ಶರಾವತಿ ನದಿ ನೀರು ಬಿಡುವ ಪ್ರಶ್ನೆಯೇ ಇಲ್ಲ

ಸರ್ಕಾರದ ಪ್ರಸ್ತಾವಿತ ಯೋಜನೆಗೆ ಖಂಡನೆ

Team Udayavani, Jul 13, 2019, 12:19 PM IST

13-July-19

ಹೊಸನಗರ: ಪಟ್ಟಣದ ಗುರೂಜಿ ಶಾಲಾ ವಿದ್ಯಾರ್ಥಿಗಳು ಶರಾವತಿ ನದಿ ನೀರು ಯೋಜನೆ ಖಂಡಿಸಿ ಪಟ್ಟಣದ ಬೀದಿಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.

ಹೊಸನಗರ: ನಮ್ಮ ಜೀವನದಿ ಶರಾವತಿ ನೀರು ಬೆಂಗಳೂರಿಗಲ್ಲ. ಅವಳು ನಮ್ಮ ಮಲೆನಾಡಿಗೆ ಮಾತ್ರ ಮೀಸಲು. ಯಾವತ್ತೂ ಶರಾವತಿಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಶರಾವತಿ ನದಿ ಮುಟ್ಟುವ ಮುನ್ನ, ನಮ್ಮನ್ನು ಮುಟ್ಟಿ ಎಂದು ಘೋಷಣೆ ಕೂಗುತ್ತ ಪಟ್ಟಣದ ಗುರೂಜಿ ಇಂಟರ್‌ನ್ಯಾಶನಲ್ ಶಾಲಾ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನಾ ಮೆರವಣಿಗೆ ರ್ಯಾಲಿ ನಡೆಸಿ ಗಮನ ಸೆಳೆದರು.

ಶರಾವತಿ ನಮ್ಮ ತಾಯಿ. ಅವಳನ್ನು ನಂಬಿ ಸಾವಿರಾರು ಕುಟುಂಬವಿದೆ. ಅವಳ ಮಕ್ಕಳಾದ ನಾವು ಯಾವತ್ತೂ ಹೇಡಿಯಲ್ಲ. ರಕ್ತವನ್ನಾದರೂ ಕೊಟ್ಟೇವು. ತಾಯಿ ಶರಾವತಿಯ ಒಂದು ಹನಿ ನೀರು ಕೊಡೋಲ್ಲ. ಅನ್ನ ಬಿಟ್ಟೇವು ಆದರೆ ನೀರು ಕೊಡೋಲ್ಲ ಎಂಬ ಧೀರೋದಾತ್ತ ಘೋಷಣೆ ಕೂಗುತ್ತಾ ಕಳೂರು ಗ್ರಾಮದ ಶಾಲಾ ಆವರಣದಿಂದ ಪ್ರತಿಭಟನಾ ಜಾಥಾ ಆರಂಭಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು. ಪ್ರತಿಭಟನಾ ಮೆರವಣಿಗೆ ನಂತರ ತಾಲೂಕು ಕಚೇರಿಯಲ್ಲಿ ಸಮಾ ವೇಶಗೊಂಡ ವಿದ್ಯಾರ್ಥಿಗಳು ಸರ್ಕಾರದ ಯೋಜನೆಯನ್ನು ಖಂಡಿಸಿ ತಮ್ಮ ಹಕ್ಕೊತ್ತಾಯ ಪ್ರಕಟಿಸಿ ಮನವಿ ಸಲ್ಲಿಸಿದರು.

ವಿದ್ಯಾರ್ಥಿ ಮುಖಂಡ ಪ್ರಮೋದ್‌ ಮಾತನಾಡಿ, ಯೋಜನೆ ಜನ ವಿರೋಧಿಯಾಗಿದೆ. ಈಗಾಗಲೇ ಶರಾವತಿ ನದಿಗೆ ಸಾಕಷ್ಟು ಅಣೆಕಟ್ಟು ಕಟ್ಟಿ ಅದರ ಅಸ್ತಿತ್ವಕ್ಕೆ ಧಕ್ಕೆ ತರಲಾಗಿದೆ. ಇದರ ಪರಿಣಾಮ ನದಿ ನಂಬಿ ಬದುಕಿದ್ದ ಸಾವಿರಾರು ಕುಟುಂಬ ಮನೆ ಮಠ ಕಳೆದುಕೊಂಡು ಬೀದಿ ಪಾಲಾಗಿದೆ. ಮತ್ತೆ ಯೋಜನೆಗೆ ಅವಕಾಶ ಬೇಡ. ನಮ್ಮನ್ನು ಕೆಣಕಬೇಡಿ. ನಮ್ಮ ರಕ್ತವನ್ನು ಒತ್ತೆ ಇಡುತ್ತೇವೆ. ಆದರೆ ತಾಯಿ ಶರಾವತಿ ನದಿ ನೀರು ಕೊಡೋಲ್ಲ ಎಂದು ಎಚ್ಚರಿಸಿದರು.

ತಾಪಂ ಅಧ್ಯಕ್ಷ ವಾಸಪ್ಪ ಗೌಡ ಮಾತನಾಡಿ, ಸರ್ಕಾರದ ಪ್ರಸ್ತಾವಿತ ಶರಾವತಿ ಯೋಜನೆಯಿಂದ ಮಲೆನಾಡಿಗರ ಮುಗ್ದ ಮನಸ್ಸು ನೊಂದಿದೆ ಎಂಬುದಕ್ಕೆ ಇಲ್ಲಿನ ವಿದ್ಯಾರ್ಥಿಗಳ ಆಕ್ರೋಶಭರಿತ ಮಾತುಗಳೇ ಸಾಕ್ಷಿಯಾಗಿವೆ. ಕಾರ್ಯಸಾಧುವಲ್ಲದ ಯೋಜನೆಯನ್ನು ಸರ್ಕಾರ ಕೈ ಬಿಡಲೇಬೇಕು ಎಂದು ಒತ್ತಾಯಿಸಿದರು. ಚಲನಚಿತ್ರ ನಟ ಏಸು ಪ್ರಕಾಶ್‌, ಹೋರಾಟಗಾರರಾದ ಮಂಜುನಾಥ ಬ್ಯಾಣದ್‌, ಅಭಿಲಾಷ್‌, ಬಿ.ಎಸ್‌. ಸುರೇಶ್‌ ಮತ್ತಿತರರು ಮಾತನಾಡಿದರು. ಗುರೂಜಿ ಸಂಸ್ಥೆ ಅಧ್ಯಕ್ಷ ಸುದೇಶ ಕಾಮತ್‌, ಪ್ರಾಂಶುಪಾಲ ರಾಘವೇಂದ್ರ ಭಟ್, ಕಾರ್ಯದರ್ಶಿ ಸಂಕೂರು ಶಾಂತಮೂರ್ತಿ, ನಾಗೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.