ಉಳ್ಳಾಗಡ್ಡಿ ತಂದ ಕಣ್ಣೀರು; ತರಕಾರಿ ಆಗುತ್ತಿದೆ ದುಬಾರಿ

ಬರ-ನೆರೆಯಿಂದ ಸುಗ್ಗಿ ಕಾಲದಲ್ಲೇ ಕೈ ಸುಡುತ್ತಿದೆ ಕಾಯಿಪಲ್ಲೆ ಒಂದೇ ವಾರದಲ್ಲಿ ದರ ದುಪ್ಪಟ್ಟು

Team Udayavani, Nov 27, 2019, 1:21 PM IST

27-November-13

ಬಸವರಾಜ ಹೂಗಾರ
ಹುಬ್ಬಳ್ಳಿ:
ನಿನ್ನೆ ಮೊನ್ನೆಯಷ್ಟೇ ತೀವ್ರ ಬೆಲೆ ಕುಸಿತದಿಂದ ರೈತರಿಗೆ ಕಣ್ಣೀರು ತರಿಸಿದ್ದ ಉಳ್ಳಾಗಡ್ಡಿ, ಇದೀಗ ಬೆಲೆ ಹೆಚ್ಚಳದಿಂದ ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. ಉಳ್ಳಾಗಡ್ಡಿ ಎಂದರೆ ಸಾಕು ಒಂದು ರೈತರಿಗೆ, ಇಲ್ಲವೇ ಗ್ರಾಹಕರಿಗೆ ಕಣ್ಣೀರು ತರಿಸದೇ ಇರದು. ಉಳ್ಳಾಗಡ್ಡಿಗೆ ಉತ್ತಮ ದರ ದೊರೆಯುತ್ತಿಲ್ಲವೆಂದು ರೈತರು ಬೀದಿಗಿಳಿದು ಹೋರಾಟ ಮಾಡಿದ್ದಾರಾದರೂ, ಇದೀಗ ದರ ಕೇಳಿದರೆ ಗಾಬರಿಪಡುವಷ್ಟು ಎತ್ತರಕ್ಕೇರಿದೆ. ಕೆಲ ಮಾರುಕಟ್ಟೆಗಳಲ್ಲಿ ಉಳ್ಳಾಗಡ್ಡಿ ದರ ದಿನಕ್ಕಲ್ಲ, ಗಂಟೆಗಳ ಲೆಕ್ಕದಲ್ಲಿ ಹೆಚ್ಚಳವಾಗತೊಡಗಿದೆ. ಎಪಿಎಂಸಿಯ ಅಂಗಡಿಗಳಲ್ಲೇ ಒಂದು ಕೆಜಿ ಉಳ್ಳಾಗಡ್ಡಿಗೆ 60 ರೂ. ದರ ಇದ್ದರೆ, ಮಾರುಕಟ್ಟೆಯಲ್ಲಿ 80ರಿಂದ 100 ರೂ.ಗೆ ಮಾರಾಟವಾಗತೊಡಗಿದೆ.

ಕೆಜಿಗಟ್ಟಲೇ ಉಳ್ಳಾಗಡ್ಡಿ ತರುವವರು ದರ ಕಂಡು ದಂಗಾಗಿದ್ದು, ಗ್ರಾಂ ಲೆಕ್ಕದಲ್ಲಿ ತರುವಂತಾಗಿದೆ. ದರ ಹೆಚ್ಚಳ ಹೋಟೆಲ್‌ ಉದ್ಯಮದ ಮೇಲೆ ಪರಿಣಾಮ ಬೀರಿದೆ. 10 ಕೆಜಿ ಉಳ್ಳಾಗಡ್ಡಿ ತಂದರೆ ಬಳಸುವುದರೊಳಗೆ ಸುಮಾರು 2 ಕೆಜಿಯಷ್ಟು ಉಳ್ಳಾಗಡ್ಡಿ ಕೊಳೆತು ಹೋಗಿರುತ್ತದೆ.

ತರಕಾರಿಯೂ ದುಬಾರಿ: ಉಳ್ಳಾಗಡ್ಡಿ ಕಥೆ ಬಿಡಿ ಇತರೆ ತರಕಾರಿಗಳ ದರಗಳ ಕಥೆಯೂ ಇದಕ್ಕಿಂತ ಭಿನ್ನವಾಗಿಲ್ಲ. ವಿವಿಧ ತರಕಾರಿ, ಪಲ್ಯಗಳ ದರವೂ ಗಗನಮುಖೀಯಾಗಿದ್ದು, ಬಡವರು ಹಾಗೂ ಮಧ್ಯಮ ವರ್ಗದವರು ಪರಿತಪಿಸುವಂತಾಗಿದೆ. ಸುಗ್ಗಿಯ ಹಬ್ಬವೆಂದೇ ಕರೆಯುವ ಸಂಕ್ರಾಂತಿ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ತರಕಾರಿ-ಪಲ್ಯ, ಕಾಳುಗಳು ಕೈಸುಡುವಂತೆ ಭಾಸವಾಗತೊಡಗಿವೆ.

ಸುಗ್ಗಿಯ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ತರಕಾರಿ-ಪಲ್ಯ ಹಾಗೂ ಕಾಳುಗಳ ದರ ಸಾಮಾನ್ಯವಾಗಿ ಕಡಿಮೆಯಾಗಿರುತ್ತದೆ. ಬರ ಹಾಗೂ ನೆರೆಯಿಂದ ಈ ಬಾರಿ ಮಾರುಕಟ್ಟೆಯಲ್ಲಿ ಕಾಯಿಪಲ್ಲೆ ದರ ಗಗನಮುಖೀಯಾಗಿದೆ. ಕಡು ಬೇಸಿಗೆಯಲ್ಲಿ ಇರಬೇಕಾದ ದರ ಸುಗ್ಗಿ ಸಂದರ್ಭದಲ್ಲೇ ಇರುವಂತಾಗಿದೆ. ಹಸಿ ಮೆಣಸಿನಕಾಯಿ ಕೆಜಿಗೆ 60ರಿಂದ 80 ರೂ. ಇದ್ದರೆ, ಟೊಮೆಟೊ 60ರಿಂದ 80 ರೂ., ಬದನೆಕಾಯಿ 80ರೂ., ಸೌತೇಕಾಯಿ 80ರಿಂದ 100 ರೂ., ಬೀನ್ಸ್‌ 80ರಿಂದ 100ರೂ., ಚೌಳಿಕಾಯಿ 60ರಿಂದ 80 ರೂ.ಗೆ ಏರಿಕೆಯಾಗಿದೆ. ಮಾರುಕಟ್ಟೆಗೆ ತರಕಾರಿ ನೋಡುವುದಕ್ಕೆ ಹೋಗಬೇಕು, ಖರೀದಿಗಲ್ಲ ಎಂಬ ಸ್ಥಿತಿ ಬಡ-ಮಧ್ಯಮ ವರ್ಗದವರದ್ದಾಗಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.