ಸಚಿವ ಸ್ಥಾನ ಕೇಳಿದ್ದು ತಪ್ಪಾ?

ಕಾಂಗ್ರೆಸ್‌-ಜೆಡಿಎಸ್‌ ಸೇರುತ್ತಾರೆಂದು ಸುಳ್ಳು ವದಂತಿ ಹಬ್ಬಿಸಿದ್ರು: ಗೂಳಿಹಟ್ಟಿ

Team Udayavani, Aug 26, 2019, 12:33 PM IST

26-Agust-19

ಹೊಸದುರ್ಗ: ಪಟ್ಟಣದ ಶ್ರೀ ಬನಶಂಕರಿ ಸಮುದಾಯ ಭವನದಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್‌ ಮಾತನಾಡಿದರು. ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ಗೂಳಿಹಟ್ಟಿ ಶೇಖರ್‌ ಅಭಿಮಾನಿಗಳು. (ಬಲ ಚಿತ್ರ).

ಹೊಸದುರ್ಗ: ಜೆಡಿಎಸ್‌-ಕಾಂಗ್ರೆಸ್‌ ಸರ್ಕಾರದ ಆಮಿಷಗಳಿಗೆ ಬಲಿಯಾಗದೆ ಬಿಜೆಪಿಗೆ ನಿಷ್ಠನಾಗಿದ್ದೇನೆ. ತಾಲೂಕಿನ ಅಭಿವೃದ್ಧಿಗಾಗಿ ಸಚಿವ ಸ್ಥಾನ ಕೇಳಿದ್ದು ತಪ್ಪೇ ಎಂದು ಶಾಸಕ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಪ್ರಶ್ನಿಸಿದರು.

ಪಟ್ಟಣದ ಬನಶಂಕರಿ ಸಮುದಾಯ ಭವನದಲ್ಲಿ ಭಾನುವಾರ ನಡೆದ ಗೂಳಿಹಟ್ಟಿ ಶೇಖರ್‌ ಅಭಿಮಾನಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೈತ್ರಿ ಸರ್ಕಾರ ಇದ್ದಾಗ ಕ್ಷೇತ್ರಕ್ಕೆ ಅಗತ್ಯವಿದ್ದ ಅನುದಾನ ಕೇಳಲು ಹೋಗುವುದನ್ನೇ ತಪ್ಪಾಗಿ ಅರ್ಥೈಸಿಕೊಂಡು, ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಕಾಂಗ್ರೆಸ್‌ ಅಥವಾ ಜೆಡಿಎಸ್‌ ಸೇರುತ್ತಾರೆಂದು ಸುದ್ದಿಯಾಯಿತು. ಈ ಸಮಯದಲ್ಲಿ ಬಿಜೆಪಿ ಸಹ ನನ್ನ ಮೇಲೆ ಅನುಮಾನದ ನಡೆ ಅನುಸರಿಸಿತು. ಯಡಿಯೂರಪ್ಪ ಅವರ ಬಳಿ ಕೆಲವರು ನನ್ನ ಬಗ್ಗೆ ಇಲ್ಲಸಲ್ಲದ ದೂರು ಹೇಳುತ್ತಿದ್ದಾರೆ. ನಾನು ಚುನಾವಣೆ ಹಾಗೂ ಪಕ್ಷ ಸಂಘಟನೆಗಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದೇನೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ನನಗೆ ಸಾಕಷ್ಟು ಆಫರ್‌ ಬಂದರೂ ಅದನ್ನೆಲ್ಲ ತಿರಸ್ಕರಿಸಿದೆ. ಅವಮಾನಗಳಿಂದ ನೊಂದಿದ್ದರೂ ಕ್ಷೇತ್ರದ ಜನತೆಗಾಗಿ ಸಹಿಸಿಕೊಂಡಿರುವೆ ಎಂದರು.

ಸಚಿವರನ್ನಾಗಿಸಿ ಎಂದಿದ್ದು ತಪ್ಪೇ?: ಬಿಜೆಪಿ ಮತ್ತು ಸರ್ಕಾರ ನನ್ನನ್ನು ಈಗಲೂ ಅನುಮಾನದಿಂದ ನೋಡುತ್ತಿವೆ. ಅವಕಾಶವಿದ್ದಲ್ಲಿ ನನ್ನನ್ನೂ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಿ ಎಂದು ಕೇಳುವುದೇ ತಪ್ಪೇ ಎಂದು ಪುನರುಚ್ಚರಿಸಿದ ಗೂಳಿಹಟ್ಟಿ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ನನ್ನ ತೀರ್ಮಾನಗಳಿಗೆ ಬೆಂಬಲ ನೀಡುವುದರ ಜತೆಗೆ ಕ್ಷೇತ್ರದ ಜನತೆ ಕೇಳುವ ಪ್ರಶ್ನೆಗಳಿಗೆ ನನ್ನ ಪರವಾಗಿ ಸಮರ್ಥನೆ ಮಾಡಿಕೊಳ್ಳುವ ಜವಾಬ್ದಾರಿ ನಿಮ್ಮದು ಎಂದು ಹೇಳಿದರು.

ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನನ್ನನ್ನು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದಾರೆ. ಆದರೆ ಮೇಲಿನ ಹಂತದಲ್ಲಿ ನನಗೆ ಸೂಕ್ತ ಮನ್ನಣೆ ಸಿಗುತ್ತಿಲ್ಲ. ಪಕ್ಷ ಮತ್ತು ಸರ್ಕಾರದ ಹಂತದಲ್ಲಿ ನನ್ನನ್ನು ಕಡೆಗಣಿಸಲಾಗುತ್ತಿದ್ದು, ಅನಿವಾರ್ಯ ಸಂದರ್ಭದಲ್ಲಿ ನಾನು ತೆಗೆದುಕೊಳ್ಳುವ ತೀರ್ಮಾನಕ್ಕೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬದ್ಧರಾಗಿರಬೇಕು ಎಂದು ಮನವಿ ಮಾಡಿದರು.

ಪಿಎಸ್‌ಐ ನೇಮಕಕ್ಕೂ ಸ್ವಾತಂತ್ರ್ಯ ಇರಲಿಲ್ಲ: ಹಿಂದಿನ ಸರ್ಕಾರ ಇದ್ದಾಗ ಹೊಸದುರ್ಗಕ್ಕೆ ಇಂಥವರನ್ನೇ ಪಿಎಸ್‌ಐ ಆಗಿ ನಿಯೋಜನೆ ಮಾಡಿ ಎಂದು ಮುಖ್ಯಮಂತ್ರಿ ಕಚೇರಿಯಿಂದ ದಾವಣಗೆರೆ ಡಿಐಜಿಗೆ ಶಿಫಾರಸ್ಸು ಮಾಡಲಾಗುತ್ತದೆ. ಕಾಂಗ್ರೆಸ್‌ ಮತು ್ತಜೆಡಿಎಸ್‌ ಸಮ್ಮಿಶ್ರ ಸರ್ಕಾರ ಇದ್ದಾಗ ನಮ್ಮ ಯಾವುದೇ ಕಡತಗಳಿಗೂ ಮಾನ್ಯತೆ ಸಿಗುತ್ತಿರಲಿಲ್ಲ. ಕಳೆದ ಒಂದೂವರೆ ವರ್ಷದಲ್ಲಿ ಹೊಸದುರ್ಗ ಕ್ಷೇತ್ರಕ್ಕೆ ನಯಾಪೈಸೆ ಅನುದಾನ ನೀಡದೆ ತಾರತಮ್ಯ ಮಾಡಲಾಗಿದೆ. ಅಲ್ಲದೆ ನಮ್ಮ ಕಾರ್ಯಕರ್ತರೂ ಸಂಕಷ್ಟ ಅನುಭವಿಸಿದರು. ಇದಕ್ಕೆಲ್ಲಾ ಮೈತ್ರಿ ಸರ್ಕಾರದ ಆಡಳಿತವೇ ಕಾರಣ ಎಂದು ಗೂಳಿಹಟ್ಟಿ ಶೇಖರ್‌ ಆರೋಪಿಸಿದರು.

ನಾನು ಸೇರಿದಂತೆ ಅಭಿಮಾನಿಗಳು ಬಿಜೆಪಿಗೆ ಇನ್ನೂ ಹೊಂದಿಕೊಂಡಿಲ್ಲ. ನನಗೆ ಯಾವ ಪಕ್ಷವೂ ಆಗಿ ಬರೋದಿಲ್ಲ. ಬಿಜೆಪಿಯವರು ನನಗಾಗಿ ತ್ಯಾಗ ಮಾಡಿ ಟಿಕೆಟ್ ನೀಡಿದ್ದಾರೆ. ಅವರಿಗೆ ಅನ್ಯಾಯ ಮಾಡುವುದಿಲ್ಲ. ಪಕ್ಷ ಅಧಿಕಾರಕ್ಕೂ ಬಂದಿದ್ದು, ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಅವರಿಗಿಂತಲೂ ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡಿ ತೋರಿಸುತ್ತೇನೆ ಎಂದು ಘೋಷಿಸಿದರು.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.