ಮಾಹಿತಿ ಕಣಜವಾದ ಸೌಳಂಗ ಕ್ಲಸ್ಟರ್ ಸಂಪನ್ಮೂಲ ಕೇಂದ್ರ!


Team Udayavani, Dec 28, 2019, 11:48 AM IST

28-December-4

ಹೊನ್ನಾಳಿ: ಶೈಕ್ಷಣಿಕ ಚಟುವಟಿಕೆಗಳಿಗೆ ಒತ್ತು ನೀಡುವ ಉದ್ದೇಶದಿಂದ ನಿರ್ಮಾಣಗೊಂಡಿರುವ ನ್ಯಾಮತಿ ತಾಲೂಕಿನ ಸೌಳಂಗ ಕ್ಲಸ್ಟರ್‌ ಸಂಪನ್ಮೂಲ ಕೇಂದ್ರದ ಕಟ್ಟಡ ನವೀಕರಣಗೊಂಡು ಶಿಕ್ಷಣ ಪ್ರೇಮಿಗಳನ್ನು ಆಕರ್ಷಿಸುತ್ತಿದೆ.

ಮನಸ್ಸಿದ್ದರೆ ಮಾರ್ಗ ಎನ್ನುವಂತೆ ಕೇಂದ್ರದ ಕಟ್ಟಡಕ್ಕೆ ಕಾಯಕಲ್ಪ ನೀಡಿ, ದಾರಿಹೋಕರು ಒಂದು ಬಾರಿ ಕಟ್ಟಡದ ಕಡೆಗೆ ಕಣ್ಣು ಹಾಯಿಸುವಂತೆ ಮಾಡಿದ್ದಾರೆ ಸವಳಂಗ ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿ ಜಿ.ಆರ್‌. ಮಹೇಶ್‌. ಈ ಹಿಂದೆ ಕ್ಲಸ್ಟರ್‌ ಸಂಪನ್ಮೂಲ ಕೇಂದ್ರ ಕಟ್ಟಡ ಸುಣ್ಣ, ಬಣ್ಣ ಹಾಗೂ ಮೂಲ ಸೌಲಭ್ಯ ಹೊಂದಿರಲಿಲ್ಲ. ಜಿ.ಆರ್‌. ಮಹೇಶ್‌ ಕೇಂದ್ರದ ಅಧಿ ಕಾರಿಯಾಗಿ ಬಂದ ನಂತರ ಕಟ್ಟಡದ ಪುನರುಜ್ಜೀವನಕ್ಕೆ ರೂಪುರೇಷೆ ಹಾಕಿಕೊಂಡು ಕಾರ್ಯೋನ್ಮುಖರಾದರು.

ಸರ್ಕಾರದಿಂದ ಅನುದಾನವಿಲ್ಲದೇ ಸುಣ್ಣ, ಬಣ್ಣ, ಗೋಡೆ ಬರಹ, ಫ್ಯಾನ್‌ಗಳು, ಟ್ಯೂಬ್‌ಲೈಟ್‌ಗಳು, ನೆಲಹಾಸು ಮುಂತಾದವುಗಳಿಗೆ ಬೇಕಾದ ಹಣ ಹೊಂದಿಸುವುದು ಹೇಗೆ ಎಂದು ಚಿಂತಿಸಿ, ಸರ್ಕಾರಿ ಪ್ರಾಥಮಿಕ ಹಾಗೂ ಅನುದಾನಿತ ಶಾಲಾ ಶಿಕ್ಷಕರಿಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸಹಾಯ ಕೋರಿ ಮನವಿ ಮಾಡಿದರು.

ಕೇಳುವ ಕೈ ಸ್ವತ್ಛವಾಗಿದ್ದರೆ ಕೊಡುಗೈ ದಾನಿಗಳಿಗೆ ಬರ ಇಲ್ಲ ಎನ್ನುವಂತೆ ಶಿಕ್ಷಕರು ನಾ ಮುಂದು, ತಾ ಮುಂದು ಎಂದು ನೂರು ರೂ.ನಿಂದ ಸಾವಿರ ರೂ.ವರೆಗೂ ದೇಣಿಗೆ ನೀಡಿದರು. ನ್ಯಾಮತಿ ಕರ್ಣಾಟಕ ಬ್ಯಾಂಕ್‌ ವತಿಯಿಂದ 12ಸಾವಿರ ರೂ. ದೇಣಿಗೆ ದೊರೆಯಿತು. ಹೀಗೆ, ವಿವಿಧ ಮೂಲಗಳಿಂದ ಬಂದ ಹಣದಿಂದ ಸಿಆರ್‌ಸಿ ಕಟ್ಟಡಕ್ಕೆ ಸುಣ್ಣ ಬಣ್ಣ ಮಾಡಿಸಿದ್ದಲ್ಲದೇ ಸುಭಾಷಿತ, ವಿವಿಧ ಉಕ್ತಿ, ಗೋಡೆ ಚಿತ್ರಗಳನ್ನು ಬರೆಸಲಾಗಿದೆ.

ಸಿಆರ್‌ಸಿ ಕಟ್ಟಡ ಪ್ರವೇಶಿಸುತ್ತಿದ್ದಂತೆ ಬಲಭಾಗದಲ್ಲಿ ಶಿಕ್ಷಣ ಇಲಾಖೆಯ ವರ್ಗೀಕರಣದ ಮಾಹಿತಿ ಬರೆಸಲಾಗಿದೆ. ಇದರಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಮಂತ್ರಿಯಿಂದ ಪ್ರಾರಂಭವಾಗಿ ಕೊನೆಯ ಹಂತದ ಪ್ರಾಥಮಿಕ ಶಾಲಾ ಶಿಕ್ಷಣದವರೆಗೆ ಮಾಹಿತಿ ಇದೆ. ಈ ಬರವಣಿಗೆಗೆ ತಾಲೂಕಿನ ಚಿತ್ರಕಲಾ ಶಿಕ್ಷಕರನ್ನು ಬಿಡುವಿನ ವೇಳೆಯಲ್ಲಿ ಬಳಸಿಕೊಳ್ಳಲಾಗಿದೆ.

ಒಳಗೋಡೆಗಳ ಮೇಲೆ ನ್ಯಾಮತಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿವರ ಮತ್ತು ಮಕ್ಕಳ ಸಂಖ್ಯೆಯನ್ನು ಬರೆಸುವ ಮೂಲಕ ತಾಲೂಕಿನ ಶಾಲೆಗಳ ಸಮಗ್ರ ಚಿತ್ರಣ ಲಭಿಸುವಂತೆ ನಿಗಾವಹಿಸಲಾಗಿದೆ. ಮಹಾತ್ಮರು, ದಾರ್ಶನಿಕರು, ಶಿಕ್ಷಣ ತಜ್ಞರು, ರಾಷ್ಟ್ರನಾಯಕರು, ಇಂಗ್ಲಿಷ್‌ ಭಾಷೆಯ ಪ್ರಮುಖ ಕವಿಗಳು, ಲೇಖಕರ ಚಿತ್ರಗಳನ್ನು ಬರೆಸಲಾಗಿದೆ. ಕಚೇರಿಯಲ್ಲಿ ನೀರಿನ ವ್ಯವಸ್ಥೆ, ಫ್ಯಾನ್‌, ಟ್ಯೂಬ್‌ಲೆ„ಟ್‌ಗಳ ವ್ಯವಸ್ಥೆ ಮಾಡಿರುವುದು ಪ್ರಶಂಸನೀಯವಾಗಿದೆ.

ಸಿಆರ್‌ಸಿ ಕೇಂದ್ರದ ಮುಖ್ಯ ಕೊಠಡಿಯಲ್ಲಿ ಕುಳಿತುಕೊಳ್ಳಲು ಸಾಕಷ್ಟು ಚೇರ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರಾಥಮಿಕ ಶಿಕ್ಷಣದ ಪ್ರಮುಖ ಕಲಿಕಾ ಹಂತಗಳಾದ ಅಕ್ಷರ ಚಾಪೆಯನ್ನು ನೆಲದ ಮೇಲೆ ರಚಿಸಲಾಗಿದೆ. ಗೋಡೆಗಳ ಮೇಲೆ ವಿವಿಧ ಪ್ರಾಣಿ-ಪಕ್ಷಿಗಳ ಚಿತ್ರಗಳು, ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ, ಸಿಸಿಇ ಮಾದರಿ ಪಾಠ ಯೋಜನೆ, ಶಿಕ್ಷಕರು ನಿರ್ವಹಿಸಬೇಕಾದ ವಿವಿಧ ದಾಖಲೆಗಳನ್ನು ಚಿತ್ರಿಸಲಾಗಿದೆ. ಇದು ಎಲ್ಲರನ್ನೂ ಆಕರ್ಷಿಸುತ್ತಿದೆ ಎನ್ನುತ್ತಾರೆ ಹೊನ್ನಾಳಿಯ ನಿಯೋಜಿತ ಬಿಆರ್‌ಪಿ ಆರ್‌.ಜೆ.ಅಪ್ಸರ್‌ ಅಹಮ್ಮದ್‌.

ಈ ಎಲ್ಲಾ ಕೆಲಸ ಕಾರ್ಯಗಳಿಗೆ ದಾನಿಗಳಿಂದ ಸಂಗ್ರಹಿಸಿದ 1 ಲಕ್ಷ ರೂ. ವೆಚ್ಚವಾಗಿದೆ. ತಾಲೂಕಿನ ಬ್ಯಾಂಕ್‌ಗಳು, ಶಿಕ್ಷಕರು, ಶಾಲೆಗಳು ಕೈಜೋಡಿಸಿದ್ದರಿಂದ ಸಿಆರ್‌ಸಿ ಕಚೇರಿ ಈಗ ಒಂದು ಸುಂದರ ಕಚೇರಿಯಾಗಿ ಮಾರ್ಪಟ್ಟಿದೆ.

ಟಾಪ್ ನ್ಯೂಸ್

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.