ನರೇಗಾ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ
Team Udayavani, Apr 19, 2019, 5:45 PM IST
ಹೊಸಪೇಟೆ: ತಾಲ್ಲೂಕಿನ ವಿವಿಧ ಗ್ರಾಮಗಳ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕೂಲಿ ಕಾರ್ಮಿಕರಿಗೆ ಲೋಕಸಭಾ ಚುನಾವಣೆ ಪ್ರಯುಕ್ತ ಗುರುವಾರ ಮತದಾನ ಜಾಗೃತಿ ಅಭಿಯಾನದ ಮೂಲಕ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ತಾಲ್ಲೂಕಿನ 22 ಗ್ರಾಪಂಗಳಲ್ಲಿ ತಾಲೂಕು ಸ್ವೀಪ್ ಅಧ್ಯಕ್ಷರು ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಮ್ಮಿಕೊಂಡಿದ್ದು ತಾಲ್ಲೂಕಿನ ಡಣನಾಯಕನಕೆರೆ ಗ್ರಾಪಂ ವ್ಯಾಪ್ತಿಯ ಕೆರೆಯಲ್ಲಿ ಹೂಳು ತೆಗೆಯುವ ಕಾಮಗಾರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೂಲಿಕಾರರಿಗೆ ಮತದಾನ ಜಾಗೃತಿ ಮತ್ತು ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.