ವಿದ್ಯುತ್‌ ಸುರಕ್ಷತೆ ಜನಜಾಗೃತಿಗೆ ಬೀದಿನಾಟಕ ಪ್ರದರ್ಶನ


Team Udayavani, Nov 22, 2019, 6:30 PM IST

21-November-30

ಹೊನ್ನಾಳಿ: ಸಾರ್ವಜನಿಕರು ಅಧಿಕ ವೊಲ್ಟೇಜ್‌ ವಿದ್ಯುತ್‌ ಮಾರ್ಗದ ಸಮೀಪ
ನಿಲ್ಲಬಾರದು. ತಾತ್ಕಾಲಿಕ ಕಟ್ಟಡ, ಟೆಂಟ್‌ ಗಳನ್ನು ಕಟ್ಟಬಾರದು ಎಂದು ಜಿಪಂ ಸದಸ್ಯ ಎಂ.ಆರ್‌. ಮಹೇಶ್‌ ಹೇಳಿದರು.

ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಗುರುವಾರ ಹೊನ್ನಾಳಿ ಹಾಗೂ ನ್ಯಾಮತಿ ಬೆಸ್ಕಾಂ ಇಲಾಖೆಯು ಸಾರ್ವಜನಿಕರಿಗೆ ವಿದ್ಯುತ್‌ ಸುರಕ್ಷತೆ ಬಗ್ಗೆ ಹಮ್ಮಿಕೊಂಡಿದ್ದ ಅರಿವು ಮೂಡಿಸುವ ಬೀದಿನಾಟಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯುತ್‌ ಸುರಕ್ಷತೆಯತ್ತ ಗಮನ ಹರಿಸಬೇಕು. ಸಾರ್ವಜನಿಕರು ಮನೆಯ ಮುಂಭಾಗದಲ್ಲಿ ಇರುವ ವಿದ್ಯುತ್‌ ಕಂಬಕ್ಕೆ ದನ-ಕರು, ಮೇಕೆ, ಮೊದಲಾದ ಸಾಕುಪ್ರಾಣಿಗಳನ್ನು ಕಟ್ಟಬಾರದು. ಮಕ್ಕಳು ವಿದ್ಯುತ್‌ ತಂತಿಗಳನ್ನು ನೋಡಿಕೊಂಡು ಗಾಳಿಪಟ ಹಾರಿಸಬೇಕು. ವಿದ್ಯುತ್‌ ತಂತಿಗೆ ಸಿಲುಕಿರುವ ಗಾಳಿಪಟ ತೆಗೆಯಲು ಹೋಗಿ ಮಕ್ಕಳು ಸಾವನ್ನಪ್ಪಿರುವ ಉದಾಹರಣೆಗಳಿವೆ. ಪೋಷಕರು ಮಕ್ಕಳ ಬಗ್ಗೆ ಜಾಗೃತೆ ವಹಿಸಬೇಕು ಎಂದು ಸಲಹೆ ನೀಡಿದ ಅವರು, ವಿದ್ಯುತ್‌ ಸುರಕ್ಷತೆ ಅರಿವು ಕಾರ್ಯಕ್ರಮ ತಾಲೂಕು ಮಟ್ಟದ ನಂತರ ಹೋಬಳಿ, ಗ್ರಾಮಗಳಲ್ಲಿಯೂ ನಡೆಯಬೇಕು ಎಂದರು.

ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿಕಿರಣ್‌ ಮಾತನಾಡಿ, ಸಾರ್ವಜನಿಕರು ವಿದ್ಯುತ್‌ನ್ನು ಮಿತವಾಗಿ ಬಳಸಬೇಕು. ಮೊಬೈಲ್‌ ಚಾರ್ಜಿಂಗ್‌
ಮಾಡುವಾಗ ಬಳಸಬಾರದು. ನಿಮ್ಮ ಮನೆಯ ಹತ್ತಿರ ವಿದ್ಯುತ್‌ ಕಂಬದ ಲೈನ್‌ಗಳು ಹರಿದು ಕೆಳಗೆ ಬಿದ್ದಿದ್ದರೆ ತಕ್ಷಣ ಇಲಾಖೆಗೆ ತಿಳಿಸಿ ಎಂದ ಅವರು, ವಿದ್ಯುತ್‌ ಅವಘಡಗಳು ನಡೆದರೆ 1912 ಸಹಾಯವಾಣಿ ಕರೆ ಮಾಡಬೇಕು ಎಂದರು.

ಅನ್ವೇಷಕರ ಆರ್ಟ್ ಫೌಂಡೇಷನ್‌ ಕಲಾ ತಂಡದವರು ಬೀದಿನಾಟಕದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಅರಬಗಟ್ಟೆ ತಾ.ಪಂ ಸದಸ್ಯ ವಿಜಯಕುಮಾರ, ನ್ಯಾಮತಿ ಬೆಸ್ಕಾಂ ಇಲಾಖೆ ಎಇಇ ಬಿ.ಕೆ. ಶ್ರೀನಿವಾಸ್‌, ಕಲಾ ತಂಡದ ಪ್ರಮುಖರಾದ ಸಿದ್ದರಾಜು, ಶಂಭುಲಿಂಗ, ದೀಪಕ್‌, ಮಂಜುನಾಥ್‌, ರಾಕೇಶ್‌, ತಿಪ್ಪೇಶ್‌, ಸುರೇಶ್‌, ಹೊನ್ನಾಳಿ ಅಭಿವ್ಯಕ್ತಿ ಕಲಾತಂಡದ ಮಲ್ಲಿಕಾರ್ಜನಸ್ವಾಮಿ ಇದ್ದರು.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.