ಉತ್ತರ ಕರ್ನಾಟಕ ಮಾದರಿ ನೆರೆ ಪರಿಹಾರ

ಮಳೆ ಹಾನಿಗೊಳಗಾದ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರದಿಂದ 10 ಕೋಟಿ ಬಿಡುಗಡೆ: ಗೂಳಿಹಟ್ಟಿ

Team Udayavani, Nov 16, 2019, 5:48 PM IST

16-November-26

ಹೊಸದುರ್ಗ: ಹೊಸದುರ್ಗ ತಾಲೂಕು ನೆರೆಪೀಡಿತ ತಾಲೂಕಾಗಿ ಘೋಷಣೆಯಾಗಿದ್ದು, ನೆರೆ ಪೀಡಿತವಾಗಿದ್ದ ಉತ್ತರಕರ್ನಾಟಕದ ಮಾದರಿಯಲ್ಲೇ ಎಲ್ಲ ರೀತಿಯ ಸೌಲಭ್ಯ ಸಿಗಲಿದೆ ಎಂದು ಶಾಸಕ ಗೂಳಿಹಟ್ಟಿ ಶೇಖರ್‌ ಹೇಳಿದರು.

ತಾಲೂಕಿನ ನೀರಗುಂದ ಗ್ರಾಮದ ಬನಶಂಕರಿದೇವಿ ನೂತನ ದೇವಸ್ಥಾನದ ಲೋಕಾರ್ಪಣೆ ಅಂಗವಾಗಿ ಶುಕ್ರವಾರ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಳೆ ಹಾನಿಗೆ 10 ಕೋಟಿ ರೂ.ಅನುದಾನ ಬಂದಿದೆ. ಅದರಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ನೀರಗುಂದ ಕೆರೆಯ ಏರಿ ದುರಸ್ತಿ ಸೇರಿದಂತೆ ಇನ್ನಿತರ ಮೂಲಸೌಕರ್ಯ ಒದಗಿಸಲಾಗುವುದು. 1.25 ಕೋಟಿ ರೂ. ವೆಚ್ಚದಲ್ಲಿ ಒಂದು ತಿಂಗಳೊಳಗೆ ನೀರಗುಂದ-ಸಾಣೇಹಳ್ಳಿ-ಕೋಡಿಹಳ್ಳಿ ರಸ್ತೆ ಸುಧಾರಣೆ ಮಾಡಲಾಗುವುದು ಎಂದರು.

ಕುಂಚಿಟಿಗ ಮಹಾಸಂಸ್ಥಾನದ ಡಾ| ಶಾಂತವೀರ ಸ್ವಾಮೀಜಿ ಮಾತನಾಡಿ, ಜಾತಿಯ ವೈಭವೀಕರಣ ಆಗುತ್ತಿರುವುದು ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಪ್ರಾಚೀನ ಕಾಲದಲ್ಲಿ ನಮ್ಮ ತಪ್ಪು ತಿದ್ದಲು ದೇಗುಲಗಳಿದ್ದವು. ಇಂದು ಶಾಲೆಗಳು ಆ ಕೆಲಸ ಮಾಡುತ್ತಿವೆ. ಹಿಂದೆ ಕುಂಚಿಟಿಗರು ಹಾಗೂ ದೇವಾಂಗ ಸಮಾಜದವರು ಅಣ್ಣ ತಮ್ಮಂದಿರಾಗಿ ಬದುಕುತ್ತಿದ್ದರು. ಕಲಿಯುಗದಲ್ಲಿ ಅನೇಕ ಜಾತಿಗಳಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯ ನೇಕಾರರ ಒಕ್ಕೂಟದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ ಮಾತನಾಡಿ, ಬಾದಾಮಿ ಬನಶಂಕರಿ ಹಾಗೂ ನೀರಗುಂದಕ್ಕೂ ಅವಿನಾಭಾವ ಸಂಬಂಧವಿದೆ. ಇಲ್ಲಿನ ದೇವಾಂಗ ಸಮಾಜದವರು ದೇಗುಲ ನಿರ್ಮಾಣಕ್ಕೆ ಕೊಟ್ಟಿರುವ ಒತ್ತನ್ನು ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೂ ನೀಡಬೇಕು. ದೇವಾಂಗ ನೇಕಾರ ಸಮುದಾಯದಲ್ಲಿ 29 ಉಪಪಂಗಡಗಳಿದ್ದು, ಸಮಾಜದ ಅಭಿವೃದ್ಧಿಗೆ ಭೇದ ಮರೆತು ಸಂಘಟಿತರಾಗಬೇಕು ಎಂದು ಕರೆ ನೀಡಿದರು.

ತಾಲ್ಲೂಕು ದೇವಾಂಗ ಸಂಘದ ಅಧ್ಯಕ್ಷ ಗೋ. ತಿಪ್ಪೇಶ್‌ ಮಾತನಾಡಿ, ಮಾನವ ಕುಲದ ಮೈ ಮುಚ್ಚಲು ಬಟ್ಟೆ ನೇಯುವ ಶ್ರೇಷ್ಠ ಕಾಯಕ ಮಾಡುತ್ತಿರುವ ದೇವಾಂಗ ಸಮಾಜದ ಸಂಸ್ಕೃತಿ ಇತರೆ ಸಮುದಾಯಗಳಿಗೆ ಮಾದರಿಯಾಗಿದೆ ಬಣ್ಣಿಸಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬುರುಡೇಕಟ್ಟೆ ರಾಜೇಶ್‌ ಮಾತನಾಡಿ, ತಾಲೂಕಿನಲ್ಲಿ ದೇವಾಂಗ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ರಾಜಕೀಯ ಪ್ರಾತಿನಿಧ್ಯ ಇಲ್ಲದಿರುವುದರಿಂದ ಎಲ್ಲಾ ಕ್ಷೇತ್ರದಲ್ಲಿ ಸಮಾಜ ಹಿಂದುಳಿದಿದೆ. ಎಂದು ವಿಷಾದಿಸಿದರು.

ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಆರ್‌. ಹನುಮಂತಪ್ಪ ಮಾತನಾಡಿ, ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಬೇಕಿದೆ. ಎಲ್ಲಾ ಸಮುದಾಯದವರು ಸಾಮರಸ್ಯ ಹಾಗೂ ಸ್ನೇಹಪರತೆಯಿಂದ ಜೀವಿಸಬೇಕು ಎಂದರು. ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾವರಕೆರೆ ಶಿಲಾ ಮಠದ ಶ್ರೀಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ನೂತನ ದೇಗುಲಕ್ಕೆ ಕಲಶಾರೋಹಣ ನೆರವೇರಿಸಿದರು. ನೀರಗುಂದ ದೇವಾಂಗ ಸಮಾಜದ ಅಧ್ಯಕ್ಷ ಎನ್‌.ವಿ. ಶೇಖರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಹೊಸದುರ್ಗ ದೇವಾಂಗ ಸಮಾಜದ ಅಧ್ಯಕ್ಷ ಡಿ.ಆರ್‌. ಗೋವಿಂದರಾಜು, ಪುರಸಭೆ ಸದಸ್ಯ ದಾಳಿಂಬೆ ಗಿರೀಶ್‌, ಕಾರ್ಮಿಕ ನಿರೀಕ್ಷಕ ಪರಶುರಾಮ್‌, ಗ್ರಾಪಂ ಅಧ್ಯಕ್ಷ ಕೆ.ಆರ್‌. ಪರಮೇಶ್ವರಪ್ಪ, ಸದಸ್ಯೆ ಓಂಕಾರಮ್ಮ ತಿಪ್ಪೇಶಪ್ಪ, ಮುಖಂಡರಾದ ಮಹೇಶ್‌, ಈ. ಬೈರಪ್ಪ, ಶಂಕ್ರಮ್ಮ ವಿಜಯಕುಮಾರ್‌, ಗೌಡ್ರು ಪುಟ್ಟಪ್ಪ, ರಾಮಣ್ಣ, ಕೃಷ್ಣಪ್ಪ, ಚನ್ನಬಸವಣ್ಣ, ಮಲ್ಲಣ್ಣ, ಶಿಲ್ಪಿ ಮಲ್ಲೇಶಾಚಾರ್‌, ಸುರೇಶ್‌ ನೀರಗುಂದ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.