ನೆರೆ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ನೆರವು

•ಸಂತ್ರಸ್ತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಉಳಿದ ಪಠ್ಯಪುಸ್ತಕ•ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲವೆಂದ ಇಲಾಖೆ

Team Udayavani, Aug 22, 2019, 12:31 PM IST

22-Agust-18

ಬಸವರಾಜ ಹೂಗಾರ
ಹುಬ್ಬಳ್ಳಿ:
ಪ್ರವಾಹ, ಮಳೆಯಿಂದ ಮನೆ ಸೋರಿಕೆ ಹಾಗೂ ಕುಸಿತದಿಂದ ಪುಸ್ತಕಗಳು ಹಾಳಾಗಿದ್ದು, ಪುಸ್ತಕ ಕಳೆದುಕೊಂಡ ವಿದ್ಯಾರ್ಥಿಗಳ ನೆರವಿಗೆ ಶಿಕ್ಷಣ ಇಲಾಖೆ ಧಾವಿಸಿದ್ದು, ವಿವಿಧೆಡೆ ಹೆಚ್ಚುವರಿಯಾಗಿ ಉಳಿದ ಪಠ್ಯಪುಸ್ತಕಗಳನ್ನು ನೆರೆ ಪೀಡಿತ ಪ್ರದೇಶಗಳಿಗೆ ಕಳುಹಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಪ್ರವಾಹ ಹಾಗೂ ಮಳೆಯಿಂದ ಮಕ್ಕಳ ಪಠ್ಯಪುಸ್ತಕ, ನೋಟ್ಬುಕ್‌, ಪ್ರೊಜೆಕ್ಟ್ ಮಾದರಿಗಳು ಹಾಗೂ ಲೇಖನಿ ಸಾಮಗ್ರಿಗಳು ಹಾಳಾದ ವಿಷಯವನ್ನರಿತ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ, ಪಠ್ಯಪುಸ್ತಕಗಳನ್ನು ಪೂರೈಸಲಾಗುವುದು ಎಂದು ಸ್ಪಷ್ಪಪಡಿಸಿದೆ. ಹೆಚ್ಚುವರಿ ಪುಸ್ತಕಗಳನ್ನು ಅವಶ್ಯವಿರುವ ನೆರೆಪೀಡಿತ ಪ್ರದೇಶಗಳಿಗೆ ರವಾನಿಸಲು ಕ್ರಮ ಕೈಗೊಂಡಿದೆ.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ವಿಭಾಗದಿಂದ ಹೆಚ್ಚುವರಿ ಪುಸ್ತಕಗಳು ಎಷ್ಟಿವೆ ಎಂಬುದನ್ನು ಮಾಹಿತಿ ಸಂಗ್ರಹಿಸಲಾಗಿದ್ದು, ಡಿಡಿಪಿಐ ಆದೇಶದಂತೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ಮಕ್ಕಳಿಗೆ ಈ ಪುಸ್ತಕ ನೀಡಲಾಗುತ್ತದೆ.

ಶಹರ ವಿಭಾಗ: ಹುಬ್ಬಳ್ಳಿ ಶಹರ ವಿಭಾಗದಲ್ಲಿ ಸುಮಾರು 16,935 ಪುಸ್ತಕಗಳು ಹೆಚ್ಚುವರಿಯಾಗಿ ಉಳಿದಿವೆ. ಶಹರ ವಿಭಾಗದ 12 ಕ್ಲಸ್ಟರ್‌ಗಳಲ್ಲಿ ವಿವಿಧ ಶಾಲೆಗಳಿಂದ ಸುಮಾರು 5,490 ವಿವಿಧ ಪುಸ್ತಕಗಳ ಬೇಡಿಕೆ ಇದೆ. ಬೇಡಿಕೆಯಷ್ಟು ಪುಸ್ತಕಗಳನ್ನು ಪೂರೈಸಿ, ಉಳಿದ ಪಠ್ಯಪುಸ್ತಕಗಳನ್ನು ನವಲಗುಂದ ತಾಲೂಕಿನ ಕೆಲ ನೆರೆಪೀಡಿತ ಗ್ರಾಮಗಳಿಗೆ ಕಳುಹಿಸಿಕೊಡಲಾಗುತ್ತದೆ. ಅಲ್ಲಿನ ಶಾಲಾವಾರು ಬೇಡಿಕೆಗೆ ಅನುಗುಣವಾಗಿ ಪುಸ್ತಕಗಳನ್ನು ಕಳುಹಿಸಲಾಗುತ್ತದೆ. ಅಲ್ಲಿಗೆ ಕಳುಹಿಸಿದ ನಂತರವೂ ಉಳಿದ ಪಠ್ಯಪುಸ್ತಕಗಳನ್ನು ಪ್ರವಾಹ ಪೀಡಿತ ಪಕ್ಕದ ಜಿಲ್ಲೆಗಳಿಗೆ ಕಳಹಿಸಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಗ್ರಾಮೀಣ ವಿಭಾಗ: ಹುಬ್ಬಳ್ಳಿ ಗ್ರಾಮೀಣ ತಾಲೂಕು ವಿಭಾಗದಲ್ಲಿ ಸುಮಾರು 11,500 ಕ್ಕೂ ಹೆಚ್ಚು ಪುಸ್ತಕಗಳು ಹೆಚ್ಚುವರಿಯಾಗಿ ಉಳಿದಿವೆ. ಅದರಲ್ಲಿ ಹೆಬಸೂರ ಶಾಲೆಗೆ ಸುಮಾರು 600 ಸೇರಿದಂತೆ ವಿವಿಧ ಗ್ರಾಮಗಳ ಶಾಲೆಗಳ ಬೇಡಿಕೆಗೆ ತಕ್ಕಂತೆ ಪುಸ್ತಕ ಕಳುಹಿಸಲಾಗುವುದು. ಹಂಚಿಕೆ ನಂತರವೂ ಉಳಿಯುವ ಪಠ್ಯಪುಸ್ತಕಗಳನ್ನು ಬೇರೆ ತಾಲೂಕು ಹಾಗೂ ಜಿಲ್ಲೆಗಳಿಗೆ ಕಳುಹಿಸಿಕೊಡಲಾಗುತ್ತದೆ.

ಶಹರ ವಿಭಾಗದಲ್ಲಿ ಶಿಕ್ಷಣ ಇಲಾಖೆಯಿಂದ ನಗರದ ಎಲ್ಲ ಶಾಲೆಗಳಿಗೆ ಹಂಚಿಕೆ ಮಾಡಲೆಂದೇ ಸಾವಿರಾರು ಪುಸ್ತಕಗಳು ಬಂದಿವೆ. ಈಗಾಗಲೇ ಶಹರ ಮಟ್ಟದ ಎಲ್ಲ ಶಾಲೆಗಳಿಗೆ ಪುಸ್ತಕ ವಿತರಿಸುವ ಕಾರ್ಯ ಮುಕ್ತಾಯಗೊಂಡಿದ್ದು, ಹೆಚ್ಚುವರಿಯಾಗಿ ಉಳಿದ ಪುಸ್ತಕಗಳನ್ನು ಬೇಡಿಕೆಯಂತೆ ಹಂಚಿಕೆ ಮಾಡಿ, ಉಳಿಯುವ ಪುಸ್ತಕಗಳನ್ನು ನವಲಗುಂದ ತಾಲೂಕು ಹಾಗೂ ನೆರೆ ಜಿಲ್ಲೆಗಳಿಗೆ ರವಾನಿಸಲಾಗುವುದು.
ದ್ಯಾಮಣ್ಣ ಈರಗಾರ,
ಶಹರ ವಿಭಾಗದ ಶಿಕ್ಷಣ ಸಂಯೋಜಕರು.

ಶಿಕ್ಷಣ ಇಲಾಖೆಯಿಂದ ಸೂಚನೆ ಬಂದಿದ್ದು, ಹೆಚ್ಚುವರಿ ಪುಸ್ತಕಗಳನ್ನು ಬೇಡಿಕೆ ಹೊರತು ಪಡಿಸಿ ಉಳಿಯುವ ಪುಸ್ತಕಗಳನ್ನು ನೆರೆ ಪೀಡಿತ ಪ್ರದೇಶಗಳಿಗೆ ರವಾನಿಸಲಾಗುವುದು. ಉಳಿಯುವ ಪುಸ್ತಕಗಳನ್ನು ನೆರೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶ‌ ಮಕ್ಕಳಿಗೆ ರವಾನಿಸಲಾಗುವುದು.
ಎಸ್‌.ಎನ್‌.ಬಶೆಟ್ಟಿಯವರ,
ಗ್ರಾಮೀಣ ಶಿಕ್ಷಣ ಸಂಯೋಜಕ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.