- Wednesday 11 Dec 2019
ಬೇಡಿಕೆ ಈಡೇರಿಕೆಗೆ ಒತ್ತಾಯ
ಕೃಷಿ ಕೂಲಿ ಕಾರ್ಮಿಕರಿಂದ ತಾಪಂ ಎದುರು ಪ್ರತಿಭಟನೆ
Team Udayavani, Sep 30, 2019, 6:17 PM IST
ಹೊಸಪೇಟೆ: ತಾಲೂಕಿನ ಚಿಲಕನ ಹಟ್ಟಿ ಗ್ರಾಮದ ಗ್ರಾಮೀಣ ಖಾತ್ರಿಯ ಕೃಷಿ ಕೂಲಿ ಕಾರ್ಮಿಕ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಚಿಲಕನಹಟ್ಟಿ ಗ್ರಾಮದ ನಾಗರಿಕರ ಹೋರಾಟ ಸಮಿತಿ ಹಾಗೂ ಭಾರತ ಕಮ್ಯೂನಿಸ್ಟ್ ಪಕ್ಷ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಾಲೂಕು ಪಂಚಾಯ್ತಿ ಎದುರು ಪ್ರತಿಭಟನೆ ನಡೆಸಲಾಯಿತು.
ಎಪ್ರಿಲ್ ತಿಂಗಳಿನಲ್ಲಿ 32 ನರೇಗಾ ಕಾರ್ಮಿಕರ ಕೆಲಸಕ್ಕೆ ತೆರಳುವಾಗ ಅಪಘಾತಕ್ಕೆ ಒಳಗಾಗಿದ್ದರು. ಅದರಲ್ಲಿ ನಾಲ್ಕು ಜನ ಮೃತಪಟ್ಟಿದ್ದರು. ಇನ್ನುಳಿದ 15 ಜನರಿಗೆ ಗಂಭೀರ ಗಾಯ ಹಾಗೂ 13 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಗಂಭೀರವಾಗಿ ಗಾಯಗೊಂಡವರು ಇಲ್ಲಿವರೆಗೂ ಚೇತರಿಸಿಕೊಳ್ಳುತ್ತಿಲ್ಲ. ಹಾಗಾಗಿ ಅವರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿದರು.
ಸಾರಿಗೆ ಇಲಾಖೆಯಿಂದ ಮೃತ ಕುಟುಂಬಗಳಿಗೆ ತಲಾ 15 ಸಾವಿರ ರೂ. ಹಾಗೂ ಗಾಯಾಳುಗಳಿಗೆ 5 ಸಾವಿರ ನೀಡಿದೆ. ಅಲ್ಲದೇ, ಜಿಲ್ಲಾ ಪಂಚಾಯಿತಿ ಮೃತ ಕುಟುಂಬಕ್ಕೆ ತಲಾ 75 ಸಾವಿರ ರೂ. ನೀಡಲಾಗಿದೆ. ಆದರೆ, ಗಂಭೀರವಾಗಿ ಗಾಯಗೊಂಡವರು ಚಿಕಿತ್ಸೆಗಾಗಿ ಲಕ್ಷಾಂತರ ರೂ. ವೆಚ್ಚ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೃತ ಕುಟುಂಬಕ್ಕೆ ತಲಾ 10 ಲಕ್ಷ ರೂ. ನೀಡಬೇಕು. ಗಾಯಗೊಂಡವರಿಗೆ 5 ಲಕ್ಷ ರೂ. ನೀಡಬೇಕು. ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ಹಾಗೂ ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಹಾರ ಒದಗಿಸಬೇಕು. ರಾಷ್ಟ್ರೀಯ ಭದ್ರತಾ ನಿಧಿ ಮೃತ ಕುಟುಂಬಗಳಿಗೆ ನೆರವಿಗೆ ಬರಬೇಕು. ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಭರಿಸಬೇಕು ಎಂದು ಆಗ್ರಹಿಸಿದರು.
ಬಳಿಕ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀಕುಮಾರ ಆರ್.ಕೆ. ಅವರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ಮರಡಿ ಜಂಬಯ್ಯನಾಯಕ, ಆರ್.ಎಸ್.ಬಸವರಾಜ, ಆರ್. ಭಾಸ್ಕರರೆಡ್ಡಿ, ಕೆ. ನಾಗರತ್ನಮ್ಮ, ಎಂ.ಗೋಪಾಲ, ಸಂದೀಪ್, ಮೌನೇಶ್, ರತ್ನಮ್ಮ ಇನ್ನಿತರರಿದ್ದರು.
ಈ ವಿಭಾಗದಿಂದ ಇನ್ನಷ್ಟು
-
ಧಾರವಾಡ: ಮೂರು ವರ್ಷಗಳ ಹಿಂದೆ ತೀವ್ರ ಸ್ವರೂಪ ಪಡೆದುಕೊಂಡು ಪೊಲೀಸರ ಕಠಿನ ಕ್ರಮದಿಂದ ಕ್ಷೀಣಿಸಿದ್ದ ಹೆಣ್ಣು ಮಕ್ಕಳ ಮಾರಾಟ ಜಾಲ ಉತ್ತರ ಕರ್ನಾಟಕದಲ್ಲಿ ಮತ್ತೆ...
-
ಉಡುಪಿ: ಪ್ರವಾಸಿ ತಾಣವಾಗಿ ಬೆಳೆಯುತ್ತಿರುವ ಉಡುಪಿ, ಶಿಕ್ಷಣ ಕಾಶಿ ಖ್ಯಾತಿಯ ಮಣಿಪಾಲ ಮತ್ತು ಕರಾವಳಿ ಕರ್ನಾಟಕದ ಪ್ರಮುಖ ಬಂದರು ಹೊಂದಿರುವ ಮಲ್ಪೆಗಳನ್ನು "ಸ್ಮಾರ್ಟ್...
-
ಮಹಾನಗರ: ರಾಜ್ಯದಲ್ಲೇ ಪ್ರಥಮವಾಗಿ ಮಂಗಳೂರಿನಲ್ಲಿ ಆಯೋಜನೆಗೊಂಡು ನಿರೀಕ್ಷೆಗೂ ಮೀರಿ ಜನ ಸ್ಪಂದನೆ ಪಡೆದಿದ್ದ ನದಿ ಉತ್ಸವವನ್ನು ಈ ಬಾರಿಯೂ ನಡೆಸುವ ಉತ್ಸುಕತೆಗೆ...
-
ಉಡುಪಿ: ಜಿಲ್ಲೆಯಲ್ಲಿ ಗಾಂಜಾ ಹಾವಳಿ ದಿನೇದಿನೇ ಹೆಚ್ಚಳವಾಗುತ್ತಿದೆ. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ಉಡುಪಿ ಜಿಲ್ಲೆಗೆ...
-
19ನೇ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ...
ಹೊಸ ಸೇರ್ಪಡೆ
-
ಸದ್ಯ ನಟ ಗೋಲ್ಡನ್ ಸ್ಟಾರ್ ಗಣೇಶ್ "ಗಾಳಿಪಟ-2' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ಗಣೇಶ್ ಅಭಿನಯಿಸಲಿರುವ ಮುಂಬರುವ ಚಿತ್ರದ ಕುರಿತಾದ...
-
ನಟ ಶ್ರೀಮುರುಳಿ ಅಭಿನಯದ "ಮದಗಜ' ಚಿತ್ರ ಆರಂಭದಿಂದಲೂ ನಾನಾ ವಿಚಾರಗಳಿಗೆ ಸುದ್ದಿಯಾಗುತ್ತಲೇ ಇದೆ. ಮುಖ್ಯವಾಗಿ ಚಿತ್ರದ ನಾಯಕಿಯರ ಕುರಿತಾಗಿ ಸುದ್ದಿಯಾಗಿದ್ದೇ...
-
ಇಲ್ಲಿಯವರೆಗೆ ತನ್ನ ಹಾಟ್ ಆ್ಯಂಡ್ ಬೋಲ್ಡ್ ಪಾತ್ರಗಳ ಮೂಲಕ ಸಿನಿಪ್ರಿಯರ ಗಮನ ಸೆಳೆದಿದ್ದ "ಗಂಡ ಹೆಂಡತಿ' ಖ್ಯಾತಿಯ ನಟಿ ಸಂಜನಾ ಗಲ್ರಾನಿ ಈಗ ರೆಟ್ರೋ ಲುಕ್ನಲ್ಲಿ,...
-
ಕನ್ನಡದಲ್ಲಿ "ಗಣಪ' ಹಾಗು "ಕರಿಯ 2' ಸಿನಿಮಾಗಳ ನಂತರ ಸಂತೋಷ್ ಹೊಸದೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಇನ್ನೂ ಹೆಸರಿಡದ ಚಿತ್ರದ ಚಿತ್ರೀಕರಣ ಈಗಾಗಲೇ ಸದ್ದಿಲ್ಲದೆಯೇ...
-
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಜಯನಗರದ ಹಳೆಯ ಮನೆಯ ಜಾಗದಲ್ಲಿ ಹೊಸ ಮನೆ ತಲೆ ಎತ್ತಲಿದೆ! ಹೌದು, ಡಾ.ವಿಷ್ಣುವರ್ಧನ್ ಕುಟುಂಬ ಅವರ ಹಳೆಯ ಮನೆಯ ಜಾಗದಲ್ಲೇ ಹೊಸ...