ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ
ಮೈದುಂಬಿದ ನದಿಗಳು•ಮಾಣಿ, ಚಕ್ರಾ, ಸಾವೇಹಕ್ಲು, ಲಿಂಗನಮಕ್ಕಿ ಜಲಾಶಯಗಳ ನೀರಿನ ಹರಿವು ಹೆಚ್ಚಳ
Team Udayavani, Aug 5, 2019, 12:15 PM IST
ಹೊಸನಗರ: ಮಾಣಿ ಜಲಾಶಯಕ್ಕೆ ಸಾಗುವ ಮಾರ್ಗದಲ್ಲಿ ರಸ್ತೆಯ ಮಧ್ಯೆ ಮರ ಬಿದ್ದಿರುವುದು.
ಹೊಸನಗರ: ಕಳೆದ ಒಂದು ವಾರದಿಂದ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದೆ. ಅದರಲ್ಲೂ ನಗರ ಹೋಬಳಿಯಲ್ಲಂತೂ ಎಡಬಿಡದೆ ಮಳೆ ಸುರಿಯುತ್ತಿದ್ದು ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಮಾಣಿ, ಚಕ್ರಾ, ಸಾವೇಹಕ್ಲು, ಲಿಂಗನಮಕ್ಕಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಿದೆ. ನಗರ ಹೋಬಳಿಯಾದ್ಯಂತ ಕಳೆದ ಒಂದು ವಾರದಿಂದ ದಿನಂಪ್ರತಿ 8 ರಿಂದ 10 ಸೆಂಮೀ ಮಳೆಯಾಗಿದೆ. ದಿನ ಕಳೆದಂತೆ ಮಳೆಯ ತೀವ್ರತೆ ಹೆಚ್ಚುತ್ತಿದ್ದು ಜನರು ಮನೆಯಿಂದ ಹೊರಬರಲು ಯೋಚಿಸುವಂತೆ ಮಾಡಿದೆ.
ನಗರದಲ್ಲಿ 124 ಮಿಮೀ ಮಳೆ: ಹೋಬಳಿ ಕೇಂದ್ರ ನಗರದಲ್ಲಿ ಒಂದೇ ದಿನ ಅತೀ ಹೆಚ್ಚು 124 ಮಿಮೀ ಮಳೆಯಾಗಿದೆ. ಉಳಿದಂತೆ ಮಾಸ್ತಿಕಟ್ಟೆಯಲ್ಲಿ 101 ಮಿಮೀ, ಹುಲಿಕಲ್ 89 ಮಿಮೀ, ಯಡೂರಿನಲ್ಲಿ 82 ಮಿಮೀ, ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 65 ಮಿಮೀ ಮಳೆ ಒಂದೇ ದಿನ ಸುರಿದಿದೆ. 594.36 ಗರಿಷ್ಠ ಮಟ್ಟದ ಮಾಣಿ ಡ್ಯಾಂ ನೀರಿನ ಮಟ್ಟ 579.46 ಮೀ ತಲುಪಿದೆ. ನೀರಿನ ಒಳಹರಿವು ಹೆಚ್ಚಿದ್ದು 11660 ಕ್ಯೂಸೆಕ್ ತಲುಪಿದೆ. ಈವರೆಗೆ ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 2756 ಮಿಮೀ ಮಳೆ ಸುರಿದಿದೆ. ಉಳಿದಂತೆ ಯಡೂರು 2985 ಮಿಮೀ, ಹುಲಿಕಲ್ 3527 ಮಿಮೀ, ಮಾಸ್ತಿಕಟ್ಟೆಯಲ್ಲಿ 3230 ಮಿಮೀ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ