ಬೆಳೆ ವಿಮೆ ಸಿಗದೆ ರೈತರ ಪರದಾಟ

ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಯಾವ ರೈತರಿಗೂ ಸಿಕ್ಕಿಲ್ಲ ಬೆಳೆವಿಮೆ

Team Udayavani, Jan 10, 2020, 1:32 PM IST

10-January-13

ಹೊಸನಗರ: ಪ್ರಕೃತಿ ವಿಕೋಪ, ಅತಿವೃಷ್ಟಿಯ ಸಂದರ್ಭದಲ್ಲಿ ಬೆಳೆ ಕಳೆದುಕೊಂಡಾಗ ಅಪತ್ಕಾಲದಲ್ಲಿ ನೆರವಾಗಲಿ ಎಂದು ರೈತರು ವಾರ್ಷಿಕ ಕಂತು ಕಟ್ಟಿ ಬೆಳೆವಿಮೆ ಮಾಡಿಸಿದ್ದೇನೋ ಸರಿ. ಆದರೆ ಇಲ್ಲೊಂದು ಗ್ರಾಪಂ ವ್ಯಾಪ್ತಿಯಲ್ಲಿ ಬೆಳೆವಿಮೆ ಪರಿಹಾರ ಪಡೆಯುವಲ್ಲಿ ಅರ್ಹರಾದರೂ ಯಾವೊಬ್ಬ ರೈತರಿಗೂ ಬೆಳೆವಿಮೆ ಸಿಗದೆ ಆತಂಕ ಪಡುವಂತಾಗಿದೆ.

ನಗರ ಹೋಬಳಿಯ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ರೈತರ ಅತಂತ್ರ ಸ್ಥಿತಿ ಇದು. ಈ ಭಾಗದ 250ಕ್ಕೂ ಹೆಚ್ಚು ರೈತರು ತಮ್ಮ ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ ಮಾಡಿಸಿದ್ದರು. ಆದರೆ ನಗರ ಹೋಬಳಿಯಲ್ಲಿ ಕಳೆದ ಎರಡು ವರ್ಷ ಕಂಡು ಕೇಳರಿಯದ ಮಳೆಯಿಂದ ಬೆಳೆ ಸಂಪೂರ್ಣ ನಾಶವಾಗಿತ್ತು. ಆದರೆ ಆಪತ್ಕಾಲದಲ್ಲಿ ನೆರವಾಗಲಿ ಎಂದು ಮಾಡಿಸಿದ್ದ ಬೆಳೆವಿಮೆ ಕೂಡ ಸಿಗದೆ ಅಡಕೆ ಬೆಳೆಗಾರರು ಸೇರಿದಂತೆ ರೈತರು ಪರದಾಡುವಂತಾಗಿದೆ.

289 ಇಂಚು ಮಳೆ: ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 289 ಇಂಚು ಮಳೆ ಸುರಿದಿತ್ತು. ಆ ಮಳೆಗೆ ಪ್ರತಿಯೊಬ್ಬ ರೈತರ ಫಸಲು ನಾಶವಾಗಿತ್ತು. ತೋಟಗಾರಿಕೆ ಇಲಾಖೆ ಮತ್ತು ವಿಮಾ ಕಂಪನಿ ನಿಯಮಾವಳಿಯಂತೆ ಬೆಳೆವಿಮೆ ಮಾಡಿಸಿದ್ದರೂ ಕೂಡ ಯಾರೊಬ್ಬರಿಗೂ ನಯಾಪೈಸೆ ಸಂದಾಯವಾಗಿಲ್ಲ.

ತೋಟಗಾರಿಕಾ ಇಲಾಖೆಯೋ.. ಇಲ್ಲ ವಿಮಾ ಕಂಪನಿಯೋ..: ಈಗಾಗಲೇ ಬೆಳೆವಿಮೆ ಸಕಾಲಕ್ಕೆ ಪಾವತಿಯಾಗದೆ ಸಾಕಷ್ಟು ಸುದ್ದಿಗೂ ಗ್ರಾಸವಾಗಿತ್ತು. ಶಿವಮೊಗ್ಗ ಜಿಲ್ಲೆಯ ಕೆಲವರಿಗೆ ಪರಿಹಾರ ಬಂದಿದ್ದರೆ ಹಲವರಿಗೆ ಬಂದಿಲ್ಲ. ಈ ಬಗ್ಗೆ ವಿಮಾ ಕಂಪನಿಗೆ ಕರೆ ಮಾಡಿದರೆ ಯಾವುದೇ ಸ್ಪಂದನೆ ಸಿಗದ ಕಾರಣ ಜಿಲ್ಲಾಧಿಕಾರಿಗಳ ತನಕ ವಿಷಯ ಪ್ರಸ್ತಾಪವಾಗಿತ್ತು. ಬಳಿಕ ಸಂಬಂಧಪಟ್ಟ ತೋಟಗಾರಿಕಾ ಮತ್ತು ವಿಮಾ ಕಂಪನಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಆದರೂ ಕೂಡ ವಿಮೆ ಪಾವತಿಯಾಗದಿರುವುದು ರೈತರ ಕೆಂಗಣ್ಣಿಗೆ ಕಾರಣವಾಗಿದೆ.

ತೋಟಗಾರಿಕೆ ಇಲಾಖೆಯನ್ನು ಕೇಳಿದರೆ ವಿಮಾ ಕಂಪನಿ ಕಡೆ ಬೊಟ್ಟು ಮಾಡುತ್ತಾರೆ.ವಿಮಾ ಕಂಪನಿ ಕಾಲ್‌ ರೀಸೀವ್‌ ಮಾಡೋದಿಲ್ಲ. ಯಾರನ್ನು ಕೇಳಬೇಕು ಎಂಬುದೇ ಗೊತ್ತಿಲ್ಲ ಎನ್ನುತ್ತಾರೆ ರೈತರು. ಹವಾಮಾನ ಆಧಾರಿತ ಬೆಳೆವಿಮೆಯನ್ನು
ಆಯಾಯ ಪ್ರದೇಶದಲ್ಲಿ ಸುರಿಯುವ ಮಳೆಯನ್ನು ಆಧರಿಸಿ ನೀಡಲಾಗುತ್ತದೆ. ಪ್ರತಿ ಗ್ರಾಪಂ ಕಚೇರಿಯಲ್ಲೂ ಮಳೆಮಾಪಕವನ್ನು ಕೂಡ ಅಳವಡಿಸಲಾಗಿದೆ. ಆದರೆ ಅರಮನೆಕೊಪ್ಪ ಗ್ರಾಪಂನ ಮಳೆ ಪ್ರಮಾಣ ತೆಗೆದು ನೋಡಿದರೆ.. ಲೆಫ್ಟ್‌ ಔಟ್‌.. ನೋ ಕ್ಲೈ ಂ ಎಂದು ತೋರಿಸುತ್ತದೆ. ಇದರಿಂದಾಗಿ ಪಂಚಾಯತ್‌ ವ್ಯಾಪ್ತಿಯ ಪ್ರತಿ ರೈತರು ಬೆಳೆವಿಮೆಯಿಂದ ದೂರ ಉಳಿಯುವಂತಾಗಿದೆ.

ಬೆಳೆವಿಮೆ ಸಮಸ್ಯೆ ಕುರಿತಂತೆ ವಿಮಾ ಕಂಪನಿ ಮತ್ತು ತೋಟಗಾರಿಕಾ ಇಲಾಖೆಯನ್ನು ಪದೇ ಪದೇ ಸಂಪರ್ಕಿಸಲಾಗುತ್ತಿದೆ. ಆದರೆ ಯಾವುದೇ ಸ್ಪಂದನೆ ಸಿಗುತ್ತಿಲ್ಲ. ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಬೆಳೆವಿಮೆ ಕೂಡ ಪಾವತಿಸುವಲ್ಲಿ ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಈ ಭಾಗದ ರೈತರು ಒಟ್ಟಾಗಿ ಗ್ರಾಹಕರ ವೇದಿಕೆಗೆ ದೂರು ನೀಡುವ ಬಗ್ಗೆ ಚಿಂತಿಸಲಾಗಿದೆ.
ಕೆ.ವಿ. ಕೃಷ್ಣಮೂರ್ತಿ, ಕೃಷಿಕ,

ಅರಮನೆಕೊಪ್ಪ ಗ್ರಾಪಂಗೆ ಸಂಬಂಧ ಪಟ್ಟಂತೆ ಬೆಳೆವಿಮೆ ಪಾವತಿಸುವಲ್ಲಿ ಉಂಟಾಗಿರುವ ಸಮಸ್ಯೆ ಬಗ್ಗೆ ನಮ್ಮ ಗಮನಕ್ಕೂ ಬಂದಿದೆ. ಈ ಕುರಿತೂ ವಿಮಾ ಕಂಪನಿ ಪ್ರತಿನಿಧಿಗಳ ಜೊತೆ ಮಾತನಾಡಲಾಗಿದೆ. ರೈತರಿಗೆ ಶೀಘ್ರದಲ್ಲಿ ಬೆಳೆವಿಮೆ ವಿತರಣೆಯಾಗಲಿದೆ.
.ಯೋಗೇಶ್‌,
ಉಪನಿರ್ದೇಶಕರು,
ತೋಟಗಾರಿಕಾ ಇಲಾಖೆ ಶಿವಮೊಗ್ಗ

„ಕುಮುದಾ ನಗರ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.