ಪಾಲಿಕೆ ಚುನಾವಣೆಗೆ ವೇದಿಕೆ ಸಜ್ಜು

ಆಯೋಗ ದಿನಾಂಕ ಘೋಷಣೆ ಮಾಡೋದೊಂದೇ ಬಾಕಿ­, ಮೀಸಲು ಅಧಿ ಸೂಚನೆಗೆ ಆಕ್ಷೇಪ ಸಲ್ಲಿಕೆಗೆ ಅವಕಾಶ

Team Udayavani, Jun 10, 2021, 5:04 PM IST

98466

ಹುಬ್ಬಳ್ಳಿ: ಕಳೆದ ಎರಡೂವರೆ ವರ್ಷಗಳಿಂದ ಆಡಳಿತ ಮಂಡಳಿ ಇಲ್ಲದೆಯೇ ಸಾಗುತ್ತಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದೆ.

ವಾರ್ಡ್‌ ಪುನರ್‌ ವಿಂಗಡಣೆ ಆಕ್ಷೇಪಣೆ ನಂತರವೂ ವಾರ್ಡ್‌ಗಳ ಪುನರ್‌ ವಿಂಗಡಣೆ, ವಾರ್ಡ್‌ ಮೀಸಲಾತಿ ಅ ಸೂಚನೆಗಳು ಹೊರ ಬಿದ್ದಿದ್ದು, ಮೀಸಲಾತಿ ನಿಗದಿಗೆ ಕೆಲವರಿಂದ ಆಕ್ಷೇಪದ ಮಾತುಗಳು ಕೇಳಿ ಬರುತ್ತಿದ್ದು, ಇದು ಬಿಟ್ಟರೆ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಬೇಕಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್‌ ಪುನರ್‌ ವಿಂಗಡಣೆ ಹಲವರು ಕೋರ್ಟ್‌ ಮೊರೆ ಹೋಗಿದ್ದರು. ಕೋರ್ಟ್‌ ಸೂಚನೆಯಂತೆಯೇ ವಾರ್ಡ್‌ಗಳ ಪುನರ್‌ ವಿಂಗಡಣೆ ಕೈಗೊಳ್ಳಲಾಗಿದ್ದು, ಮುಂದುವರಿದ ಭಾಗವಾಗಿ ವಾರ್ಡ್‌ ಮೀಸಲಾತಿ ಘೋಷಣೆ ಮಾಡಿ ಸರಕಾರ ಆದೇಶ ಹೊರಡಿತ್ತು. ಇದಕ್ಕೆ ಆಕ್ಷೇಪಕ್ಕೆ ಅವಕಾಶದ ನಂತರದಲ್ಲಿ ಇದೀಗ ಯಾವುದೇ ಬದಲಾವಣೆ ಇಲ್ಲದೆಯೇ ಮೀಸಲು ಅ ಧಿಸೂಚನೆ ಹೊರಡಿಸಲಾಗಿದೆ.

82 ವಾರ್ಡ್‌: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ 67 ವಾರ್ಡ್‌ಗಳಿದ್ದು, ವಾರ್ಡ್‌ ಪುನರ್‌ ವಿಂಗಡಣೆ ನಂತರದಲ್ಲಿ ಇದೀಗ 82 ವಾರ್ಡ್‌ಗಳಾಗಿವೆ. ವಾರ್ಡ್‌ ಪುನರ್‌ ವಿಂಗಡಣೆಯ ಅಧಿ ಸೂಚನೆಯೂ ಹೊರ ಬಿದ್ದಿದೆ. ವಾರ್ಡ್‌ಗಳ ಮೀಸಲಾತಿ ಘೋಷಣೆಯನ್ನು ಸರಕಾರ ಮಾಡಿತ್ತಲ್ಲದೆ, ಇದಕ್ಕೆ ಆಕ್ಷೇಪ ಸಲ್ಲಿಸಲು ಏಳು ದಿನಗಳ ಅವಕಾಶ ನೀಡಲಾಗಿತ್ತು. ಕೋವಿಡ್‌ ಸಂಕಷ್ಟದಲ್ಲಿ ಮೀಸಲಾತಿ ಆಕ್ಷೇಪ ಕೇಳಿರುವುದು ಸರಿಯಲ್ಲ ಜತೆಗೆ ಏಳು ದಿನವೆಂದು ಅವಕಾಶ ನೀಡಿದ್ದರೂ, ಮೀಸಲು ಪಟ್ಟಿಯನ್ನು ಬಹಿರಂಗಕ್ಕೆ ವಿಳಂಬ ತೋರಲಾಗಿದ್ದು, ಆಕ್ಷೇಪಕ್ಕೆ ಇನ್ನಷ್ಟು ಕಾಲಾವಕಾಶ ನೀಡಬೇಕೆಂದು ಒತ್ತಾಯಿಸಿದ್ದರಾದರೂ ಅಂತಿಮವಾಗಿ ವಾರ್ಡ್‌ ಮೀಸಲಾತಿ ಅ ಧಿಸೂಚನೆ ಹೊರ ಬಿದ್ದಿದೆ.

ವಾರ್ಡ್‌ ಮೀಸಲಾತಿಯಲ್ಲಿ ಕೆಲವೊಂದು ಲೋಪಗಳು ಆಗಿವೆ ಎಂಬ ಆಕ್ಷೇಪ ಹಲವರದ್ದಾಗಿದೆ. ಮೀಸಲು ನಿಗದಿಯಲ್ಲಿ ಸರಕಾರ ತಾರತಮ್ಯ ತೋರಿದೆ. ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಮೀಸಲು ವಾರ್ಡ್‌ಗಳನ್ನು ಅಗತ್ಯಕ್ಕಿಂತ ಹೆಚ್ಚಿಗೆ ನೀಡಲಾಗಿದೆ. ಜತೆಗೆ ಒಂದು ಸಮುದಾಯಕ್ಕೆ ಅನ್ಯಾಯ ಮಾಡುವ ರೀತಿಯಲ್ಲಿ ಮೀಸಲು ನಿಗದಿ ಮಾಡಲಾಗಿದೆ ಎಂಬುದು ಕಾಂಗ್ರೆಸ್‌ ಆರೋಪವಾಗಿದ್ದು, ಈ ಬಗ್ಗೆ ಆಕ್ಷೇಪ ಸಲ್ಲಿಸುವುದಾಗಿ ಕಾಂಗ್ರೆಸ್‌ ಮುಖಂಡರ ಅನಿಸಿಕೆಯಾಗಿದೆ.

ಮೀಸಲು ಅಧಿ ಸೂಚನೆಗೆ ಆಕ್ಷೇಪ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಯಾರು ಆಕ್ಷೇಪ ಸಲ್ಲಿಸುತ್ತಾರೋ ನೋಡಬೇಕು. ಚುನಾವಣೆ ಸಿದ್ಧತೆ: ಮಹಾನಗರ ಪಾಲಿಕೆಯ ವಾರ್ಡ್‌ ಪುನರ್‌ ವಿಂಗಡಣೆ ಹಾಗೂ ವಾರ್ಡ್‌ ಮೀಸಲಾತಿ ಅಧಿಸೂಚನೆ ಹೊರ ಬಿದ್ದ ಹಿನ್ನೆಲೆಯಲ್ಲಿ ಮುಂದಿನ ಹಂತ ಚುನಾವಣೆ ದಿನಾಂಕ ಘೋಷಣೆಯಾಗಿದೆ.

ಚುನಾವಣೆ ಆಯೋಗ ಚುನಾವಣೆ ನಡೆಸುವ ಕುರಿತಾಗಿ ಜಿಲ್ಲಾ ಧಿಕಾರಿಗಳ ಅಭಿಪ್ರಾಯ ಕೇಳುತ್ತದೆ. ಚುನಾವಣೆ ನಡೆಸಲು ಬೇಕಾಗುವ ತಯಾರಿ ನಡೆಸಲಾಗಿದೆ ಎಂಬುದರ ಕುರಿತಾಗಿ ಚರ್ಚೆ ನಡೆಸಿ, ಜಿಲ್ಲಾಡಳಿತ ನೀಡುವ ಅನಿಸಿಕೆಯನ್ನು ಪರಿಶೀಲಿಸಿ, ಚುನಾವಣೆಗೆ ಜಿಲ್ಲಾಡಳಿತ ಸಿದ್ಧವಿದ್ದರೆ, ರಾಜ್ಯ ಸರಕಾರಕ್ಕೆ ವಿಷಯ ತಿಳಿಸಿ, ಚುನಾವಣೆ ನಡೆಸಲು ಅಭಿಪ್ರಾಯ ಪಡೆಯುತ್ತದೆ. ಸರಕಾರದಿಂದಲೂ ಒಪ್ಪಿಗೆ ದೊರೆತರೆ ಆಗ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡುತ್ತದೆ.

ಕೋವಿಡ್‌ ಸಂಕಷ್ಟ ಹಿನ್ನೆಲೆಯಲ್ಲಿ ಸರಕಾರ ಮುಂದಿನ ಆರು ತಿಂಗಳು ಯಾವುದೇ ಚುನಾವಣೆಗಳನ್ನು ನಡೆಸದಿರಲು ನಿರ್ಧರಿಸಿದ್ದರಿಂದ, ನಂತರದಲ್ಲಿ ಚುನಾವಣೆಗೆ ಸಮ್ಮತಿಸಬಹುದಾಗಿದೆ. ಒಂದು ವೇಳೆ ಮೀಸಲು ವಿಚಾರದಲ್ಲಿ ಯಾರಾದರೂ ಕೋರ್ಟ್‌ ಮೊರೆ ಹೋದರೆ ಅದಕ್ಕೆ ಕೋರ್ಟ್‌ ಸಮ್ಮತಿಸಿದರೆ ಚುನಾವಣೆ ದಿನಾಂಕ ಘೋಷಣೆ ಮತ್ತಷ್ಟು ವಿಳಂಬವಾಗಲಿದೆ. ಮೀಸಲು ಪಟ್ಟಿ ಆಕ್ಷೇಪಕ್ಕೆ ಅವಕಾಶವಿಲ್ಲದೆ ಚುನಾವಣೆ ನಡೆಸಲು ಕೋರ್ಟ್‌ ಸೂಚಿಸಿದರೆ, ಕೋವಿಡ್‌ ಸಂಕಷ್ಟ ನಿವಾರಣೆ ನಂತರದಲ್ಲಿ ಸರಕಾರ ಚುನಾವಣೆಗೆ ಸಮ್ಮತಿಸಿದಲ್ಲಿ, ದಿನಾಂಕ ಘೋಷಣೆಯಾಗಿ ಪಾಲಿಕೆ ಚುನಾವಣೆ ಕಾವು ಏರಲಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.