ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ನೀಡಲು ಕ್ರಮ

ಸಂತ್ರಸ್ತ ಫಲಾನುಭವಿಗಳ ಪಟ್ಟಿ ಸಲ್ಲಿಸಲು ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ದಯಾನಂದ್‌ ಸೂಚನೆ

Team Udayavani, Jun 26, 2019, 12:23 PM IST

26-June-18

ಹೊಸನಗರ: ಗಾಯತ್ರಿ ಮಂದಿರದಲ್ಲಿ ನಡೆದ ಜಿಲ್ಲಾ ಮಟ್ಟದ ಕಂದಾಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಮಾತನಾಡಿದರು.

ಹೊಸನಗರ: ಶರಾವತಿ ನದಿ ಮುಳುಗಡೆ ಸಂತ್ರಸ್ಥ ಫಲಾನುಭವಿಗಳ ಪಟ್ಟಿ ಮಾಡಲು ಎಲ್ಲಾ ತಾಲೂಕು ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದ್ದು ಸಂತ್ರಸ್ಥರ ಭೂ ಹಕ್ಕು ಕುರಿತ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಲಾಗಿದೆ. ಭೂ ಮಂಜೂರಾತಿ ಅದಷ್ಟೂ ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು.

ಪಟ್ಟಣದ ಗಾಯಿತ್ರಿ ಮಂದಿರದಲ್ಲಿ ನಡೆದ ಜಿಲ್ಲಾ ಮಟ್ಟದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಎಲ್ಲಾ ತಾಲೂಕು ತಹಶೀಲ್ದಾರ್‌ಗಳ ಮಾಹಿತಿ ಸಂಗ್ರಹಿಸಿ ಅವರು ಮಾತನಾಡಿದರು.

ಈ ಹಿಂದೆ ಇಲ್ಲಿನ ಶರಾವತಿ ನದಿ ಜಲಾಶಯ ನಿರ್ಮಾಣ ಸಂಬಂಧ ಸಾವಿರಾರು ರೈತ ಕುಟುಂಬಗಳು ಬದುಕು ಕಳೆದುಕೊಂಡು ಸಂತ್ರಸ್ಥರಾದರು. ಅವರಿಗೆ ಸರ್ಕಾರ ಘೋಷಿಸಿದ ಪರಿಹಾರ ಭೂಮಿ ನೀಡುವಲ್ಲಿ ಸೂಕ್ತ ಕ್ರಮ ಜರುಗಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ನೆಲೆಗೊಂಡಿರುವ ಸಂತ್ರಸ್ಥರಿಗೆ ಸೂಕ್ತ ಭೂ ಪರಿವರ್ತನೆ ಅಡಿಯಲ್ಲಿ ಭೂಮಿ ಮಂಜೂರು ಮಾಡುವಲ್ಲಿ ಇದ್ದ ಎಲ್ಲಾ ತೊಡಕುಗಳನ್ನು ನಿವಾರಣೆ ಮಾಡುವಲ್ಲಿ ಗಮನ ಹರಿಸಲಾಗಿದೆ. ಈ ಸಂಬಂಧ ಎಲ್ಲಾ ತಾಲೂಕು ತಹಶೀಲ್ದಾರ್‌ಗಳಿಗೂ ವರದಿ ಕೇಳಿ ಪತ್ರ ವ್ಯವಹಾರ ನಡೆಸಲಾಗಿದೆ. ಈ ವಿಚಾರದಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕಿದೆ. ಸಂತ್ರಸ್ಥರ ಭೂಮಿ ಮಂಜೂರಾತಿಯಲ್ಲಿ ಸಮಸ್ಯೆಗಳು ಇದ್ದಲ್ಲಿ ತಮ್ಮ ಗಮನಕ್ಕೆ ತರಬಹುದಾಗಿದೆ. ತಾವು ಖುದ್ದು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಜರುಗಿಸಲಾಗುವುದು ಎಂದರು.

ರುದ್ರಭೂಮಿಯಲ್ಲಿ ತಗಾದೆ ಬೇಡ: ಗ್ರಾಮದಲ್ಲಿ ನಿರ್ಮಾಣ ಮಾಡಲುದ್ದೇಶಿಸಿರುವ ರುದ್ರಭೂಮಿ ಜಾಗದ ವಿಚಾರದಲ್ಲಿ ಇಲಾಖೆ, ಇಲಾಖೆಗಳ ನಡುವೆ ತಗಾದೆ ಬೇಡ. ಸುಸೂತ್ರವಾಗಿ ಕಾರ್ಯ ಜರುಗಿಸಬೇಕಾಗಿದೆ. ಕೆಲವೆಡೆ ಅರಣ್ಯ ಇಲಾಖೆಯ ತಕರಾರುಗಳು ಇವೆ. ಇದನ್ನು ನಿವಾರಿಸಬೇಕಿದೆ. ಇಲ್ಲಿ ಅರಣ್ಯ ಇಲಾಖೆ ಸಲ್ಲದ ವಿಷಯದಲ್ಲಿ ಕಾಲಹರಣ ಮಾಡಬಾರದು. ತಕರಾರು ಇಲ್ಲವಾಗಿದ್ದಲ್ಲಿ ಕೂಡಲೇ ಸಹಕರಿಸಬೇಕಿದೆ. ಅಲ್ಲದೆ ಒಮ್ಮೆ ತಕರಾರು ಇದ್ದಲ್ಲಿ ಸೂಕ್ತ ಹಿಂಬರಹ ನೀಡಬೇಕಾಗಿದೆ. ಸುಮ್ಮನೆ ಸತಾಯಿಸಬೇಡಿ ಎಂದು ತಾಕೀತು ಮಾಡಿದರು.

ಜಂಟಿ ಸರ್ವೆ: ಜಿಲ್ಲೆಯಲ್ಲಿ ನಡೆಯಬೇಕಾಗಿದ್ದ ಕಂದಾಯ ಮತ್ತು ಅರಣ್ಯ ಇಲಾಖೆಯ ಜಂಟಿ ಸರ್ವೆ ಕಾರ್ಯಾಚರಣೆ ಅದಷ್ಟು ಬೇಗ ಮುಕ್ತಾಯವಾಗಬೇಕಿದೆ. ತಾಲೂಕು ವ್ಯಾಪ್ತಿಯಲ್ಲಿ ತಂಡಗಳ ರಚಿಸಲಾಗಿದ್ದು 15 ದಿನಗಳ ಕಾಲ ಸರ್ವೆ ನಡೆಸಲಿದೆ. ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಇಲ್ಲಿ ಸಮನ್ವಯತೆ ಸಾಧಿಸಿ ಕೆಲಸ ಮಾಡಬೇಕು. ಇನ್ನು ಮೂರು ತಿಂಗಳೊಳಗೆ ಸರ್ವೈ ಪೂರೈಸಿ ವರದಿ ನೀಡುವಂತೆ ಸೂಚಿಸಿದರು.

ಹಲವಷ್ಟು ತಾಲೂಕುಗಳಲ್ಲಿ ಅರಣ್ಯ ಸಮಿತಿ ಚಾಲ್ತಿಯಲ್ಲಿಲ್ಲದ ಕಾರಣ ಅರಣ್ಯ ಹಕ್ಕೂ ಯೋಜನೆ ನೆನೆಗುದಿಗೆ ಬಿದ್ದಿದೆ. ಇದರಲ್ಲಿ ಬಂದ 20 ಸಾವಿರ ಅರ್ಜಿ ತಿರಸ್ಕೃತವಾಗುವಲ್ಲಿ ಅರಣ್ಯ ಹಕ್ಕು ಸಮಿತಿ ನಿರ್ಲಕ್ಷ್ಯವೂ ಕಾರಣವಾಗಿದೆ. ಸಮಿತಿ ನಿಷ್ಕ್ರಿಯವಾದ ಪರಿಣಾಮ ಅರಣ್ಯ ಹಕ್ಕು ಮಂದಗತಿಯಲ್ಲಿ ಸಾಗುತ್ತಿದೆ. ಎಲ್ಲಿ ಅರಣ್ಯ ಸಮಿತಿ ಜಾಗೃತವಾಗಿಲ್ಲವೋ ಅಲ್ಲಿ ಬದಲಿ ಸಮಿತಿ ರಚಿಸಬೇಕಾಗಿದೆ. ಉದಾಹರಣೆಗ ಹೊಸನಗರ ತಾಲೂಕಿನ 23 ಗ್ರಾಪಂಗಳಲ್ಲಿ ಸಮಿತಿಗಳು ಕೆಲಸ ಮಾಡುತ್ತಿಲ್ಲ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಈ ಕೂಡಲೇ ಬದಲಿ ಸಮಿತಿ ರಚಿಸಿ ಫಲಾನುಭವಿಗಳಿಗೆ ಹಕ್ಕು ನೀಡಬೇಕಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಅನುರಾಧ, ಸಿಒ ಶಿವರಾಮೇ ಗೌಡ, ಉಪ ವಿಭಾಗಾಧಿಕಾರಿಗಳಾದ ದರ್ಶನ್‌, ಟಿ.ವಿ. ಪ್ರಕಾಶ್‌ ಮತ್ತಿತರರು ಇದ್ದರು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.