ಸಂತ್ರಸ್ತರಿಗೆ ಮನೆಯೂ ಇಲ್ಲ.. ಹಕ್ಕು ಪತ್ರವೂ ಇಲ್ಲ …

ಭೀಕರ ಮಳೆಹಾನಿಗೆ ತುತ್ತಾಗಿದ್ದ ನಾಲ್ಕು ಕುಟುಂಬಗಳು ದಿಕ್ಕು ಕಾಣದಂತಾದ ಕೊರಗ ಸಮುದಾಯ

Team Udayavani, Dec 7, 2019, 12:57 PM IST

7-December-13

ಕುಮುದಾ ನಗರ
ಹೊಸನಗರ:
ಈ ಹಿಂದೆ ಸುರಿದ ಮಹಾಮಳೆಗೆ ಸಂತ್ರಸ್ತಗೊಂಡ ನಾಲ್ಕು ಕುಟುಂಬಗಳಿಗೆ ಹಕ್ಕುಪತ್ರವೂ ಸಿಕ್ಕಿಲ್ಲ.. ವಾಸಿಸಲು ಮನೆಯೂ ಇಲ್ಲ ಎಂಬಂತಾಗಿದೆ. ನಾಲ್ಕು ದಶಕದಿಂದ ವಾಸಿಸುತ್ತಿರುವ ಕೊರಗ ಸಮುದಾಯದ ಕುಟುಂಬಗಳು ಅತಂತ್ರದಲ್ಲೇ ಜೀವನ ಸಾಗಿಸಿಕೊಂಡು ಬರುತ್ತಿದ್ದರೂ ನಮ್ಮ ಗೋಳು ಕೇಳ್ಳೋರು ಯಾರೂ ಇಲ್ಲ ಎಂಬುದು ಅವರ ಅಳಲು.

ಹೌದು, ಇದು ಹೊಸನಗರ ತಾಲೂಕಿನ ನಗರದ ಚಿಕ್ಕಪೇಟೆಯ ಹೆದ್ದಾರಿ ಪಕ್ಕದಲ್ಲಿ ವಾಸವಾಗಿರುವ ಕೊರಗ ಸಮುದಾಯದ ನಾಲ್ಕು ಕುಟುಂಬಗಳ ಅಳಲು. ನಮಗೆ ವಾಸಿಸಲು ಸೂಕ್ತ ಮನೆ ಕಟ್ಟಿಸಿಕೊಡಿ ಎಂದು ಗೋಗರೆಯುತ್ತಿದ್ದರೂ ಇದುವರೆಗೂ ಸಿಕ್ಕಿಲ್ಲ ನ್ಯಾಯ. ನಾವು ಮನುಷ್ಯರು ಅಲ್ವಾ.. ನಮಗೆ ಬದುಕುವ ಹಕ್ಕಿಲ್ಲವೇ ಎಂದು ಪ್ರಶ್ನಿಸುತ್ತಿವೆ ಆ ಕುಟುಂಬಗಳು.

ಹೆದ್ದಾರಿ ಪಕ್ಕದಲ್ಲಿ ನಾಲ್ಕು ಕುಟುಂಬಗಳು: ರಾಣೇಬೆನ್ನೂರು- ಬೈಂದೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಾಲ್ಕು ಕೊರಗ ಸಮುದಾಯದ ಕುಟುಂಬಗಳು ಕಳೆದ ನಾಲ್ಕು ದಶಕದಿಂದ ವಾಸವಾಗಿವೆ. ಆದರೆ ವಾಸದ ಮನೆಯ ಹಕ್ಕುಪತ್ರ ಮಾತ್ರ ಸಿಕ್ಕಿಲ್ಲ. ಹಾಗಾಗಿ ಬದುಕಿಗೆ ಬ್ಯಾಂಕಿನ ವ್ಯವಹಾರದ ಲಾಭ ಪಡೆಯಲು ಈ ಕುಟುಂಬಗಳಿಗೆ ಸಾಧ್ಯವಿಲ್ಲ. ಮೂಡುಗೊಪ್ಪ ಗ್ರಾಪಂ ವ್ಯಾಪ್ತಿಯ ಸನಂ 63 ರಲ್ಲಿ ವಾಸಿಸುತ್ತಿದ್ದು ಮನೆಯ ಹಕ್ಕುಪತ್ರ ನೀಡಲು ಅರಣ್ಯ ಹಕ್ಕು ಕಾಯ್ದೆಯ ಸಮಸ್ಯೆ ಇದೆ. ಆದಷ್ಟು ಬೇಗ ಬಗೆಹರಿಸುತ್ತೇವೆ ಎಂಬ ಭರವಸೆ ಮಾತ್ರ ನಿರಂತರವಾಗಿ ಬರುತ್ತಿವೆ.
ಆದರೆ. ಈ ಕುಟುಂಬಗಳು ವಾಸಿಸುವ ಪಕ್ಕದಲ್ಲೇ ಇರುವ ಮದ್ಯದಂಗಡಿ ಆರಂಭವಾಗಿದ್ದ ಕಟ್ಟಡಕ್ಕೆ 2003ರಲ್ಲೇ ಹಕ್ಕುಪತ್ರ ನೀಡಲಾಗಿದೆ. ಇದು ಹೇಗೆ ಸ್ವಾಮಿ ಎಂಬುದು ಆ ಕುಟುಂಬಗಳ ಪ್ರಶ್ನೆ.

ಮಳೆಗೆ ಬಿತ್ತು ಮನೆ: ಈ ಬಾರಿ ಸುರಿದ ಭಾರೀ ಮಳೆಗೆ ಇಲ್ಲಿ ವಾಸಿಸುತ್ತಿದ್ದ ನಾಲ್ಕು ಕುಟುಂಬಗಳು ಸಂತ್ರಸ್ತರಾಗಿ ನಿರಾಶ್ರಿತ ಕೇಂದ್ರದ ಆಸರೆ ಪಡೆದುಕೊಂಡಿದ್ದವು. ಸುನೀತಾ ಬಂಗಾರಿ ಎಂಬುವವರ ಮನೆ ಮೇಲೆ ಮರ ಬಿದ್ದು ಸಂಪೂರ್ಣ ಧ್ವಂಸವಾಗಿತ್ತು. ಗೀತಾ ಉದಯ, ಸರೋಜ ಸುರೇಶ್‌ ಮತ್ತು ಸುಬ್ರಹ್ಮಣ್ಯರಿಗೆ ಸೇರಿದ ಮನೆಗಳು ಅಪಾಯಕ್ಕೆ ಸಿಲುಕಿದ ಕಾರಣ ನಾಲ್ಕು ಕುಟುಂಬಗಳನ್ನು ಬಂಡಿಮಠದಲ್ಲಿರುವ ಸರ್ಕಾರಿ ಕ್ವಾರ್ಟರ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಅಲ್ಲದೆ ಕೂಡ ಮನೆ ಕಟ್ಟಿಸಿಕೊಡುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದರು. ಆದರೆ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದ ಸುನೀತಾ ಬಂಗಾರಿ ಹೊರತು ಪಡಿಸಿ ಉಳಿದವರನ್ನು ಅಲ್ಲಿಂದ ವಾಪಸ್‌ ಕಳುಹಿಸಲಾಗಿದೆ ಎಂದು ಆ ಕುಟುಂಬಗಳು ಅಳಲು ತೋಡಿಕೊಂಡಿವೆ.

ಅಪಾಯಕ್ಕೆ ಅಹ್ವಾನ: ಭೀಕರ ಮಳೆಗೆ ಮರದ ಜೊತೆಗೆ ಧರೆಯು ಕುಸಿದು ಕೂದಲೆಳೆ ಅಂತರದಲ್ಲಿ ಈ ಕುಟುಂಬಗಳು ಪ್ರಾಣಾಪಾಯದಿಂದ ಬಚಾವಾಗಿದ್ದವು. ಈಗ ಮಳೆ ನಿಂತಿದೆ. ಮತ್ತೆ ಅದೇ ಮನೆಗಳಲ್ಲಿ ವಾಸಿಸುವುದು ಅನಿವಾರ್ಯವಾಗಿದೆ. ಬಿರುಕು ಬಿಟ್ಟ ಗೋಡೆ, ಶಿಥಿಲಗೊಂಡಿರುವ ಮೇಲುಹೊದಿಕೆಯಿಂದಾಗಿ ದಿನರಾತ್ರಿ ಆತಂಕದಲ್ಲೇ ಬದುಕುವಂತಾಗಿದೆ. ಮನೆಗಾಗಿ ಮೂಡುಗೊಪ್ಪ ಗ್ರಾಪಂ, ನಾಡಕಚೇರಿ, ತಾಲೂಕು ಕಚೇರಿ ಅಲೆದು
ಅಲೆದು ಸುಸ್ತಾಗಿದೆ ಎಂದು ಸರೋಜ ಸುರೇಶ್‌ ಆಕ್ರೋಶ ವ್ಯಕ್ತಪಡಿಸುತ್ತಾರೆ.

ನಮಗೂ ಮನೆಗಾಗಿ ಬೇಡಿಕೆ ಇಟ್ಟು ಸಾಕುಸಾಕಾಗಿದೆ. ನಾವು ಕೂಡ ಮನುಷ್ಯರು ನಮಗೂ ಬದುಕಲು ಅವಕಾಶ ಕೊಡಿ. ಇಲ್ಲವಾದರೆ ಗ್ರಾಪಂ ಮುಂಭಾಗದಲ್ಲೇ ಟೆಂಟು ಹಾಕಿ ಕೂರುತ್ತೇವೆ. ಅಲ್ಲೆ ಅಡುಗೆ ಮಾಡಿ ಉಣ್ಣುತ್ತೇವೆ. ಜಿಲ್ಲಾಧಿಕಾರಿಗಳು ನಮ್ಮ ಕಡೆ ನೋಡಲಿ.
ಗೀತಾ ಉದಯ, ಸಂತ್ರಸ್ತರು

ಅಧಿಕಾರಿಗಳು ಬರುತ್ತಾರೆ. ಫೋಟೋ ತೆಗೆದುಕೊಂಡು ಹೋಗುತ್ತಾರೆ ಅಷ್ಟೆ. ಮನೆ ಬಗ್ಗೆ ಕೇಳಿದರೆ ಯಾವುದೇ ಉತ್ತರ ಕೊಡಲ್ಲ. ಹೀಗಾದ್ರೆ ಹೇಗೆ ಸ್ವಾಮಿ. ರಾತ್ರಿ ವೇಳೆ ಭಯದಲ್ಲಿ ಬದುಕುತ್ತಿದ್ದು ಕೂಡಲೇ ನಮಗೆ ಸ್ಪಂದಿಸಲಿ.
ಸುರೇಶ್‌ ಚಿಕ್ಕಪೇಟೆ, ಸಂತ್ರಸ್ತರು

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.