ರೈತರು ರಾಸಾಯನಿಕ ಮುಕ್ತ ಕೃಷಿ ಪದ್ಧತಿ ಅನುಸರಿಸಲಿ


Team Udayavani, Dec 28, 2019, 6:29 PM IST

28-December-30

ಹೊಸದುರ್ಗ: ರೈತರು ರಾಸಾಯನಿಕ ಮುಕ್ತ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ದವೀರಪ್ಪ ಎಂದು ಹೇಳಿದ್ದಾರೆ.

ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಚಿಣ್ಣರ ನಡಿಗೆ ಕೃಷಿ ಕಡೆಗೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ರೈತರು ರಾಸಾಯನಿಕ ಮುಕ್ತ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಹಿಂದಿನ ತಲೆಮಾರಿನವರಂತೆ ಸಾಂಪ್ರದಾಯಿಕ ಬೇಸಾಯ ಪದ್ಧತಿ ಅನುಸರಿಸಿದ್ದಲ್ಲಿ ಆರೋಗ್ಯ ಪೂರ್ಣ ಜೀವನ ನಡೆಸಲು ಸಾಧ್ಯವಾಗುತ್ತದೆ. ಯಾವುದೇ ರಾಸಾಯನಿಕ ಗೊಬ್ಬರದ ಅವಶ್ಯಕತೆಯಿಲ್ಲದೇ ನವಣೆ, ಸಾಮೆ, ಊದಲು, ಕೊರಲೆಯಂತಹ ಸಿರಿಧಾನ್ಯಗಳನ್ನು ಉತ್ತಮವಾಗಿ ಬೆಳೆಯಬಹುದಾಗಿದೆ. ಮಿತ ಬಂಡವಾಳ ಹಾಗೂ ಕಡಿಮೆ ನೀರಿನಲ್ಲಿ ಸಿರಿಧಾನ್ಯ ಬೆಳೆದು ಅಧಿಕ ಲಾಭಗಳಿಸಬಹುದಾಗಿದೆ ಎಂದರು.

ರೈತ ಸ್ವಾರ್ಥಿಯಾಗಬೇಕು. ಕುಟುಂಬಕ್ಕೆ ಬೇಕಾಗುವಷ್ಟು ಧವಸಧಾನ್ಯ ಇಟ್ಟು ಕೊಂಡು ನಂತರ ಮಾರಾಟ ಮಾಡಬೇಕು. ರೈತ ಕೇವಲ ಬೆಳೆ ಬೆಳೆದರೆ ಸಾಲದು ಅದನ್ನು ಮಾರುಕಟ್ಟೆಗೆ ತಂದು ಮೌಲ್ಯವರ್ಧನೆ ಮಾಡುವ ಜಾಣ್ಮೆ ಹೊಂದಬೇಕು. ಕಚ್ಚಾ ವಸ್ತುಗಳನ್ನು ಸಿದ್ದವಸ್ತುಗಳನ್ನಾಗಿ ಮಾರ್ಪಾಡು ಮಾಡಬೇಕು. ಆಗ ಮಾತ್ರ ಅನ್ನದಾತ ಸಂಕಷ್ಟದಿಂದ ಪಾರಾಗಿ ಆರ್ಥಿಕವಾಗಿ ಸದೃಢವಾಗಲು ಸಾಧ್ಯವಾಗಲಿದೆ. ರೈತ ಬೆಳೆದು ಕೊಟ್ಟ ಅಡಿಕೆಯನ್ನು ಕಂಪನಿಗಳು ಗುಟ್ಕಾ ತಯಾರಿಸಿ ಅದನ್ನು ದುರ್ವಿನಿಯೋಗ ಮಾಡುತ್ತಿವೆ. ಕಂಪನಿಗಳು ಗುಟ್ಕಾ ತಿನ್ನಿಸಿ ಜನರ ಆರೋಗ್ಯ ಹಾಳು ಮಾಡುತ್ತಿವೆ. ಅಡಿಕೆ ದುರ್ವಿನಿಯೋಗವಾಗದಂತೆ ರೈತರು ಯೋಜನೆ ರೂಪಿಸಿಕೊಳ್ಳಬೇಕಿದೆ ಎಂದರು.

ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಡಾ|ಕೆ.ಅನಂತ್‌ ಮಾತನಾಡಿ, ರೈತರು ವೈಜ್ಞಾನಿಕತೆಯಿಂದ ಬೆಳೆಗಳನ್ನು ಬೆಳೆಯುವುದರಿಂದ ದೇಶದ ಆರ್ಥಿಕತೆ ಹೆಚ್ಚಾಗುತ್ತದೆ ರೈತರು ಸೃಜನಶೀಲ, ಪ್ರಯೋಗಶೀಲ ಮತ್ತು ಪ್ರಗತಿಪರರಾಗಬೇಕು. ವೈಜ್ಞಾನಿಕ ವಿಧಾನಗಳನ್ನು ಅನುಸರಿಸಿ ಬೆಳೆಯುವುದರಿಂದ ಹೆಚ್ಚಿನ ಲಾಭ ಪಡೆಯುವುದರೊಂದಿಗೆ ಮಣ್ಣಿನ ಫಲವತ್ತತೆಯನ್ನು ಉಳಿಸಿಕೊಳ್ಳಬಹುದಾಗಿದೆ. ಇಂದಿನ ಶಾಲಾ ಮಕ್ಕಳಿಗೆ ಶಿಕ್ಷಣದ ಜತೆಗೆ ಕೃಷಿ ಕ್ಷೇತ್ರದ ಬಗ್ಗೆ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇವಲ ಪಠ್ಯಪುಸ್ತಕದಿಂದ ಸಾರ್ವಂಗೀಣ ಶಿಕ್ಷಣ ದೊರಕುವುದು ಅಸಾಧ್ಯ. ಕೃಷಿಯಿಂದ ವಿಮುಖರಾಗುತ್ತಿರುವ ಕಾಲಘಟ್ಟದಲ್ಲಿ ಇಂತಹ ಕಾರ್ಯಾಗಾರಗಳು ಹೆಚ್ಚು ಉಪಯುಕ್ತವಾಗಲಿವೆ ಎಂದರು.

ಜಿಪಂ ಸದಸ್ಯ ಅಜ್ಜಪ್ಪ ಮಾತನಾಡಿ, ಇಂದು ವ್ಯವಸಾಯ ಮಾಡುವವರನ್ನು ನಿಷ್ಕೃರ್ಷ ಭಾವನೆಯಿಂದ ಕಾಣಲಾಗುತ್ತಿದೆ. ಇಂದಿನ ಯುವಪೀಳಿಗೆ ಬಹುತೇಕ ಕೃಷಿಕ ಕುಟುಂಬದ ಹಿನ್ನೆಲೆಯಿಂದ ಬಂದಿದ್ದರಾದರೂ ಕೃಷಿ ಉಪಕರಣಗಳ ಬಗ್ಗೆ ಮಾಹಿತಿ ಹೊಂದಿಲ್ಲ. ಇದಕ್ಕೆಲ್ಲಾ ಸರಕಾರಿ ನೌಕರಿ ಪಡೆಯಬೇಕ್ಕೆಂಬ ಹಂಬಲವಾಗಿವೇ ಕಾರಣ ಎಂದರು.

ಜಿಪಂ ಸದಸ್ಯರಾದ ಮಮತಾ, ಚೇತನಾ ಪ್ರಸಾದ್‌, ತಹಶೀಲ್ದಾರ್‌ ತಿಪ್ಪೇಸ್ವಾಮಿ, ಬಿಇಒ ಎಲ್‌.ಜಯಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್‌, ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ|ಕಿರಣ್‌, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶ್ರೀಕಾಂತ್‌, ರೈತ ಸಂಘದ ಅಧ್ಯಕ್ಷ ರಮೇಶ್‌, ಮುಖಂಡರಾದ ಕರಿಸಿದ್ದಯ್ಯ, ಬಯಲಪ್ಪ ಮತ್ತಿತರಿದ್ದರು. ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆಗಳು ಏರ್ಪಡಿಸಿದ್ದ ವ್ಯವಸಾಯದ ಉಪಕರಣಗಳ ಪ್ರದರ್ಶನವನ್ನು ಸುಮಾರು 800ಕ್ಕೂ ಅಧಿಕ ವಿದ್ಯಾರ್ಥಿಗಳು ವೀಕ್ಷಿಸಿದರು. ನಂತರ ಸಮೀಪದ ಜಮೀನಿನಲ್ಲಿ ವಿದ್ಯಾರ್ಥಿಗಳಿಗೆ ಉಳುಮೆ ಮಾಡುವ ಕುರಿತು ಪ್ರಾತ್ಯಕ್ಷಿಕೆ ತೋರಿಸಲಾಯಿತು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.