ಪರಿಸರ ನಾಶಕ್ಕೆ ಮಾನವನ ದುರಾಸೆಯೇ ಕಾರಣ: ಶಾಂತವೀರ ಶ್ರೀ


Team Udayavani, Jul 1, 2019, 4:09 PM IST

1-July-35

ಹೊಸದುರ್ಗ: ದೇವಾಲಯ ಜೀರ್ಣೋದ್ಧಾರದ ವಾರ್ಷಿಕ ಮಹೋತ್ಸವದಲ್ಲಿ ಡಾ| ಶಾಂತವೀರ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ ಹಾಗೂ ಡಾ| ಪುರುಷೋತ್ತಮಾನಂದಪುರಿ ಸ್ವಾಮೀಜಿಯವರನ್ನು ಗೌರವಿಸಲಾಯಿತು.

ಹೊಸದುರ್ಗ: ಸೇವೆ ಮತ್ತು ನಿಷ್ಠೆಗೆ ಮತ್ತೂಂದು ಹೆಸರೇ ಆಂಜನೇಯಸ್ವಾಮಿ. ಸ್ವಾಮಿ ನಂಬಿದ ಭಕ್ತರನ್ನು ಎಂದಿಗೂ ಕೈಬಿಡುವುದಿಲ್ಲ ಎಂದು ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ| ಶಾಂತವೀರ ಸ್ವಾಮೀಜಿ ಹೇಳಿದರು.

ತಾಲೂಕಿನ ಹಳೆಕುಂದೂರು ಗ್ರಾಮದಲ್ಲಿನ ಶ್ರೀ ಮದಾಂಜನೇಯ ಸ್ವಾಮಿ ದೇವಾಲಯ ಜೀರ್ಣೋದ್ಧಾರದ ವಾರ್ಷಿಕ ಮಹೋತ್ಸವದಲ್ಲಿ ಶ್ರೀಗಳು ಆರ್ಶೀವಚನ ನೀಡಿದರು. ಮಾನವನ ದುರಾಸೆ, ಸ್ವಾರ್ಥ ಬುದ್ಧಿಯಿಂದಾಗಿ, ಪ್ರಕೃತಿ ನಾಶವಾಗುತ್ತಿದೆ. ಇದರಿಂದ ಮಳೆಯೂ ಆಗುತ್ತಿಲ್ಲ. ಉತ್ತಮ ಬೆಳೆಯೂ ಸಿಗುತ್ತಿಲ್ಲ. ಇದು ಮನುಕುಲದ ಕಂಟಕಪ್ರಾಯವಾಗಿದೆ. ಮಳೆಯಿಲ್ಲದೇ ಜನರು ಕುಡಿಯುವ ನೀರಿನ ಹಾಹಾಕಾರಎದುರಿಸುತ್ತಿದ್ದಾರೆ.ಭಕ್ತರಿಗೆ ನೀರು ಕೊಡಲು ಸಾಧ್ಯವಾಗದ ಸ್ಥಿತಿ ಮಠ ಮಾನ್ಯಗಳಿಗೂ ಬಂದೊದಗಿದೆ. ತಾಲೂಕಿನಲ್ಲಿ ತೆಂಗು, ಅಡಿಕೆ ವಾಣಿಜ್ಯ ಬೆಳೆಗಳೂ ನೆಲ ಕಚ್ಚುತ್ತಿವೆ. ಮಾನವನ ದುರಾಸೆ ಹೀಗೆಯೇ ಮುಂದುವರೆದರೆ ಮುಂದಿನ ಪೀಳಿಗೆಗೆ ಭವಿಷ್ಯವೇ ಇಲ್ಲದಂತಾಗುತ್ತದೆ ಎಂದು ಎಚ್ಚರಿಸಿದರು.

ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ಕನಕ ಗುರುಪೀಠ ಹಾಗೂ ಆಂಜನೇಯಸ್ವಾಮಿಗೆ ಅವಿನಾಭಾವ ಸಂಬಂಧವಿದೆ. ಕನಕದಾಸರು ಮೋಹನ ತರಂಗಿಣಿ ಎಂಬ ಗ್ರಂಥವನ್ನು ಆಂಜನೇಯನ ಸನ್ನಿಧಿಯಾದ ಕದರಮಂಡಲಗಿಯಲ್ಲಿ ರಚನೆ ಮಾಡಿದ್ದಾರೆ. ಕಾಗಿನೆಲೆಯಲ್ಲಿ ಈಶ ಪದವಿಯ ಕಾಂತೇಶ, ಬ್ರಾಂತೇಶ ಎಂಬ ಆಂಜನೇಯಸ್ವಾಮಿ ದೇವಸ್ಥಾನಗಳಿರುವುದು ಇದಕ್ಕೆ ಸಾಕ್ಷಿ ಎಂದರು.

ಭಗೀರಥ ಪೀಠದ ಡಾ| ಪುರುಷೋತ್ತಮಾನಂದಪುರಿ ಸ್ವಾಮೀಜಿ ಮಾತನಾಡಿ, ತನ್ನ ದುರಾಸೆಯ ಫಲವನ್ನು ಮಾನವನೇ ಉಣ್ಣುತ್ತಿದ್ದಾನೆ. ಶ್ರೀ ಮದಾಂಜನೇಯ ಸ್ವಾಮಿಯ ಆಜ್ಞೆಯಂತೆ ಮೂರು ಪೀಠದ ಸ್ವಾಮೀಜಿಗಳು ದೇವಸ್ಥಾನದ ಕಾರ್ಯಕ್ರಮಕ್ಕೆ ಆಗಮಿಸಿದ್ದೇವೆ. ಭಕ್ತರೆಲ್ಲರೂ ಒಗ್ಗಟ್ಟಾಗಿರಬೇಕೆಂಬುದು ಸ್ವಾಮಿಯ ಅಪೇಕ್ಷೆಯಾಗಿದೆ ಎಂದು ಹೇಳಿದರು.

ಪ್ರಧಾನ ಅರ್ಚಕರಾದ ಟಿ.ಎಸ್‌. ವರದರಾಜು, ಬಿ.ಕೆ. ಶ್ರೀನಿವಾದ ಅಯ್ಯಂಗಾರ್‌, ಸತ್ಯನಾರಾಯಣ, ಶಮಂತ್‌, ವೆಂಕಟೇಶ್‌ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.