ಅಲ್ಲಾಪುರದ ನೆಮ್ಮದಿ ಕದಡುವ ಕೆರೆ


Team Udayavani, Aug 15, 2019, 12:48 PM IST

15-Agust-20

ಹೇಮರೆಡ್ಡಿ ಸೈದಾಪೂರ
ಹುಬ್ಬಳ್ಳಿ:
ಈ ಊರಿನ ಕುಡಿಯುವ ನೀರಿನ ಒದಗಿಸುವ ಕೆರೆಯೊಂದು ಇಡೀ ಗ್ರಾಮದ ಜನರ ನಿದ್ದೆಗೆಡಿಸಿದೆ. ದೊಡ್ಡ ಮಳೆಯಲ್ಲ, ಸಣ್ಣ ಮಳೆ ಬಿದ್ದರೆ ಸಾಕು ಜನರು ಇಡೀ ರಾತ್ರಿ ಜೀವ ಕೈಯಲ್ಲಿ ಹಿಡಿದು ಕಾಲ ಕಳೆಯುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಹೌದು. ಕುಂದಗೋಳ ತಾಲೂಕಿನ ಕೊನೆಯ ಗ್ರಾಮ ಅಲ್ಲಾಪುರ ಗ್ರಾಮದಲ್ಲಿ ಕೆರೆಗೆ ಕೋಡಿ ವ್ಯವಸ್ಥೆ ಕಲ್ಪಿಸದಿರುವುದರಿಂದ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಬಿಟ್ಟೂ ಬಿಡದೆ ಸುರಿದ ಮಳೆಯಿಂದ ಸುಮಾರು 6 ಎಕರೆ ವಿಸ್ತೀರ್ಣದ ಕೆರೆ ತುಂಬಿದೆ. ಇದು ಒಮ್ಮೆ ತುಂಬಿದರೆ ಮೂರು ವರ್ಷಗಳ ಕಾಲ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದು. ಮಲಪ್ರಭಾ ನೀರು ಸಕಾಲಕ್ಕೆ ಬಾರದ ಹಿನ್ನೆಲೆಯಲ್ಲಿ ಕುಡಿಯಲು ಹಾಗೂ ಬಳಕೆಗೆ ಈ ಕೆರೆ ಮೇಲೆ ಜನ ಅವಲಂಬಿತರಾಗಿದ್ದಾರೆ. ಇತ್ತೀಚೆಗೆ ಸುರಿದ ಮಳೆಯಿಂದ ಕೆರೆ ನೀರು ಗ್ರಾಮದೊಳಗೆ ನುಗ್ಗಿದ್ದು, ಗ್ರಾಮಸ್ಥರೊಬ್ಬರ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಮಳೆಗಾಲ ಮಧ್ಯೆಯೇ ಕೆರೆ ತುಂಬಿದ್ದು, ಇನ್ನೂ ಮಳೆಗಳಿದ್ದು ಇನ್ನಷ್ಟು ತುಂಬಿ ಒಡೆದರೆ ಮುಂದೇನು ಎಂಬ ಆತಂಕ ಜನರಲ್ಲಿ ಮೂಡಿದೆ.

ಕೋಡಿ ವ್ಯವಸ್ಥೆಯಿಲ್ಲ: ಕೆರೆ ತುಂಬಿದ ನಂತರ ಹರಿದು ಬರುವ ಹೆಚ್ಚುವರಿ ನೀರು ಹೋಗಲು ಕೆರೆಗೆ ವ್ಯವಸ್ಥೆಯಿಲ್ಲದಿರುವುದು ಗ್ರಾಮಸ್ಥರ ಆತಂಕ್ಕೆ ಕಾರಣವಾಗಿದೆ. ಪ್ರತಿ ಮಳೆಗಾಲಕ್ಕೂ ಮುಂಚೆ ಕೆರೆಗೆ ಕೋಡಿ ವ್ಯವಸ್ಥೆ ಕಲ್ಪಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕಳೆದ ಆರು ತಿಂಗಳ ಹಿಂದೆ ಗ್ರಾಮಸ್ಥರು ತಹಶೀಲ್ದಾರ್‌ ಮೂಲಕ ಜಿಲ್ಲಾಧಿಕಾರಿ ಮನವಿ ಮಾಡಿದ್ದರು. ಕೋಡಿ ವ್ಯವಸ್ಥೆ ಮಾಡಿಕೊಡಿ ಇಲ್ಲದಿದ್ದರೆ ಗ್ರಾಮಕ್ಕೆ ಸಂಚಕಾರ ತಪ್ಪಿದ್ದಲ್ಲ ಎಂದು ಕೋರಿದ್ದರು. ಆದರೂ ಪ್ರಯೋಜನವಾಗಿಲ್ಲ. ಇಂತಹ ಅವ್ಯವಸ್ಥೆಯಿಂದ ಬೆಚ್ಚಿಬಿದ್ದಿರುವ ಜನ ಎರಡ್ಮೂರು ದಿನಗಳಿಂದ ಮಳೆಯಿರದಿದ್ದರೂ ಮನೆ ಬಾಗಿಲಿಗೆ ಹಾಕಿರುವ ತಗಡಿನ ಶೀಟುಗಳನ್ನು ತೆಗೆದಿಲ್ಲ.

ಕ್ರಿಮಿನಾಶಕ ಕೆರೆ ಸೇರುವ ಆತಂಕ: ಕೊಂಚ ಮಳೆ ತಗ್ಗಿರುವುದರಿಂದ ಕೆರೆಯ ಜಲಾನಯನ ಪ್ರದೇಶದಲ್ಲಿರುವ ಬೆಳೆಗಳಿಗೆ ಇದೀಗ ಕಳೆನಾಶಕ ಸಿಂಪರಿಸುತ್ತಿದ್ದು, ಆಗಾಗ ಬೀಳುತ್ತಿರುವ ಮಳೆಗೆ ಸಿಂಪರಿಸಿರುವ ಕ್ರಿಮಿನಾಶಕ ಕೆರೆ ಸೇರುತ್ತಿದೆ. ಇದೇ ನೀರನ್ನು ಗ್ರಾಮದ ಜನರು ಕುಡಿಯಲು ಬಳಸುತ್ತಿದ್ದಾರೆ. ಇದರಿಂದ ಆರೋಗ್ಯ ಮೇಲೆ ಪರಿಣಾಮ ಬೀರಬಹುದು ಎನ್ನುವ ಆತಂಕವೂ ಗ್ರಾಮಸ್ಥರಲ್ಲಿದೆ.

ಇದ್ದರೂ ಇಲ್ಲದಂತಾಗಿದೆ: ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ, ಮಲಪ್ರಭಾ ನದಿಯಿಂದ ನೀರಿನ ಸೌಲಭ್ಯ ಇದ್ದರೂ ಇಲ್ಲದಂತಾಗಿದೆ. ಕಳೆದ ಒಂದು ವರ್ಷದಿಂದ ಮಲಪ್ರಭಾ ನೀರು ಬರುತ್ತಿಲ್ಲ. ಇರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 20 ದಿನಗಳಿಂದ ದುರಸ್ತಿಯಲ್ಲಿದೆ. ಹೀಗಾಗಿ ಕೆರೆಯ ರಾಡಿ ನೀರು ಗ್ರಾಮದ ಜನರಿಗೆ ಅನಿವಾರ್ಯವಾಗಿ ಬಿಟ್ಟಿದೆ. ರಾಡಿ ನೀರು ಕುಡಿಯುತ್ತಿರುವುದರಿಂದ ಜನರಲ್ಲಿ ಸಣ್ಣಪುಟ್ಟ ಕಾಯಿಲೆಗಳು ಶುರುವಾಗಿವೆ. ಕುಡಿಯುವ ನೀರಿನ ಕುರಿತು ಸಾಕಷ್ಟು ಬಾರಿ ಪಿಡಿಒ, ತಹಶೀಲ್ದಾರ್‌ ಕಚೇರಿಗೆ ಗ್ರಾಪಂ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ತಾಲೂಕಿನ ಕಡೆಯ ಗ್ರಾಮ ಎನ್ನುವ ತಾತ್ಸಾರ ಅಧಿಕಾರಿಗಳಲ್ಲಿ ಮೂಡಿದೆ. ಜನರ ಸಮಸ್ಯೆಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ಇತ್ತ ತಲೆಯೂ ಹಾಕಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.