- Saturday 07 Dec 2019
ಬನಶಂಕರಿ ದೇವಸ್ಥಾನ ಲೋಕಾರ್ಪಣೆ
Team Udayavani, Nov 13, 2019, 4:03 PM IST
ಹೊಸದುರ್ಗ: ತಾಲೂಕಿನ ಇತಿಹಾಸ ಪ್ರಸಿದ್ಧ ನೀರಗುಂದ ಗ್ರಾಮದ ಬನಶಂಕರಿದೇವಿ ನೂತನ ದೇವಸ್ಥಾನದ ಲೋಕಾರ್ಪಣೆ ಸಮಾರಂಭ ನ. 14 ಮತ್ತು 15ರಂದು ನಡೆಯಲಿದೆ.
ನ. 14 ರಂದು ಸಂಜೆ 5 ಗಂಟೆಗೆ ಗ್ರಾಮದ ಯಳಗಂಧೇಶ್ವರಿ, ಕಾಲಬೈರವೇಶ್ವರಸ್ವಾಮಿ, ಚೌಳಹಿರಿಯೂರು, ಹೊನ್ನೇನಹಳ್ಳಿ ಬನಶಂಕರಿದೇವಿ, ಆದ್ರಿಕಟ್ಟೆ ಹುಲಿಯಮ್ಮ, ಮಳಲಿ ಕರಿಯಮ್ಮದೇವಿ ಕೂಡು ಭೇಟಿ ನಡೆಯಲಿದೆ. ಹಾಲುರಾಮೇಶ್ವರ ಪುಣ್ಯಕ್ಷೇತ್ರದಿಂದ ಗಂಗೆ ತರಲಾಗುವುದು. ನಂತರ ಹಂಪಿ ಹೇಮಕೂಟ ಗಾಯತ್ರಿ ಪೀಠದ ಶ್ರೀ ದಯಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಶಿಲ್ಪಿಗಳಿಂದ ಆಲಯ ಪರಿಗ್ರಹಣ ಜರುಗಲಿದೆ.
ನ. 15 ರಂದು ಬೆಳಿಗ್ಗೆ 5 ಗಂಟೆಯಿಂದ ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ನಾಂದಿ, ಏಕಾದಶ, ಪಂಚ, ಸಪ್ತದೇವತೆ ಹಾಗೂ ಅಷ್ಟದಿಕ್ಪಾಲಕರ ಕಳಶ ಸ್ಥಾಪನೆ, ಹೋಮ ಹವನ, ದೇವಿಗೆ ಪ್ರಾಣ ಪ್ರತಿಷ್ಠಾಪನೆ, ಕಳಶಾರೋಹಣ, ಕುಂಭಾಭಿಷೇಕ ಹಾಗೂ ಪೂರ್ಣಾಹುತಿ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 12:30 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದೆ. ಬೆಲಗೂರು ಮಾರುತಿ ಪೀಠದ ಶ್ರೀ ಬಿಂದುಮಾಧವ ಶರ್ಮ ಸ್ವಾಮೀಜಿ, ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕುಂಚಿಟಿಗ ಮಹಾಸಂಸ್ಥಾನದ ಡಾ| ಶಾಂತವೀರ ಸ್ವಾಮೀಜಿ, ಕೆಲ್ಲೋಡು ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ನೀರಗುಂದ ದೇವಾಂಗ ಸಮಾಜದ ಅಧ್ಯಕ್ಷ ಎನ್.ವಿ. ಶೇಖರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸುವರು. ಶಾಸಕ ಗೂಳಿಹಟ್ಟಿ ಶೇಖರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಸಂಸದ ಎ. ನಾರಾಯಣಸ್ವಾಮಿ, ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ಡಾ| ಜಿ. ರಮೇಶ್, ರಾಜ್ಯ ನೇಕಾರರ ಒಕ್ಕೂಟದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ, ತಾಲೂಕು ಸಂಘದ ಅಧ್ಯಕ್ಷ ಗೋ.ತಿಪ್ಪೇಶ್, ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಭಾಗವಹಿಸುವರು.
ಹೆಂಚಿನ ಮನೆಯಲ್ಲಿದ್ದ ದೇವಸ್ಥಾನ ಶಿಥಿಲವಾಗಿತ್ತು. ಬನಶಂಕರಿ ಕುಲ ಬಾಂಧವರಾದ ದೇವಾಂಗ ಸಮಾಜದವರು ಹಳೇ ದೇವಸ್ಥಾನದ ಎದುರಿಗೆ ಭಕ್ತರ ಆರ್ಥಿಕ ನೆರವಿನೊಂದಿಗೆ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಅತ್ಯಾಕರ್ಷಕವಾದ ನೂತನ ದೇವಸ್ಥಾನವನ್ನು ನಿರ್ಮಿಸಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಉಡುಪಿ: ಅದಮಾರು ಮಠದ ಪರ್ಯಾಯದಲ್ಲಿ ಕಾಲೇ ವರ್ಷತು ಪರ್ಜನ್ಯಃ| ಪೃಥಿವೀ ಸಸ್ಯಶಾಲಿನಿ|| ದೇಶಃ ಅಯಂ ಕ್ಷೋಭರಹಿತಃ| ಸಜ್ಜನಾಃ ಸಂತು ನಿರ್ಭಯಾಃ|| ಎಂಬಂತೆ ಈ ನಾಲ್ಕು ವಿಷಯಗಳ...
-
ಹುಬ್ಬಳ್ಳಿ:ಹೈದರಾಬಾದ್ ಪೊಲೀಸರು ಅತ್ಯಾಚಾರ ಪ್ರಕರಣದಲ್ಲಿನ ಆರೋಪಿತರ ಮೇಲೆ ನಡೆಸಿದ ಎನ್ಕೌಂಟರ್ ಹೀನ ಕೃತ್ಯ ಎಸಗುವ ಕ್ರಿಮಿನಲ್ಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ...
-
ಮಂಗಳೂರು: ಕಜಕಿಸ್ತಾನದ ಆಲ್ಮಾಟಿಯಲ್ಲಿ ಗುರುವಾರ ನಡೆದ ಏಷ್ಯನ್ ಪವರ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಕದ್ರಿಯ ದೀಪಾ ಕೆ.ಎಸ್. ಮಹಿಳೆಯರ 72 ಕಿಲೋ ವಿಭಾಗದಲ್ಲಿ...
-
ಬಾಗಲಕೋಟೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಸ್ಲಿಂರನ್ನು ಕಂಡರೆ ದ್ವೇಷವಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಬಾದಾಮಿ...
-
ಹುಮನಾಬಾದ: ಪ್ರತಿಫಲಾಪೇಕ್ಷೆ ಇಲ್ಲದಿರುವುದೇ ನೈಜ ರಾಷ್ಟ್ರಸೇವೆ. ನಾನು ನನಗಾಗಿ ಅಲ್ಲ ನಿಮಗಾಗಿ ಎಂಬುದು ಎನ್ನೆಸ್ಸೆಸ್ ಧ್ಯೇಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರಲ್ಲಿ...
ಹೊಸ ಸೇರ್ಪಡೆ
-
ನವದೆಹಲಿ: ಕಳೆದ ವರ್ಷ ತನ್ನನ್ನು ಅತ್ಯಾಚಾರ ಮಾಡಿದ್ದ ಆರೋಪಿಗಳಿಂದಲೇ ಗುರುವಾರದಂದು ಸುಡಲ್ಪಟ್ಟಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಕೊನೆಗೂ ಚಿಕಿತ್ಸೆ...
-
ಉಡುಪಿ: ಅದಮಾರು ಮಠದ ಪರ್ಯಾಯದಲ್ಲಿ ಕಾಲೇ ವರ್ಷತು ಪರ್ಜನ್ಯಃ| ಪೃಥಿವೀ ಸಸ್ಯಶಾಲಿನಿ|| ದೇಶಃ ಅಯಂ ಕ್ಷೋಭರಹಿತಃ| ಸಜ್ಜನಾಃ ಸಂತು ನಿರ್ಭಯಾಃ|| ಎಂಬಂತೆ ಈ ನಾಲ್ಕು ವಿಷಯಗಳ...
-
ಮುಂಬಯಿ: ಇತ್ತೀಚೆಗೆ ವಿಶ್ವ ದರ್ಜೆಯ ಕ್ರಿಕೆಟಿಗರು ವಿಪರೀತ ಒತ್ತಡದಿಂದಾಗಿ ಖಿನ್ನತೆಗೆ ಒಳಗಾಗುತ್ತಿರುವುದು ದೊಡ್ಡ ಸುದ್ದಿಯಾಗುತ್ತಿದೆ. ಆಸ್ಟ್ರೇಲಿಯದ...
-
ಪೋಖರಾ (ನೇಪಾಲ): 13ನೇ ಸೌತ್ ಏಶ್ಯನ್ ಗೇಮ್ಸ್ನ ಬ್ಯಾಡ್ಮಿಂಟನ್ ಸ್ಪರ್ಧೆಗಳಲ್ಲಿ ಭಾರತ ತನ್ನ ಪ್ರಾಬಲ್ಯ ಮುಂದುವರಿಸಿದೆ. ಶುಕ್ರವಾರ ಆಶ್ಮಿತಾ ಚಾಲಿಹಾ ಮತ್ತು...
-
ನಾಗಾಲ್ಯಾಂಡ್: ಹಾರ್ನ್ ಬಿಲ್ ನಲ್ಲಿ ನಡೆದ 20ನೇ ವರ್ಷದ ಹಾರ್ನ್ ಬಿಲ್ ಫೆಸ್ಟಿವಲ್ಗೆ ತೆರೆ ಬಿದ್ದಿದೆ. ಡಿಸೆಂಬರ್ 1ರಿಂದ 6ರ ವರೆಗೆ ಈ ಹಬ್ಬ ನಡೆದಿತ್ತು. ಡಿಸೆಂಬರ್...