ಶರಾವತಿ ನದಿಗೆ ಧಕ್ಕೆಯಾದರೆ ಹೋರಾಟ: ಚನ್ನಬಸವ ಸ್ವಾಮೀಜಿ

ಸರ್ಕಾರದ ಯೋಜನೆ ಅವೈಜ್ಞಾನಿಕ

Team Udayavani, Jun 28, 2019, 4:05 PM IST

28-June-29

ಹೊಸನಗರ: ಶರಾವತಿ ನದಿಗಾಗಿ ನಾವು ಹೋರಾಟ ಕುರಿತು ಪೂರ್ವಭಾವಿ ಸಭೆ ನಡೆಯಿತು.

ಹೊಸನಗರ: ಶರಾವತಿ ನಮ್ಮ ತಾಲೂಕಿನ ಜೀವನದಿ. ಮಲೆನಾಡ ಪರಿಸರ ಹುಟ್ಟಿ ಬೆಳೆದ ಈ ನದಿ ಮಲೆನಾಡಿಗರ ಸಾಕ್ಷಿಪ್ರಜ್ಞೆಯಾಗಿದೆ. ಶರಾವತಿ ನದಿಯಲ್ಲಿ ನಮ್ಮವರು ಬದುಕು ಕಟ್ಟಿಕೊಂಡಿದ್ದಾರೆ. ನದಿ ಆಸರೆಯಲ್ಲಿ ನಾವಿದ್ದೇವೆ. ಬದುಕಿಗೆ ಆಸರೆಯಾಗಿರುವ ನಮ್ಮ ಶರಾವತಿ ನದಿ ಅಸ್ತಿತ್ವಕ್ಕೆ ಧಕ್ಕೆ ಆದಲ್ಲಿ ಹೋರಾಟವೇ ಉತ್ತರವಾಗಬೇಕಿದೆ. ಈ ವಿಚಾರದಲ್ಲಿ ಮಲೆನಾಡಿಗರಾದ ನಾವು ಕೈ ಕಟ್ಟಿ ಕೂರುವ ಪ್ರಶ್ನೆಯೇ ಉದ್ಭವಿಸದು ಎಂದು ಮೂಲೆಗದ್ದೆ ಸದಾನಂದ ಶಿವಯೋಗಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು.

ಪಟ್ಟಣದ ಸುದ್ದಿಮನೆಯಲ್ಲಿ ನಡೆದ ‘ಶರಾವತಿ ನದಿಗಾಗಿ ನಾವು.. ಶರಾವತಿ ನದಿ ನೀರು ಉಳಿಸಿ’ ಹೋರಾಟ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರ ಪ್ರಸ್ತಾಪಿಸಿದ ಈ ಯೋಜನೆ ತೀರಾ ಅವೈಜ್ಞಾನಿಕವಾಗಿದೆ. ಇದು ಯಾವ ಕಾರಣಕ್ಕೂ ಕಾರ್ಯಸಾಧುವಲ್ಲ. ಯೋಜನೆ ಜಾರಿಯಿಂದ ಮಲೆನಾಡ ಜನರಲ್ಲಿ ಆತಂಕ ಉಂಟಾಗಿದೆ. ಮಲೆನಾಡಲ್ಲಿ ಶಾಂತಿ ಕದಡುವ ಪ್ರಯತ್ನದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.

ಪರಿಸರ ಕಾರ್ಯಕರ್ತ ಚಕ್ರವಾಕ ಸುಬ್ರಹ್ಮಣ್ಯ ಮಾತನಾಡಿ, ಲಿಂಗನಮಕ್ಕಿಯಿಂದ ಬೆಂಗಳೂರಿಗೆ ಶರಾವತಿ ನೀರನ್ನು ಕೊಂಡೊಯ್ಯುವ ಸರ್ಕಾರದ ಪ್ರಸ್ತಾವಿತ ಯೋಜನೆ ತೀರಾ ಮೂರ್ಖತನದ್ದಾಗಿದೆ. ಮಾತ್ರವಲ್ಲ ಸಾರ್ವಜನಿಕವಾಗಿಯೂ ಇದು ನಗೆಪಾಟಲಿಗೆ ಗುರಿಯಾಗಿದೆ ಎಂದರು.

ಲಿಂಗನಮಕ್ಕಿಯಿಂದ ಬೆಂಗಳೂರು ಸುಮಾರು 4 ಸಾವಿರ ಮೀಟರ್‌ ಎತ್ತರ ಇದ್ದು ಸುಮಾರು 400ಕ್ಕೂ ಹೆಚ್ಚು ಕಿಮೀ ದೂರ ಇದೆ. ಇಷ್ಟು ಅಂತರದಲ್ಲಿ ನದಿ ನೀರನ್ನು ಕೊಂಡ್ಯೊಯಲು ಸಾಧ್ಯವೇ ಇಲ್ಲವಾಗಿದೆ ಎಂದರು. ಸಾಮಾಜಿಕ ಕಾರ್ಯಕರ್ತ ಹನಿಯ ರವಿ ಮಾತನಾಡಿ, ಶರಾವತಿ ನದಿ ನೀರಿಗಾಗಿ ನಡೆಯುತ್ತಿರುವ ಈ ಹೋರಾಟ ಕೇವಲ ಹೋರಾಟವಾಗಿ ಉಳಿಯದೆ ನಿರಂತರವಾಗಿ ಶರಾವತಿ ಸಂರಕ್ಷಣೆಗೆ ಕಟಿಬದ್ಧವಾಗಿ ನಡೆಯುವ ಸಾಂಘಿಕ ಹೋರಾಟದ ಶಕ್ತಿ ಪ್ರದರ್ಶನಕ್ಕೆ ನಾಂದಿ ಹಾಡಬೇಕಿದೆ. ಇದರಿಂದ ಸ್ಥಳೀಯ ಸಮಸ್ಯೆಗಳ ನಿವಾರಣೆ ಜಾಗೃತಿ ಮೂಡಿಸಲಿ ಎಂದು ಹಾರೈಸಿದರು.

ಜಿಪಂ ಸದಸ್ಯ ಕಲಗೋಡು ರತ್ನಾಕರ್‌ ಮಾತನಾಡಿ, ಈ ಹಿಂದೆ ಜಿಲ್ಲೆಯ ಗ್ರಾಮಗಳ ಕುಡಿಯುವ ನೀರು ಸರಬರಾಜಿಗಾಗಿ ಬಹುಗ್ರಾಮ ಯೋಜನೆ ಕಾರ್ಯರೂಪಕ್ಕೆ ಪ್ರಸ್ತಾವನೆ ಕಳಿಸಿತ್ತು. ಆದರೆ ಈ ಯೋಜನೆ ಇನ್ನೂ ಜಾರಿಗೆ ಬಂದಿಲ್ಲ. ಈಗ ಸರ್ಕಾರ ಬೆಂಗಳೂರಿಗೆ ಶರಾವತಿ ನದಿ ನೀರು ಹರಿಸಲು ಯೋಜನೆ ರೂಪಿಸಲು ಹೊರಟಿದ್ದು ಮಲೆನಾಡ ಜನತೆ ಶಾಪವೇ ಸರಿ ಎಂದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಎಂ.ವಿ. ಜಯರಾಮ್‌ ಮಾತನಾಡಿ, ಶರಾವತಿ ನದಿ ನೀರು ವಿಚಾರದಲ್ಲಿ ಸಂಘಟನಾತ್ಮಕ ಹೋರಾಟ ಅಗತ್ಯವಾಗಿದೆ. ಒಗ್ಗಟ್ಟಿನ ಪ್ರದರ್ಶನವಾಗಿ ಮಲೆನಾಡ ಜನತೆಗೆ ನೆಮ್ಮದಿ ತರುವ ಪ್ರಯತ್ನವಾಗಬೇಕಿದೆ ಎಂದು ಆಶಿಸಿದರು. ಬಿಜೆಪಿ ಮುಖಂಡ ಎನ್‌.ಆರ್‌. ದೇವಾನಂದ್‌ ಮಾತನಾಡಿ, ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವ ಮುನ್ನ ಸಾಗರ, ಹೊಸನಗರ ತಾಲೂಕುಗಳ ಗ್ರಾಮಗಳ ಕುಡಿಯುವ ನೀರು ಸಂಬಂಧಿತ ಯೋಜನೆ ಜಾರಿ ಆಗಬೇಕಿದೆ. ಇಲ್ಲಿ ಕುಡಿಯಲು ನೀರಿಲ್ಲವಾಗಿರುವಾಗ ದೂರದ ಬೆಂಗಳೂರಿಗೆ ನೀರು ಹರಿಸುವ ಯೊಜನೆ ಯಾವತ್ತಿಗೂ ಸಲ್ಲ ಎಂದರು.

ಸಭೆಯಲ್ಲಿ ನೂರಾಕ್ಕೂ ಹೆಚ್ಚು ಮಂದಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ನಮ್ಮ ಶರಾವತಿ ನದಿ ನೀರು ಬೆಂಗಳೂರಿಗೆ ಹೋಗಲು ಸಾಧ್ಯವೇ ಇಲ್ಲ. ಜೀವದ ಹಂಗು ತೊರೆದು ಹೋರಾಟ ನಡೆಸಬೇಕಾಗಿದೆ. ತಾಲೂಕಿನ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲೂ ಹೋರಾಟ ಕಾವು ಪಡೆಯಬೇಕಾಗಿದೆ. ಸಹಿ ಸಂಗ್ರಹ ನಡೆಸಿ ಮುಖ್ಯಮಂತ್ರಿಗಳಿಗೆ ಕಳುಹಿಸಬೇಕಾಗಿದೆ ಎಂಬಿತ್ಯಾದಿ ಅಭಿಪ್ರಾಯಗಳು ವ್ಯಕ್ತವಾದವು.

10ರ ಬಂದ್‌ಗೆ ಬೆಂಬಲ: ಶರಾವತಿ ನದಿ ನೀರು ಹರಿಸುವ ಸರ್ಕಾರದ ಯೋಜನೆ ಖಂಡಿಸಿ ನಡೆಸಲುದ್ದೇಶಿಸಿರುವ ಶಿವಮೊಗ್ಗ ಬಂದ್‌ಗೆ ಹೊಸನಗರ ಜನತೆ ಬೆಂಬಲಿಸುತ್ತದೆ. ಹೊಸನಗರದಿಂದ ಸಾವಿರಾರು ಜನರು ಬಂದ್‌ನಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲಾಗುತ್ತದೆ ಎಂದು ಘೋಷಿಸಿದರು.

ಸಭೆಯಲ್ಲಿ ಚಲನಚಿತ್ರ ನಟ ಏಸು ಪ್ರಕಾಶ್‌, ಸಾರಾ ಸಂಸ್ಥೆಯ ಅರುಣಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಜಿ. ನಾಗರಾಜ್‌, ಕಸಾಪ ಅಧ್ಯಕ್ಷ ಇಲಿಯಾಸ್‌, ಕಾರ್ಯದರ್ಶಿ ಹ.ರು. ಗಂಗಾಧರಯ್ಯ, ಜೆಸಿಐನ ಬಿ.ಎಸ್‌. ಸುರೇಶ್‌, ಅರೆಮನೆ ವಿನಾಯಕ, ಹೊಸನಗರ ಹಿತರಕ್ಷಣಾ ವೇದಿಕೆಯ ಅಭಿಲಾಷ್‌, ಅನ್ಸರ್‌, ಜಬಗೋಡು ಹಾಲಪ್ಪ, ಪಪಂ ಸದಸ್ಯ ಸುರೇಂದ್ರ ಕೋಟ್ಯಾನ್‌, ಸಿಂಥಿಯಾ ಸೆರೆವೂ, ಶಾಂತಮೂರ್ತಿ ಸಂಕೂರು ಮತ್ತಿತರರು ಇದ್ದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.