ದೃಶ್ಯ ಮಾಧ್ಯಮಕ್ಕೆ ಮೌಡ್ಯವೇ ಬಂಡವಾಳ

ಯುವ ಸಮೂಹ ಪುಸ್ತಕ ಅಧ್ಯಯನದಿಂದ ವಿಮುಖ: ಡಾ| ಪಂಡಿತಾರಾಧ್ಯ ಸ್ವಾಮೀಜಿ ವಿಷಾದ

Team Udayavani, Dec 27, 2019, 3:10 PM IST

27-December-19

ಹೊಸದುರ್ಗ: ಸೂರ್ಯಗ್ರಹಣ-ಚಂದ್ರಗ್ರಹಣಗಳು ಪ್ರಕೃತಿಯ ಸಹಜ ಕ್ರಿಯೆಗಳು. ಆದರೆ ಇದನ್ನೇ ಬಂಡವಾಳವನ್ನಾಗಿಸಿಕೊಂಡ ದೃಶ್ಯಮಾಧ್ಯಮಗಳು ಜನರನ್ನು ಮೂಢರನ್ನಾಗಿಸಿ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವ ಕೆಲಸ ಮಾಡುತ್ತಿವೆ ಎಂದು ಸಾಣೇಹಳ್ಳಿ ಮಠದ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲೂಕಿನ ಸಾಣೇಹಳ್ಳಿ ಮಠದ ಎಂ.ಎಂ. ಕಲ್ಬುರ್ಗಿ ಗ್ರಂಥಾಲಯದ ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಶ್ರೀ ಶಿವಕುಮಾರ ಕಲಾ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ಹಳಗನ್ನಡ ಕಾವ್ಯ: ರಸಾಭಿವ್ಯಕ್ತಿ ಕಮ್ಮಟದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ದೃಶ್ಯ ಮಾಧ್ಯಮಗಳ ಕಾರ್ಯವೈಖರಿ ಯುವ ಸಮೂಹದ ಚಿಂತನಾ ಸಾಮರ್ಥ್ಯವನ್ನೇ ಕುಗ್ಗಿಸುತ್ತಿವೆ. ಕಲೆ, ಸಾಹಿತ್ಯ, ಸಂಸ್ಕೃತಿಗಳು ಬದುಕಿನ ಸತ್ವವನ್ನು ಹೆಚ್ಚಿಸುತ್ತವೆ. ಯುವಕರು ದೃಶ್ಯ ಮಾಧ್ಯಮಗಳು, ವಿದ್ಯುನ್ಮಾನ ಮಾಧ್ಯಮಗಳಿಗೆ ಅಂಟಿಕೊಂಡು ಪುಸ್ತಕಗಳಿಂದ ವಿಮುಖರಾಗುತ್ತಿದ್ದಾರೆ. ಇದು ಅವರ ವ್ಯಕ್ತಿತ್ವ ಹನನಕ್ಕೆ ಕಾರಣವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

“ಹಳೆಯ ಅಂಗಿ ತೊಡು, ಹೊಸ ಪುಸ್ತಕ ಕೊಳ್ಳು’ ಎನ್ನುವ ಮಾತಿನಂತೆ ಹೊಸ ಹೊಸ ಪುಸ್ತಕಗಳನ್ನು ಓದುವುದನ್ನು ಮೈಗೂಡಿಸಿಕೊಂಡು ಕವಿಗಳ, ಲೇಖಕರ ಅಂತರಂಗವನ್ನು ಭೇದಿಸಬೇಕು. ಪುಸ್ತಕಗಳ ಓದಿನಿಂದ ಅಧ್ಯಾಪಕರೂ ವಿಮುಖರಾಗುತ್ತಿರುವುದು ದುರ್ದೈವ. ವಿರಾಮ ಚಿಹ್ನೆಗಳನ್ನು ಎಲ್ಲಿ, ಯಾವಾಗ ಬಳಸಬೇಕೆಂಬುದರ ಪರಿಜ್ಞಾನವೇ ಕಡಿಮೆಯಾಗುತ್ತಿದೆ ಎಂದರು.

ಕಮ್ಮಟದ ನಿರ್ದೇಶಕ ಮಹಾಬಲೇಶ್ವರ ಮಾತನಾಡಿ, ಹಳಗನ್ನಡಕ್ಕೆ ಹಿಡಿದಿರುವ ಗ್ರಹಣವನ್ನು ಮುಕ್ತಗೊಳಿಸಬೇಕಿದೆ. ಹಳಗನ್ನಡ ಕಬ್ಬಿಣದ ಕಡಲೆಯೆಂದು ಯುವಕರಲ್ಲಿ ಬಿಂಬಿಸಲಾಗಿದೆ. ಆದರೆ ಸ್ವಲ್ಪ ಮನಸ್ಸು ಕೊಟ್ಟು ಓದಿದರೆ ಅದು ಸುಲಿದ ಬಾಳೆಹಣ್ಣಾಗುವುದು. ಹಳಗನ್ನಡವನ್ನು ಮುನ್ನಲೆಗೆ ತರಬೇಕು ಎನ್ನುವ ಕಾರಣದಿಂದ ನಾನು 30-40 ಹಳಗನ್ನಡದ ನಾಟಕಗಳನ್ನು ಯಶಸ್ವಿಯಾಗಿ ನಿರ್ದೇಶಿಸಿದ್ದೇನೆ. ಆದರೆ ಅದಕ್ಕೆ ಸಿಗಬೇಕಾದ ಸಹಕಾರ ಸಿಗಲಿಲ್ಲ ಎಂದು ವಿಷಾದಿಸಿದರು.

ಇಂಥ ಕಮ್ಮಟಗಳನ್ನು ಕರ್ನಾಟಕದಾದ್ಯಂತ ಹಮ್ಮಿಕೊಳ್ಳಬೇಕು. ರನ್ನ, ಪೊನ್ನ, ಕುಮಾರವ್ಯಾಸ, ರಾಘವಾಂಕ ಮುಂತಾದ ಕವಿಗಳಿಗೆ ಹಾಗೂ ಲೇಖಕರಿಗೆ ಕನ್ನಡಿಗರು ಋಣಿಯಾಗಿರಬೇಕು. ಓದುಗರಿಲ್ಲದೆ ಕವಿಗಳು, ಲೇಖಕರು ನೊಂದು ಬೆಂದಿದ್ದಾರೆ. ಇಂಥ ದುರಂತಗಳನ್ನು ತಪ್ಪಿಸಿಕೊಳ್ಳಲು ಕಮ್ಮಟಗಳು ಅವಕಾಶ ನೀಡಬೇಕು ಎಂದರು.

ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಬಿ.ವಿ. ವಸಂತಕುಮಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಂಡಿತಾರಾಧ್ಯ ಶ್ರೀಗಳು ಇಂದಿನ ಯುವ ಸಮೂಹವನ್ನು ಹೊಸ ಚಿಂತನೆಗೆ ಹಚ್ಚಿದ್ದಾರೆ. “ಶಿವ’ ಎಂದರೆ ಕಲ್ಯಾಣ ಮತ್ತು ಒಳಿತು ಎಂದರ್ಥ. ಎಲ್ಲರಿಗೂ ಒಳಿತಾಗಲಿ ಎನ್ನುವುದು ಪೂಜ್ಯರ ಹೆಬ್ಬಯಕೆ. ಆ ಕಾರಣದಿಂದ ಇಂಥ ಚಟುವಟಿಕೆಗಳು ಇಲ್ಲಿ ನಿರಂತರವಾಗಿ ನಡೆಯತ್ತಿವೆ. ಈ ಮೂಲಕ ನಮ್ಮಂಥವರಿಗೆ ವೈಚಾರಿಕವಾಗಿ, ನೈತಿಕವಾಗಿ, ಅಧ್ಯಾತ್ಮಿಕವಾಗಿ ಆತ್ಮಬಲವನ್ನು ತುಂಬುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ್‌, ಅದ್ಯಾಪಕ ದ್ಯಾಮೇಶ್‌ ಹಾಜರಿದ್ದರು. ಆರಂಭದಲ್ಲಿ ಶಿವಸಂಚಾರದ ಎಚ್‌.ಎಸ್‌ ನಾಗರಾಜ್‌ ವಚನ ಪ್ರಾರ್ಥನೆ ನಡೆಸಿಕೊಟ್ಟರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.