ಬೈಸೆ ಶಾಲೆ ದುರಸ್ತಿ ಬೇಡಿಕೆಗೆ ಸಿಗ್ತಿಲ್ಲ ನಯಾಪೈಸೆ ಬೆಲೆ!

ಏಳು ದಶಕ ಪೂರೈಸಿದ ಸರಕಾರಿ ಶಾಲೆ ಕಟ್ಟಡ ಶಿಥಿಲಅಧಿಕಾರಿಗಳು-ಜನಪ್ರತಿನಿಧಿಗಳ ನಿರ್ಲಕ್ಷ್ಯ ಆರೋಪ

Team Udayavani, Dec 16, 2019, 1:30 PM IST

16-December-10

„ಕುಮದಾ ನಗರ

ಹೊಸನಗರ: ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣದ ಹಸಿವು ನೀಗಿಸಿದ ವಿದ್ಯಾ ದೇಗುಲ ಇದು. 70 ವರ್ಷ ಹಳೆಯದಾದ ಈ ಸರ್ಕಾರಿ ಶಾಲಾ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು ಕೊಠಡಿಯೊಳಗೆ ತರಗತಿ ನಡೆಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳ, ಜನಪ್ರತಿನಿ ಧಿಗಳ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಹೌದು, ಹೊಸನಗರ ತಾಲೂಕಿನ ಮೂಡುಗೊಪ್ಪ- ನಗರ ಗ್ರಾಪಂ ವ್ಯಾಪ್ತಿಯ ಬೈಸೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ದುರವಸ್ಥೆ ಇದು.

ಬಾರೀ ಹಳೆಯದಾದ ಕಟ್ಟಡವಾಗಿದ್ದು ಸಂಪೂರ್ಣ ಶಿಥಿಲಗೊಂಡು ಒಂದೊಂದೇ ಇಟ್ಟಿಗೆಗಳು ಕೆಳಗೆ ಬೀಳಲಾರಂಭಿಸಿವೆ. ಅಲ್ಲದೆ ಅಲ್ಲಲ್ಲಿ ತೀವ್ರತರದ ಬಿರುಕು ಬಿಟ್ಟಿದ್ದು ಆತಂಕ ಹುಟ್ಟಿಸಿದೆ. ನಾಲ್ಕು ಕೊಠಡಿ ಹೊಂದಿರುವ ಈ ಕಟ್ಟಡದಲ್ಲಿ ತರಗತಿ ನಡೆಸಲು ಸಾಧ್ಯವಾಗದೆ ಉಳಿದ ಕಟ್ಟಡದಲ್ಲಿ ಒಟ್ಟಿಗೆ ಒಂದರಿಂದ ಏಳನೇ ತರಗತಿಯನ್ನು ಒಟ್ಟಿಗೆ ಕೂರಿಸಿ ನಡೆಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ.

ಸ್ವಾತಂತ್ರ್ಯ ಪೂರ್ವ ಕಟ್ಟಡ: ಬೈಸೆಯ ಸರ್ಕಾರಿ ಶಾಲೆಯ ಕಟ್ಟಡಕ್ಕೆ ಶಾಲೆಯ ಮೂಲಗಳ ಪ್ರಕಾರ 7 ದಶಕ ಕಳೆದಿದೆ. ಸ್ವಾತಂತ್ರ್ಯ ಪೂರ್ವ ಅಂದರೆ 1947ರಲ್ಲಿ ಈ ಕಟ್ಟಡ ಸ್ಥಾಪನೆಯಾಯ್ತು ಎಂದು ಸ್ಥಳೀಯರು ಹೇಳುತ್ತಾರೆ. ಅಂದಿನಿಂದ ಈವರೆಗೆ ನಿರಂತರ ವಿದ್ಯಾದಾನ ಮಾಡುತ್ತ ಮೂಡುಗೊಪ್ಪ ಮತ್ತು ಅರಮನೆಕೊಪ್ಪ ಗ್ರಾಪಂ ಭಾಗದ ಜನರ ಮಹತ್ವದ ಶೈಕ್ಷಣಿಕ ಕೇಂದ್ರವಾಗಿತ್ತು. ಇದೀಗ ಸುಮಾರು 29 ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡುತ್ತಿದ್ದು ಕಟ್ಟಡದ ದುಸ್ಥಿತಿಯಿಂದಾಗಿ ಸುಗಮ ವ್ಯಾಸಂಗ ಕಷ್ಟವಾಗಿದೆ.

ಕಟ್ಟಡಕ್ಕೇನು ಕೊರತೆ ಇಲ್ಲ; ತಜ್ಞರ ವರದಿ: ಭೀಕರ ಮಳೆಹಾನಿಗೆ ತುತ್ತಾದ ಸಂದರ್ಭದಲ್ಲಿ ಶಾಲಾ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಧಿಕಾರಿಗಳು ವರದಿ ಕೇಳಿದ್ದರು. ಅಲ್ಲಿಗೆ ಭೇಟಿ ಕೊಟ್ಟ ಇಂಜನಿಯರ್‌ ಕಟ್ಟಡ ಪರಿಶೀಲಿಸಿ ಕಟ್ಟಡಕ್ಕೇನು ತೊಂದರೆ ಇಲ್ಲ ಎಂಬ ವರದಿ ರವಾನಿಸಿದ್ದರು. ಆದರೆ ಕಟ್ಟಡದ ದುಸ್ಥಿತಿ ಕಣ್ಣಿಗೆ ರಾಚುವಂತಿದ್ದರೂ ಅ ಧಿಕಾರಿಗಳು ಹೀಗೇಕೆ ವರದಿ ಕೊಟ್ಟರು ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ. ಹೊಸ ಕಟ್ಟಡಕ್ಕಾಗಿ ಕೆಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದು, ಇಂಜನಿಯರ್‌ ವರದಿಯಿಂದಾಗಿ ಹಿನ್ನೆಡೆಯಾಗಿದೆ.

ಶಿಕ್ಷಣ ಇಲಾಖೆ ಅಧಿ ಕಾರಿಗಳು ತುರ್ತು ಪರಿಶೀಲನೆ ನಡೆಸಿ ನೂತನ ಕಟ್ಟಡ ಮಂಜೂರು ಮಾಡುವಂತೆ ಬೈಸೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಶಾಲಾ ಆವರಣದಲ್ಲಿ ಪಾಳುಬಿದ್ದ ಬಾವಿ: ಬೈಸೆ ಶಾಲೆಯ ಆವರಣ ಪ್ರವೇಶಿಸುತ್ತಿದ್ದಂತೆ ಪಾಳು ಬಿದ್ದ ಬಾವಿ ಕಾಣಿಸುತ್ತದೆ. ಬಾವಿಯ ಕೈಪಿಡಿ ಕಿತ್ತು ಹೋಗಿ ಹಲವು ವರ್ಷಗಳೇ ಕಳೆದಿವೆ. ಅಲ್ಲದೆ ಬಾವಿಯೊಳಗೆ ಕಸಕಡ್ಡಿಗಳು ಬಿದ್ದು ನೀರಿಲ್ಲದಂತೆ ಆಗಿದೆ. ತೆರೆದ ಬಾವಿಯಾದ ಕಾರಣ ಅಪಾಯಕ್ಕೂ ಆಹ್ವಾನ ನೀಡುತ್ತಿದೆ. ಹೀಗಿದ್ದರೂ ಬಾವಿಯನ್ನು ದುರಸ್ತಿಗೊಳಿಸುವ ಇಲ್ಲವೇ ಮುಚ್ಚುವ ಕೆಲಸ ಮಾಡಿಲ್ಲ. ಅಲ್ಲದೆ ಶೌಚಾಲಯದ ಮೇಲು ಹೊದಿಕೆ ಕೂಡ ಶಿಥಿಲಗೊಂಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.