ಕೊಡಚಾದ್ರಿ ಗಿರಿಯಲ್ಲಿ ಹೊಸ ವರ್ಷ ಸಂಭ್ರಮಕ್ಕೆ ಬ್ರೇಕ್‌?

ಪ್ರವಾಸಿ ಮಂದಿರದಲ್ಲಿ ತಂಗಲು ಅವಕಾಶ ನೀಡದಂತೆ ಮನವಿ

Team Udayavani, Dec 26, 2019, 12:58 PM IST

26-December-14

„ಕುಮುದಾ ನಗರ
ಹೊಸನಗರ:
ಚಾರಣಿಗರ ನೆಚ್ಚಿನ ಸ್ಪಾಟ್‌, ಮೂಕಾಂಬಿಕೆ ಭಕ್ತರ ಧಾರ್ಮಿಕ ಶ್ರದ್ಧಾಕೇಂದ್ರ ಭುವನಗಿರಿ ಕೊಡಚಾದ್ರಿ ಗಿರಿಯಲ್ಲಿ ಪ್ರವಾಸಿಗರ ವರ್ಷಾಚರಣೆ ನಿರ್ಬಂಧಿ ಸುವ ಸಾಧ್ಯತೆ ಹೆಚ್ಚಿದೆ. ಮೂಕಾಂಬಿಕ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವ ಅಲ್ಲದೆ ಶೋಲಾ ಅರಣ್ಯ ಮತ್ತು ಹುಲ್ಲುಗಾವಲು ಪ್ರದೇಶ ಹೊಂದಿರುವ ಕೊಡಚಾದ್ರಿ ಗಿರಿಗೆ ಬರುವ ಪ್ರವಾಸಿಗರು ಅಲ್ಲಿನ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಿ ಸಂಭ್ರಮದೊಂದಿಗೆ ಹೊಸವರ್ಷ ಸ್ವಾಗತಿಸುತ್ತಿದ್ದರು. ಅಲ್ಲದೆ ಅಲ್ಲಲ್ಲಿ ಬೆಂಕಿ ಹಾಕಿ ಸಂಭ್ರಮಿಸಿದ್ದು ಉಂಟು. ಆದರೆ ಈ ಬಾರಿ ಇದಕ್ಕೆಲ್ಲ ಬ್ರೇಕ್‌ ಹಾಕಲು ಕೊಲ್ಲೂರು ವಿಭಾಗದ ವನ್ಯ ಜೀವಿ ವಲಯ ನಿರ್ಧಾರ ಮಾಡಿದೆ.

ತಂಗಲು ಅವಕಾಶ ಬೇಡ: ಈ ಸಂಬಂಧ ಹೊಸನಗರ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆದಿರುವ ಕೊಲ್ಲೂರು ವನ್ಯ ಜೀವಿ ವಿಭಾಗ ಇದೇ ತಿಂಗಳ ಡಿ.28ರಿಂದ ಜನವರಿ 1 ತನಕ ಪ್ರವಾಸಿಗರಿಗೆ ಕೊಡಚಾದ್ರಿ ಪ್ರವಾಸಿ ಮಂದಿರದಲ್ಲಿ ತಂಗಲು ಅವಕಾಶ ನೀಡದಂತೆ ಮನವಿ ಮಾಡಿದೆ. ತಂಗಲು ಅವಕಾಶ ನೀಡಿದಲ್ಲಿ ಮೋಜು ಮಸ್ತಿಯ ಜೊತೆಗೆ ಬೆಂಕಿ ಶಿಬಿರ ಆಯೋಜಿಸುವ ಸಾಧ್ಯತೆ ಇದೆ. ಕೊಡಚಾದ್ರಿ ಗಿರಿಯ ಸುತ್ತಲೂ ಶೋಲಾ ಅರಣ್ಯ ಮತ್ತು ಹುಲ್ಲುಗಾವಲು ಇದ್ದು ಅನಾಹುತಕ್ಕೆ ದಾರಿಯಾಗಬಹುದು ಎಂಬ ಆತಂಕ ವ್ಯಕ್ತಪಡಿಸಿರುವ ಕೊಲ್ಲೂರು ವನ್ಯಜೀವಿ ಅರಣ್ಯ ವಿಭಾಗ ಪ್ರವಾಸಿ ಮಂದಿರದಲ್ಲಿ ಅವಕಾಶ ನೀಡದಂತೆ ಹೊಸನಗರ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಿದೆ.

ನಿರ್ಬಂಧ ಸಾಧ್ಯತೆ: ಕೊಡಚಾದ್ರಿ ಗಿರಿಯ ಸಂರಕ್ಷಣೆ ಸಲುವಾಗಿ ವನ್ಯಜೀವಿ ಇಲಾಖೆ ನೀಡಿರುವ ಮನವಿ ಲೋಕೋಪಯೋಗಿ ಇಲಾಖೆ ಪುರಸ್ಕರಿಸುವ ಸಾಧ್ಯತೆ ಇದ್ದು, ವರ್ಷಾಂತ್ಯದಲ್ಲಿ ಕೊಡಚಾದ್ರಿಗಿರಿಯ ಪ್ರವಾಸಿ ಮಂದಿರದಲ್ಲಿ ಪ್ರವಾಸಿಗರಿಗೆ ತಂಗುವ ಅವಕಾಶ ಸಿಗುವ ಸಾಧ್ಯತೆ ಕಡಿಮೆ.

ಪ್ರವಾಸಿಗರು ಹೆಚ್ಚು: ವರ್ಷಾಂತ್ಯದಲ್ಲಿ ಕೊಡಚಾದ್ರಿ ಗಿರಿಗೆ ಹರಿದು ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚು. ಅಲ್ಲದೆ ಮೂಲ ಮೂಕಾಂಬಿಕೆಯ ನೆಲವೀಡು ಆಗಿರುವ ಕಾರಣ ಕೇರಳ ಮತ್ತು ಇತರ ರಾಜ್ಯದಿಂದ ಕೊಲ್ಲೂರಿಗೆ ಬರುವ ಭಕ್ತಾ ದಿಗಳು ಕೂಡ ಕೊಡಚಾದ್ರಿಗೆ ಹರಿದು ಬರುತ್ತಾರೆ. ಆದರೆ ಭಕ್ತಾ ದಿಗಳು ಹೆಚ್ಚಾಗಿ ಹಗಲು ಸಮಯದಲ್ಲಿ ಬಂದು ದರ್ಶನಗೈದು ವಾಪಾಸಾಗುತ್ತಾರೆ. ಆದರೆ ಪ್ರವಾಸಿಗರು ರಾತ್ರಿ ತಂಗಿ ಬೆಳಿಗ್ಗೆ ಸೂರ್ಯೋದಯ ನೋಡಿಕೊಂಡು ವಾಪಾಸಾಗುತ್ತಾರೆ.

ಕೊಡಚಾದ್ರಿಯಲ್ಲಿ ಮುಂಜಾಗೃತ ಕ್ರಮ: ಕೊಡಚಾದ್ರಿಯಲ್ಲಿ ಪ್ರವಾಸಿ ಮಂದಿರ ಹೊರತು ಪಡಿಸಿ ಬೇರೆಲ್ಲೂ ಟೆಂಟ್‌ ಹಾಕಿ ತಂಗಲು ಅವಕಾಶವಿಲ್ಲ. ಈಗಾಗಲೇ ಪ್ರವಾಸಿ ಮಂದಿರಕ್ಕೆ ಅವಕಾಶ ನೀಡದಂತೆ ಮನವಿ ಮಾಡಲಾಗಿದೆ. ವರ್ಷಾಚರಣೆ ವೇಳೆ ಯಾವುದೇ ಮೋಜು ಮಸ್ತಿ, ಬೆಂಕಿ ಹಾಕಿ ಸಂಭ್ರಮಿಸದಂತೆ ವನ್ಯಜೀವಿ ಇಲಾಖೆ ನಿಗಾ ಇಟ್ಟಿದೆ. ಅಲ್ಲದೆ ಪ್ರವಾಸಿಗರ ನೆಚ್ಚಿನ ಸ್ಪಾಟ್‌ ಸರ್ವಜ್ಞಪೀಠದ ಪರಿಸರ ಬಗ್ಗೆ ಕೂಡ ಇಲಾಖೆ ಗಮನ ಹರಿಸಿದೆ. ಒಟ್ಟಿನಲ್ಲಿ ಈ ವರ್ಷ ಕೊಡಚಾದ್ರಿ ಗಿರಿಯಲ್ಲಿ ಡಿ.31 ಮತ್ತು ವರ್ಷಾಚರಣೆ ಆಚರಿಸಬೇಕು ಎಂಬ ನಿರೀಕ್ಷೆ ಹೊತ್ತ ಪ್ರವಾಸಿಗರ ಆಸೆಗೆ ವನ್ಯಜೀವಿ ಇಲಾಖೆ ತಣ್ಣೀರು ಎರಚಿದೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.