊದಲ ಆದ್ಯತೆ ನೀಡಬೇಕು. ಹೆಣ್ಣಾಗಲಿ, ಗಂಡಾಗಲಿ, ನಮಗೆ ಒಂದೇ ಮಗು ಸಾಕು ಎಂಬ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸಂದೇಶವನ್ನು ಎಂ.ಪಿ. ರಮೇಶ್ ವಾಚಿಸಿದರು. ಶ್ರೀ ಗುರು ಗದ್ದಿಗೇಶ್ವರ, ಬಸವಣ್ಣ, ರಾಮೇಶ್ವರ ಟ್ರಸ್ಟ್ ಕಮಿಟಿ ಅಧ್ಯಕ್ಷ ಟಿ.ಎಸ್.
ಸೋಮಶೇಖರ್ ಮಾತನಾಡಿದರು. ಸಂಸದ ಜಿ.ಎಂ. ಸಿದ್ಧೇಶ್ವರ್ ಪತ್ನಿ ಗಾಯತ್ರಿ ಸಿದ್ಧೇಶ್ವರ್ ವಧು-ವರರಿಗೆ ಬಟ್ಟೆ ಉಚಿತವಾಗಿ ವಿತರಿಸಿದರು.
ಜಿಪಂ ಸದಸ್ಯೆ ದೀಪಾ ಜಗದೀಶ್, ಶಿಮುಲ್ ನಿರ್ದೇಶಕ ಬಿ.ಜಿ. ಬಸವರಾಜಪ್ಪ, ತಾಪಂ ಸದಸ್ಯೆ ಅಂಬುಜಾಕ್ಷಿ ಮರುಳಸಿದ್ಧಪ್ಪ, ಕೂಲಂಬಿ ಗ್ರಾಪಂ ಅಧ್ಯಕ್ಷೆ ಗಾಯತ್ರಿ ಪ್ರಶಾಂತ್, ಸದಸ್ಯರಾದ ಜಿ.ಎಸ್. ಸಿದ್ಧೇಶ್, ಕೆ.ಆರ್. ಅಜ್ಜಯ್ಯ, ಟಿ.ಜಿ. ರಮೇಶ್, ಟಿ.ಬಿ.ಮಂಜುನಾಥ್, ತಹಸೀಲ್ದಾರ್ ತುಷಾರ್ ಬಿ.ಹೊಸೂರ್ ಇತರರು ಉಪಸ್ಥಿತರಿದ್ದರು. ಸಾಮೂಹಿಕ ವಿವಾಹ ಸಮಾರಂಭದಲ್ಲಿ 74 ಜೋಡಿ ದಾಂಪತ್ಯಕ್ಕೆ ಅಡಿ ಇಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ