ಗಣಪತಿಯ ಸಂಶೋಧಕ ಗೋವರ್ಧನ ಸನ್ಮಾನ

ಅಂಕೋಲೆಕರರ ಜ್ಞಾನ ಮಕ್ಕಳಿಗೆ ಸ್ಫೂರ್ತಿದಾಯಕ: ಬಾಳೇರಿ

Team Udayavani, Sep 26, 2019, 7:01 PM IST

26-Sepctember-22

ಹೊನ್ನಾವರ: ಗಣಪತಿಯ ಕುರಿತು ಸಮಗ್ರ ಮಾಹಿತಿಯನ್ನು ಕಲೆಹಾಕಿ, ಅವುಗಳನ್ನು ಮೂರ್ತಿ, ಪುಸ್ತಕ ಮತ್ತು ಛಾಯಾಚಿತ್ರ ರೂಪದಲ್ಲಿ ಪ್ರದರ್ಶಿಸುತ್ತ ಬಂದಿರುವ ಗೋವರ್ಧನ ಅಂಕೋಲೇಕರ್‌ ಅವರು ಭಾರತದ ಗಣಪತಿಯನ್ನು ವಿದೇಶಕ್ಕೂ, ವಿದೇಶದ ಗಣಪತಿಯನ್ನು ಭಾರತಕ್ಕೂ ಪರಿಚಯಿಸಿ ಮಾಡಿದ ಸಾಧನೆ ಪ್ರಶಂಸನೀಯ ಎಂದು ಜಿ.ಎಸ್‌. ಯುವವಾಹಿನಿ ಜಿಲ್ಲಾಧ್ಯಕ್ಷ ಹಾಗೂ ಹೊನ್ನಾವರ ಅರ್ಬನ್‌ ಬ್ಯಾಂಕ ಅಧ್ಯಕ್ಷ ರಾಘವ ಬಾಳೇರಿ ಹೇಳಿದರು.

ಅವರು ಸ್ಥಳೀಯ ನ್ಯೂ ಇಂಗ್ಲಿಷ್‌ ಶಾಲೆಯಲ್ಲಿ ಗೋವರ್ಧನ ಅಂಕೋಲೇಕರ್‌ ಸಂಗ್ರಹಿಸಿದ ಗಣಪತಿ ಛಾಯಾಚಿತ್ರ, ಮೂರ್ತಿ ಮತ್ತು ಗಣೇಶ ಧ್ಯಾನ ಪುಸ್ತಕವನ್ನು ಬಿಡುಗಡೆ ಮಾಡಿ, ಉದ್ಘಾಟಿಸಿ ಮಾತನಾಡಿದರು. ನಮಗೆ ಒಂದೋ ಎರಡೋ ರೂಪದಲ್ಲಿ ಕಂಡ, ದೇಶದಲ್ಲಿ ಮಾತ್ರ ಇದ್ದಾನೆ ಎಂದುಕೊಂಡ ಗಣಪತಿಯ ಸಾವಿರಾರು ರೂ ಮತ್ತು ಜಗತ್ತಿನ ನಾನಾಭಾಗದಲ್ಲಿ ಕಾಣಿಸುವ ಗಣಪತಿ, ಸ್ತ್ರೀ ಗಣಪತಿ ಗಣೇಶಾನಿ, ಮೊದಲಾದ ವಿವರಗಳನ್ನು ತಿಳಿಸಿಕೊಟ್ಟವರು, ಶ್ರೀಗಂಧ ಮತ್ತು ಶಿಲೆಯಲ್ಲಿ ಗಣಪತಿ ಮೂರ್ತಿಯನ್ನು ಒದಗಿಸಿದ ಅಂಕೋಲೇಕರ್‌ ಕನ್ನಡ ನಾಡಿಗೆ ದೊಡ್ಡ ಉಪಕಾರ
ಮಾಡಿದ್ದಾರೆ ಎಂದು ಅಭಿನಂದಿಸಿದರು.

ಅಧ್ಯಕ್ಷತೆ ವಹಿಸಿದ ಉದ್ಯಮಿ ಮತ್ತು ನ್ಯೂ ಇಂಗ್ಲಿಷ್‌ ಸಂಸ್ಥೆಯ ಅಧ್ಯಕ್ಷ ಜಗದೀಶ ಪೈ ಮಾತನಾಡಿ ನಮ್ಮ ಶಾಲೆಯಲ್ಲಿ 80ರ ಹರೆಯದ ಗೋವರ್ಧನ ಅಂಕೋಲೇಕರ್‌ ಪ್ರದರ್ಶನ ಏರ್ಪಡಿಸಿರುವುದು, ಗಣಪತಿ ಕುರಿತಾದ ಅವರ ಜ್ಞಾನವನ್ನು ಹಂಚುತ್ತಿರುವುದು ಮಕ್ಕಳಿಗೂ ಸ್ಪೂರ್ತಿದಾಯಕ. ಅವರ ಜೀವನ ಗಣಪತಿಗೆ ಸಮರ್ಪಣೆಯಾಗಿದೆ. ಧಾರ್ಮಿಕ ಕ್ಷೇತ್ರಕ್ಕೆ ಅವರು ಗಣಪತಿಯ ಬಹುರೂಪ ತೋರಿಸಿಕೊಟ್ಟು ಕೊಡುಗಡೆ ನೀಡಿದ್ದಾರೆ ಎಂದರು.

ಕೆಕ್ಕಾರ ಜಿ.ಡಿ. ಭಟ್‌ ಇವರ ಮೂರ್ತಿಗಳನ್ನು ಷಣ್ಮುಖ ಮತ್ತು ಭವಾನಿ ಇವರು ಛಾಯಾಗ್ರಹಿಸಿದ್ದನ್ನು ಮತ್ತು ಪುಸ್ತಕ, ಮೂರ್ತಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ, ಇನ್ನು ಸೆ.26ರವರೆಗೆ ಪ್ರದರ್ಶನವಿದೆ. ಪ್ರಾಂಶುಪಾಲ ಎಸ್‌.ಜಿ. ಭಟ್‌, ಆಡಳಿತ ಮಂಡಳಿಯ ಆರ್‌.ಜಿ. ಶಾನಭಾಗ ಉಪಸ್ಥಿತರಿದ್ದರು.

ಸಾರ್ವಜನಿಕರ ವತಿಯಿಂದ ಅತಿಥಿಗಳು ಅಂಕೋಲೇಕರ್‌ ಅವರಿಗೆ ಶಾಲು ಹೊದೆಸಿ ಸನ್ಮಾನಿಸಿದರು. ಕಲಾವಿದ ಬಿ.ಜೆ. ನಾಯ್ಕ ಪ್ರದರ್ಶನವನ್ನು ಸಂಘಟಿಸಿದರು. ಶಾಲೆಯ ಮುಖ್ಯಾಧ್ಯಾಪಕ ವಿ.ಎಸ್‌. ಅವಧಾನಿ ಸ್ವಾಗತಿಸಿದರು. ಎ.ಕೆ. ಭಟ್‌ ಅತಿಥಿಗಳನ್ನು ಪರಿಚಯಿಸಿ, ವಂದಿಸಿದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.