ಅಪಾಯಕಾರಿ ಶಾಲಾ ಕಟ್ಟಡ ತೆರವಿಗೆ ಆಗ್ರಹ

ಆದೇಶ ಪಾಲಿಸದ ಕ್ಷೇತ್ರ ಶಿಕ್ಷಣಾಧಿಕಾರಿ ಧೋರಣೆ ಖಂಡಿಸಿ ಧರಣಿ

Team Udayavani, Jun 20, 2019, 10:55 AM IST

20-June-10

ಹೊಸನಗರ: ಅಪಾಯದ ಸ್ಥಿತಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ತೆರವಿಗೆ ಆಗ್ರಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಎದುರು ಹೋರಾಟಗಾರ ಟಿ.ಆರ್‌. ಕೃಷ್ಣಪ್ಪ ಏಕಾಂಗಿ ಪ್ರತಿಭಟನೆ ನಡೆಸಿದರು.

ಹೊಸನಗರ: ನಾದುರಸ್ತಿಯಲ್ಲಿರುವ ರಿಪ್ಪನ್‌ಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡವನ್ನು ತೆರವುಗೊಳಿಸುವ ಆದೇಶ ಪಾಲಿಸದ ಕ್ಷೇತ್ರ ಶಿಕ್ಷಣಾಧಿಕಾರಿ ಧೋರಣೆ ಖಂಡಿಸಿ ಹೊರಾಟಗಾರ ಟಿ.ಆರ್‌. ಕೃಷ್ಣಪ್ಪ ಬುಧವಾರ ಸಾರ್ವಜನಿಕ ಶಿಕ್ಷಣಾಧಿಕಾರಿ ಕಚೇರಿ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದೇಶಕರು ಮೇ 21ರಂದು ಶಾಲಾ ಮಕ್ಕಳ ಜೀವಕ್ಕೆ ಅಪಾಯ ತರುವ ಸ್ಥಿತಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲಾ ಕಟ್ಟಡವನ್ನು ತೆರವುಗೊಳಿಸಲು ಆದೇಶ ನೀಡಿದ್ದಾರೆ.

ಆದರೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಜಕೀಯ ಒತ್ತಡದ ಕಾರಣ ಅನುಷ್ಠಾನ ಮಾಡುತ್ತಿಲ್ಲ ಎಂಬುದು ಪ್ರತಿಭಟನೆ ಕಾರಣ ಆಗಿದೆ ಎಂದರು.

ಮಳೆ ಬಂದರೆ ಮೇಲಿನ ಸೂರು, ಗೋಡೆಯು ಶಾಲಾ ಮಕ್ಕಳ ಮೇಲೆ ಬಿದ್ದು ಪ್ರಾಣಹಾನಿ ಆಗುತ್ತದೆ. ತಮ್ಮ ಮೇಲಿನ ವೈಯಕ್ತಿಕ ದ್ವೇಷದಿಂದ ಇಲಾಖಾ ಮುಖ್ಯಸ್ಥರು ಅರೆಬರೆ ಕಿತ್ತು ತೆಗೆದ ಕಟ್ಟಡವನ್ನು ಪೂರ¡ವಾಗಿ ತೆರವುಗೊಳಿಸಲು ಮುಂದಾಗುತ್ತಿಲ್ಲ ಎಂದು ದೂರಿದರು.

ಬಡಮಕ್ಕಳ ಜೀವಕ್ಕೆ ಸಂಚಕಾರ ತರುವ ಈ ಕಟ್ಟಡವನ್ನು ತೆರವುಗೊಳಿಸಿ. ಅದೇ ಸ್ಥಳದಲ್ಲಿ ಶಾಸಕರ ಅನುದಾನದಲ್ಲಿ ಮಂಜೂರಾದ ರೂ.17.40 ಲಕ್ಷ ವೆಚ್ಚದ 2 ಕೊಠಡಿಯನ್ನು ನಿರ್ಮಿಸುವಂತೆ ಅವರು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಈ ಸರ್ಕಾರಿ ಶಾಲೆಯು ಶತಮಾನ ಕಂಡಿದ್ದರೂ ಸಹ ಇಲ್ಲಿಯ ತನಕ ಸ್ಥಳ ಮಂಜೂರಾತಿ ಮಾಡಿಸಿಕೊಂಡಿಲ್ಲ. ಶಾಲಾ ನಿವೇಶನ ಗ್ರಾಪಂ ಹೆಸರಿನಲ್ಲಿದೆ. ಕೂಡಲೇ ಇಲಾಖೆ ತಮ್ಮ ಇಲಾಖೆಗೆ ಮಂಜೂರು ಮಾಡಿಸಿಕೊಳ್ಳಬೇಕು. ಶಾಲಾ ನಿವೇಶನ ಪರಭಾರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರಿ ಶಾಲೆಯಲ್ಲಿರುವ ಬಡ ಮಕ್ಕಳಿಗಾಗಿ ಈ ಹೋರಾಟ ವಿನಃ, ತಮಗೆ ಈ ವಿಷಯದಲ್ಲಿ ಶಾಸಕರಲ್ಲಾಗಲಿ, ಗ್ರಾಪಂ, ಶಾಲಾಭಿವೃದ್ಧಿ ಸಮಿತಿ ಜತೆ ಸಂಘರ್ಷ ಇಲ್ಲ ಎಂದರು.

ಶಿಕ್ಷಣ ಇಲಾಖೆ ಸ್ಪಷ್ಟನೆ: ಶಾಲಾ ಕಟ್ಟಡ ಕುರಿತಂತೆ ಶಾಲಾಭಿವೃದ್ಧಿ ಸಮಿತಿ, ಪೋಷಕರು, ಜನಪ್ರತಿನಿಧಿಗಳ ನಡುವೆ ಭಿನ್ನಾಬಿಪ್ರಾಯ ಇದೆ. ಈ ಕುರಿತಂತೆ 3 ಬಾರಿ ಸಭೆ ನಡೆಸಿದರೂ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯ ಆಗಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಮಪ್ಪ ಗೌಡ ಸ್ಪಷ್ಟನೆ ನೀಡಿದರು.

ಶಾಲಾ ನಿವೇಶನ ಇಲಾಖೆಯ ಹೆಸರಿನಲ್ಲಿ ಇಲ್ಲ. ಈ ಕಟ್ಟಡ ಕುರಿತಂತೆ ಮೂರು ವಿಭಿನ್ನ ಅಭಿಪ್ರಾಯ ಇದೆ. 1.ಕೆಲವರು ಅದೇ ಕಟ್ಟಡಕ್ಕೆ ಸೂರು ಮಾಡಿಸಲು, 2. ಕಟ್ಟಡ ತೆರವುಗೊಳಿಸಿದ ನಂತರ ಅದೇ ಸ್ಥಳದಲ್ಲಿ ಕಟ್ಟಡ ಮರು ನಿರ್ಮಾಣ. 3. ಕಟ್ಟಡ ತೆರವುಗೊಳಿಸಿದ ನಂತರ ಬೇರೊಂದು ಸ್ಥಳದಲ್ಲಿ ಕಟ್ಟಡ ನಿರ್ಮಿಸಿ ಎಂಬ ಅಭಿಪ್ರಾಯ ಇದೆ ಎಂದರು. ಶಾಲಾ ವಿಷಯದಲ್ಲಿ ರಾಜಕೀಯ ಬಿಟ್ಟು ಎಲ್ಲರೂ ಒಟ್ಟಾಗಿ ಬಂದು ಒಮ್ಮತದ ತೀರ್ಮಾನಕ್ಕೆ ಬಂದರೆ ತಾಲೂಕು ಅಧಿಕಾರಿಯಾಗಿ ಕೆಲಸ ಪ್ರಾಮಾಣಿಕವಾಗಿ ಅನುಷ್ಠಾನ ಮಾಡುತ್ತೇನೆ. ಈ ಕುರಿತಂತೆ ಇನೊಂದು ಸುತ್ತಿನ ಸಭೆಯನ್ನು ಶೀಘ್ರದಲ್ಲಿ ಕರೆಯಲಾಗುವುದು ಎಂದು ಪತ್ರಿಕೆಗೆ ತಿಳಿಸಿದರು.

ಜಿದ್ದು ಬೇಡ, ಸಹಕರಿಸಿ ಶಾಸಕರೇ!
ಶಾಲಾ ಮಕ್ಕಳ ಜೀವಕ್ಕೆ ಸಂಚಕಾರ ತರುವ ವಿಷಯದಲ್ಲಿ ಶಾಸಕರು ತಮ್ಮ ಮೇಲೆ ಯಾರದೋ ಮಾತುಕಟ್ಟಿಕೊಂಡು ಜಿದ್ದಿಗೆ ಬೀಳಬಾರದು. ಶಾಸಕರೇ ಮುಂದೆ ನಿಂತು ಜನಾಭಿಪ್ರಾಯಕ್ಕೆ ಮನ್ನಣೆ ನೀಡಿ, ಕಟ್ಟಡ ತೆರವುಗೊಳಿಸಲು ಮುಂದಾಗಬೇಕು ಎಂದು ಕೃಷ್ಣಪ್ಪ ಮನವಿ ಮಾಡಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.