ಜನಸಂಖ್ಯೆ ಅಂಕಿ-ಅಂಶ ನಿಖರವಲ್ಲ

ನಿರ್ದಿಷ್ಟ ಅಂಕಿ-ಅಂಶ ಇಲ್ಲದಿರುವುದರಿಂದ ಅನೇಕರಿಗೆ ಸೌಲಭ್ಯ ಮರೀಚಿಕೆ: ತೆಲಗಾವಿ

Team Udayavani, Oct 6, 2019, 6:02 PM IST

06-October-24

ಹೊಸದುರ್ಗ: ಜನಸಂಖ್ಯೆ ಕುರಿತ ಸರ್ಕಾರದ ಅಂಕಿ ಅಂಶಗಳು ನಿಖರವಾಗಿರುವುದಿಲ್ಲ. ಅವು ಮೋಸದಿಂದ ಕೂಡಿವೆ ಎಂದು ಹಿರಿಯ ಇತಿಹಾಸ ಸಂಶೋಧಕ ಪ್ರೊ| ಲಕ್ಷ್ಮಣ ತೆಲಗಾವಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಭಾಂಗಣದಲ್ಲಿ ಹೆಜ್ಜೆ ಸಾಲು ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಕೃತಿ ಬಿಡುಗಡೆ ಸಮಾರಂಭದಲ್ಲಿ ಜಾನಪದ ಸಂಶೋಧಕ ಬಾಗೂರು ನಾಗರಾಜಪ್ಪ ರಚಿಸಿರುವ “ಹೊಸದುರ್ಗ ತಾಲೂಕು ಗೆಜೆಟಿಯರ್‌’ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಜನಸಂಖ್ಯೆ ಅಂಕಿ-ಅಂಶ ನಿರ್ದಿಷ್ಟವಾದುದಲ್ಲ. ಅದು ಬದಲಾಗುತ್ತಿರುತ್ತದೆ. ಆಯಾ ಸಮುದಾಯದವರು ಹೇಳುವ ಜನಸಂಖ್ಯಾ ಅಂಕಿ-ಅಂಶಗಳು ಸತ್ಯಾ ಸತ್ಯತೆಯಿಂದ ಕೂಡಿರುವುದಿಲ್ಲ. ಇಂಥವುಗಳನ್ನು ನ್ಯಾಯಾಲಯ ನಿರಾಕರಿಸುತ್ತದೆ. ಇನ್ನು ಸರ್ಕಾರದ ಅಂಕಿ-ಅಂಶಗಳಲ್ಲೂ ಸಾಕಷ್ಟು ಲೋಪಗಳಿವೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ 18 ಲಕ್ಷ ಜನಸಂಖ್ಯೆಯ ಸಮುದಾಯವೊಂದಕ್ಕೆ 80 ಸಾವಿರ ಜನಸಂಖ್ಯೆ ತೋರಿಸಲಾಗಿದೆ. ನಿರ್ದಿಷ್ಟ ಅಂಕಿ-ಅಂಶ ತೋರಿಸಲಾಗದೇ ಇರುವುದರಿಂದ ಅನೇಕ ಸಮುದಾಯಗಳು ಸೌಲಭ್ಯಗಳಿಂದ ವಂಚಿತವಾಗಿವೆ ಎಂದು ವಿಷಾದಿಸಿದರು.

ಬಾಗೂರು ನಾಗರಾಜಪ್ಪ ರಚನೆಯ ‘ಹೊಸದುರ್ಗ ತಾಲೂಕು ಗೆಜೆಟಿಯರ್‌’ ಹೊಸದುರ್ಗ ತಾಲೂಕಿನ ಸಾಂಸ್ಕೃತಿಕ ವೈಭವ ಹಾಗೂ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ. ಸ್ಥಳೀಯ ಸಂಸ್ಕೃತಿ, ಚರಿತ್ರೆ, ಪರಂಪರೆ ಎಲ್ಲವನ್ನೂ ಕೃತಿ ಒಳಗೊಂಡಿದೆ. ತಾಲೂಕಿಗೆಇದೊಂದು ಅತ್ಯುತ್ತಮ ಕೊಡುಗೆಯಾಗಿದ್ದು, ಭವಿಷ್ಯದ ಪೀಳಿಗೆಗೆ ಮಾರ್ಗದರ್ಶನದ ಕೃತಿಯಾಗಿದೆ. ಗ್ಯಾಜೆಟಿಯರ್‌ ರಚಿಸುವುದು ಕ್ಲಿಷ್ಟಕರ ಕೆಲಸ. ಗೆಜೆಟ್‌ ಗಳಲ್ಲಿ ಲೋಪಗಳಾದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ ಅದನ್ನು ರಚಿಸಲು ಸಾಕಷ್ಟು ಸಮಯ ಬೇಕು ಎಂದರು.

ಶಾಸಕ ಗೂಳಿಹಟ್ಟಿ ಶೇಖರ್‌ ಮಾತನಾಡಿ, ಸ್ವಾತಂತ್ರ್ಯ ಹೋರಾಟದ ನೆರಳಿರುವ ತಾಲೂಕು ಕಚೇರಿ ಆವರಣದಲ್ಲಿ ವೀರಸೌಧ ಸ್ಥಾಪನೆ ಮಾಡಲಾಗುವುದು. ಜತೆಗ ೆಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಫಿರಂಗಿಗಳು ಈ ಹಿಂದೆ ಹೊಸದುರ್ಗದಲ್ಲಿದ್ದವು. ಅವುಗಳನ್ನು ಮರಳಿ ತಾಲೂಕಿಗೆತರುವ ಪ್ರಯತ್ನ ನಡೆಸಲಾಗುವುದು ಎಂದು ಸಂಶೋಧಕ ಬಾಗೂರು ನಾಗರಾಜಪ್ಪ ಮಾಡಿದ ಮನವಿಗೆ ಸ್ಪಂದಿಸಿದರು.

ಜಾನಪದ ಸಂಶೋಧಕ ಬಾಗೂರು ನಾಗರಾಜಪ್ಪ, ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಎಚ್‌. ಬಿಲ್ಲಪ್ಪ ಮಾತನಾಡಿದರು. ಹೆಜ್ಜೆ ಸಾಲು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಗೋ. ತಿಪ್ಪೇಶ್‌ ಇದ್ದರು. ಕಾಲೇಜಿನ ಪ್ರಾಚಾರ್ಯ ಮಂಜುನಾಥ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.