ಜನರ ಸಮಸ್ಯೆ ಬಗೆಹರಿಸಿ
ಬರ-ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಸರ್ಕಾರ ಮುಂದಾಗಲಿ
Team Udayavani, May 16, 2019, 1:20 PM IST
ಹೊನ್ನಾಳಿ: ಪಟ್ಟಣದ ಗುರುಭವನದಲ್ಲಿ ತಾಲೂಕು ಅಖಂಡ ಕರ್ನಾಟಕ ರೈತ ಸಂಘ (ಪಕ್ಷಾತೀತ)ದ ವತಿಯಿಂದ ಹಮ್ಮಿಕೊಂಡಿದ್ದ ರೈತ ಹುತಾತ್ಮ ದಿನಾಚರಣೆ ಸಮಾರಂಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಸೋಮನಗುದ್ದು ರಂಗಸ್ವಾಮಿ ಮಾತನಾಡಿದರು.
ಹೊನ್ನಾಳಿ: ಕಳೆದ 2 ತಿಂಗಳಿನಿಂದಲೂ ರಾಜಕಾರಣಿಗಳು ಹಾಗೂ ಸರ್ಕಾರಗಳು ಬರಗಾಲ ಹಾಗೂ ಕುಡಿಯುವ ನೀರಿನ ತೊಂದರೆಗಳ ಬಗ್ಗೆ ಗಮನಹರಿಸದೆ ಚುನಾವಣೆ, ನೀತಿ ಸಂಹಿತೆ, ಫಲಿತಾಂಶ ಎಂದು ಕಾಲಹರಣ ಮಾಡುತ್ತಿದ್ದಾರೆ ಎಂದು ಅಖಂಡ ಕರ್ನಾಟ ರೈತ ಸಂಘದ ರಾಜ್ಯಾಧ್ಯಕ್ಷ ಸೋಮನಗುದ್ದು ರಂಗಸ್ವಾಮಿ ಹೇಳಿದರು.
ಗುರುಭವನದಲ್ಲಿ ಬುಧವಾರ ತಾಲೂಕು ಅಖಂಡ ಕರ್ನಾಟಕ ರೈತ ಸಂಘ (ಪಕ್ಷಾತೀತ)ದ ವತಿಯಿಂದ ಹಮ್ಮಿಕೊಂಡಿದ್ದ 37ನೇ ವರ್ಷದ ರೈತ ಹುತಾತ್ಮ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬರುವ ದಿನಗಳಲ್ಲಾದರೂ ಆಳುವ ಜನಪ್ರತಿನಿಧಿಗಳು ಕಾಲಹರಣ ಮಾಡದೆ ನೀರಿನ ಬವಣೆಯನ್ನು ನಿವಾರಿಸಲು ಮುಂದಾಗಬೇಕು. ಸಾಲಮನ್ನಾ ಯೋಜನೆಯಡಿ ಜಿಲ್ಲೆಜಿಲ್ಲೆಗೆ ಇರುವ ತಾರತಮ್ಯ ಹೋಗಲಾಡಿಸಿ ಸಣ್ಣ, ದೊಡ್ಡ ರೈತರೆನ್ನದೆ, ಜಾತಿ ಮತಗಳೆನ್ನದೇ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಒತ್ತಾಯಿಸಿದರು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ದೊಡ್ಡೇರಳ್ಳಿ ನಾಗರಾಜಪ್ಪ ಮಾತನಾಡಿ, ಮಳೆ ಬಿದ್ದ ತಕ್ಷಣ ರೈತರಿಗೆ ಗುಣವåಟ್ಟದ ಬಿತ್ತನೆ ಬೀಜ ಹಾಗೂ ರಾಸಾಯನಿಕ ಗೊಬ್ಬರ ಸಿಗುವಂತೆ ಸರ್ಕಾರ ವ್ಯವಸ್ಥೆ ಮಾಡಬೇಕು. ಬಗರ್ ಹುಕುಂ ಸಮಿತಿ ರಚನೆಯಾಗಬೇಕು. ತಾಲೂಕಿನ ಸರ್ವೆ ಇಲಾಖೆಯಲ್ಲಿನ ಕಾರ್ಯಗಳು ಮಂದ ಗತಿಯಲ್ಲಿ ಸಾಗಿದ್ದು, ರೈತರು ಅನೇಕ ಸಮಸ್ಯೆ ಎದುರಿಸುವಂತಾಗಿದೆ ಎಂದರು.
ಹಾಲಿಗೆ ನೀಡುವ ಪ್ರೋತ್ಸಾಹ ಧನವನ್ನು 6 ರೂ.ಗಳಿಂದ 10 ರೂ.ಗೆ ಹೆಚ್ಚಿಸಬೇಕು ಎಂದು ಅವರು ಆಗ್ರಹಿಸಿದರು.
ಸಂಘದ ನ್ಯಾಮತಿ ತಾಲೂಕು ಅಧ್ಯಕ್ಷ ಬೆಳಗುತ್ತಿ ಉಮೇಶ ಮಾತನಾಡಿ, ನ್ಯಾಮತಿ ತಾಲೂಕಿನ ವ್ಯಾಪ್ತಿಯಲ್ಲಿರುವ ಸುಮಾರು 50 ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸರ್ಕಾರ ಮುಂದಾಗಬೇಕು ಎಂದರು.
ತಾಲೂಕು ರೈತ ಸಂಘದ ಅಧ್ಯಕ್ಷ ಅರಬಗಟ್ಟೆ ಕೆ.ಸಿ.ಬಸಪ್ಪ ಮಾತನಾಡಿ, ಸರ್ಕಾರಿ ಅಧಿಕಾರಿಗಳು ರೈತರನ್ನು ಗುಲಾಮರಂತೆ ಕಾಣುತ್ತಿದ್ದು. ಇದನ್ನು ವಿರೋಧಿಸಲು ರೈತ ಸಂಘಟನೆ ಬಲಗೊಳ್ಳಬೇಕು. ರೆಸಾರ್ಟ್ ರಾಜಕಾರಣಕ್ಕೆ ಮುಂದಾಗುವ ಸರ್ಕಾರಗಳು ರೈತರನ್ನು ಸಾವಿನ ದವಡೆಗೆ ದೂಡುತ್ತಿವೆ. ರೈತರ ಪರ ಕೆಲಸಗಳಿಗೆ ಕೇಂದ್ರ ಸರ್ಕಾರವು ರಾಜ್ಯದತ್ತ ಹಾಗೂ ರಾಜ್ಯ ಸರ್ಕಾರವು ಕೇಂದ್ರದತ್ತ ಬೆರಳು ತೋರಿಸುವ ಪ್ರವೃತ್ತಿ ಕೊನೆಗೊಳ್ಳಬೇಕೆಂದು ಒತ್ತ್ತಾಯಿಸಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಮುನ್ನ ಕಡದಕಟ್ಟೆ ವೃತ್ತದಲ್ಲಿರುವ ಎಚ್.ಎಸ್. ರುದ್ರಪ್ಪನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೈತ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ರೈತ ಮುಖಂಡರಾದ ಹಾವೇರಿ ಪ್ರಕಾಶ ಬಾರ್ಕಿ, ಹಿರೇಕೆರೂರು ಬಸವನಗೌಡ, ಹೊಸಜೋಗ ಮುರುಗೇಶಪ್ಪ, ಸುಂಕದಕಟ್ಟೆ ಕರಿಬಸಪ್ಪ, ನೀಲಕಂಠ ರಾಯ್ಕರ, ಗೋಪಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದ ಮುಖ್ಯಮಂತ್ರಿಗಳು ಈಗಾಗಲೇ ಮತದಾನ ಮುಗಿದು ಮತಯಂತ್ರದಲ್ಲಿ ಮತಗಳು ಭದ್ರವಾಗಿದ್ದನ್ನು ತಿಳಿದಿದ್ದರೂ ಮಗನ ಗೆಲುವಿಗೆ ದೇವರ ಮೊರೆ ಹೋಗುತ್ತಿದ್ದಾರೆ. ದೇವರು ಮತಪೆಟ್ಟಿಗೆಯಲ್ಲಿರುವ ಮತವನ್ನು ಬದಲಿಸಲು ಸಾಧ್ಯವೇ?
•ಸೋಮನಗುದ್ದು ರಂಗಸ್ವಾಮಿ,
ರಾಜ್ಯಾಧ್ಯಕ್ಷ, ರೈತ ಸಂಘ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ