ಶೌಚಾಲಯ ಕಾಮಗಾರಿ ಮುಗಿಸಿ

ಗುರಿ ತಲುಪದಿದ್ದರೆ ಶಿಸ್ತು ಕ್ರಮ•ನಿವೇಶನ ರಹಿತರ ಪಟ್ಟಿ ಮಾಡಿ

Team Udayavani, Jul 8, 2019, 3:10 PM IST

08-July-30

ಹೊನ್ನಾಳಿ: ತಾಪಂ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಎಲ್.ಭೀಮಾನಾಯ್ಕ ಮಾತನಾಡಿದರು.

ಹೊನ್ನಾಳಿ: ತಮಗೆ ನೀಡಿರುವ ಗುರಿ ಪ್ರಕಾರ ಈ ತಿಂಗಳ ಅಂತ್ಯದೊಳಗೆ ಅವಳಿ ತಾಲೂಕಿನಲ್ಲಿ ಶೌಚಾಲಯಗಳನ್ನು ನಿರ್ಮಾಣ ಕಾಮಗಾರಿ ಮುಗಿಸಬೇಕು. ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿ.ಪಂ ಉಪಕಾಯದರ್ಶಿ ಎಲ್.ಭೀಮಾನಾಯ್ಕ ಪಿಡಿಒಗಳಿಗೆ ಎಚ್ಚರಿಕೆ ನೀಡಿದರು.

ತಾಪಂನ ಸಾಮರ್ಥ್ಯಸೌಧದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅವಳಿ ತಾಲೂಕಿನಲ್ಲಿ ಶೌಚಾಲಯ ನಿರ್ಮಾಣ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು. ಬಾಕಿ ಇರುವ ಶೌಚಾಲಯ ನಿರ್ಮಾಣಕ್ಕೆ ತಕ್ಷಣ ಕ್ರಿಯಾಯೋಜನೆ ತಯಾರಿಸಿ ಜಿಪಂಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚಿಸಿದರು.

ನಿವೇಶನ ರಹಿತರಿಗೆ ಸೂರು ನೀಡಬೇಕೆಂಬುದು ಸರ್ಕಾರದ ನಿರ್ಧಾರ ವಾಗಿರುವುದರಿಂದ ಅವಳಿ ತಾಲೂಕಿನಲ್ಲಿ ಎಲ್ಲೆಲ್ಲಿ ನಿವೇಶನ ರಹಿತರು ಇರುತ್ತಾರೋ ಅಂತಹ ಅರ್ಹ ಫಲಾನುಭವಿಗಳ ಪಟ್ಟಿ ಮಾಡಿ ಅಂತಹವರಿಗೆ ನಿವೇಶನ ನೀಡಲು ಜಮೀನನ್ನು ಕಾಯ್ದಿರಿಸಬೇಕು ಎಂದು ತಿಳಿಸಿದರು.

ನರೇಗ ಯೋಜನೆಡಿಯಲ್ಲಿ ಕೂಲಿ ಆಧಾರಿತ, ಚೆಕ್‌ ಡ್ಯಾಂ ನಿರ್ಮಾಣ, ಸಸಿ ನೆಡುವ ಕಾರ್ಯಗಳಿಗೆ ಹೆಚ್ಚು ಒತ್ತು ನೀಡಿ ಕಾಮಗಾರಿಗಳನ್ನು ಈ ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಪಿಡಿಒಗಳಿಗೆ ತಾಕಿತು ಮಾಡಿದ ಅವರು, ಎಲ್ಲಿಯೂ ಕಳಪೆ ಕಾಮಗಾರಿಗೆ ಆಸ್ಪದ ನೀಡಬಾರದು ಎಂದರು.

ಗ್ರಾಪಂಗೆ ಆದಾಯ ಬರುವ ಕಂದಾಯಗಳನ್ನು ಇದರ ಜತೆ ಜತೆಯಲ್ಲಿಯೇ ವಸೂಲಿ ಮಾಡುವ ಕಾರ್ಯವನ್ನು ಕೂಡ ಮಾಡಬೇಕು ಎಂದ ಅವರು, ಗ್ರಾಪಂಗೆ ಆದಾಯ ಕೂಡ ಅಷ್ಟೇ ಮುಖ್ಯ ಎಂದರು.

ಜನ ಸಾಮಾನ್ಯರಿಗೆ ಸೇವೆ ನೀಡಲಿಕ್ಕೆ ಎಲ್ಲ ಗ್ರಾಪಂನಲ್ಲಿ ಸೇವಾ ಕೇಂದ್ರ ತೆರೆದಿರುವುದು. ಸಾರ್ವಜನಿಕರು ಸರ್ಕಾರದ ಯಾವ ಸೇವೆಯನ್ನು ಕೇಳುತ್ತಾರೋ ಅಂತಹ ಸೇವೆಗಳನ್ನು ನೀಡಬೇಕಾದದ್ದು ನಮ್ಮ ಕರ್ತವ್ಯ. ಆದ್ದರಿಂದ ಸರ್ಕಾರ ನಿಗದಿಪಡಿಸಿರುವ 106 ಸೇವೆಗಳನ್ನು ಒದಗಿಸಬೇಕು ಎಂದರು.

ಇಲಾಖೆ ನೀಡಿರುವ ಶೌಚಾಲಯ ನಿರ್ಮಾಣದ ಗುರಿ ಮುಟ್ಟದ ಪಿಡಿಒಗಳನ್ನು ಇದೇ ವೇಳೆ ತರಾಟೆಗೆ ತೆಗೆದುಕೊಂಡರು. ಜಿಪಂ ಯೋಜನಾಧಿಕಾರಿ ಲೋಕೇಶ್‌, ಸಹಾಯಕ ಯೋಜನಾಧಿಕಾರಿ ಶಶಿಧರ್‌, ತಾಪಂ ಇಒ ರಾಘವೇಂದ್ರ, ಪ್ರಭಾರಿ ಲೆಕ್ಕಾಧಿಕಾರಿ ಜಗನ್ನಾಥರಾವ್‌ ಇತರರು ಇದ್ದರು.

ಟಾಪ್ ನ್ಯೂಸ್

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.