ಮತ್ತೆ ಗೊಂದಲದ ಗೂಡಾದ ಮಹದಾಯಿ

ಅಡ್ಡ ಗೋಡೆ ಮೇಲೆ ದೀಪವಿಟ್ಟ ಕೇಂದ್ರ ಸರ್ಕಾರ ಅನುಮತಿ ಮರು ಪರಿಶೀಲನೆಗೆ ಸಮಿತಿಗೆ ಸಿದ್ಧತೆ

Team Udayavani, Nov 21, 2019, 1:33 PM IST

21-November-12

ಅಮರೇಗೌಡ ಗೋನವಾರ
ಹುಬ್ಬಳ್ಳಿ:
ಕಳಸಾ-ಬಂಡೂರಿ ಯೋಜನೆ ವಿಚಾರದಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾಣೆ ಇಲಾಖೆಯಿಂದ ಒಪ್ಪಿಗೆ ದೊರೆತಿದೆ ಎಂಬ ಸಂತಸ ಮೂಡಿದ ಬೆನ್ನಲ್ಲೇ, ಅದೇ ಇಲಾಖೆಯಿಂದ ಇದೀಗ ಪರಿಶೀಲನೆಗೆ ಸಮಿತಿ ರಚನೆ ಎಂಬ ಹೇಳಿಕೆ ಮತ್ತೊಂದು ಗೊಂದಲಕ್ಕೆ ಕಾರಣವಾಗಿದ್ದು, 2002ರಲ್ಲಾದ ಸ್ಥಿತಿಯನ್ನು ನೆನಪಿಸುತ್ತಿದೆ.

ಮಹದಾಯಿ ನ್ಯಾಯಾಧಿಕರಣದಿಂದ ತೀರ್ಪು ಹೊರಬಿದ್ದರೂ ಕೇಂದ್ರದಿಂದ ಅಧಿಸೂಚನೆ ಹೊರಬಿದ್ದಿಲ್ಲ. ಇನ್ನೊಂದು ಕಡೆ ಗೋವಾದ ಎಡಬಿಡಂಗಿತನ ನಿಂತಿಲ್ಲ. ನ್ಯಾಯಾಧಿಕರಣ ತೀರ್ಪಿನ್ವಯ ಕಳಸಾ-ಬಂಡೂರಿ ಯೋಜನೆ ಕಾಮಾರಿಗೆ ಕರ್ನಾಟಕದ ಮನವಿಗೆ ಸ್ಪಂದಿಸಿದ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವರು ಅನುಮತಿ ನೀಡಿದ್ದರಾದರೂ, ಇದನ್ನು ವಿರೊಧಿಸುವ ಮೂಲಕ ಗೋವಾ, ಕೇಂದ್ರದ ಅನುಮತಿಗೆ ಮತ್ತೂಮ್ಮೆ ಕಲ್ಲು ಹಾಕುವ ಕೆಲಸಕ್ಕೆ ಮುಂದಾಗಿದೆ.

ಗೊಂದಲದ ಗೂಡು: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಗೊಂದಲಗಳ ಗೂಡಾಗಿ ಪರಿಣಮಿಸಿದೆ. ಮಹದಾಯಿ ವಿಷಯವಾಗಿ ನ್ಯಾಯಾಧಿಕರಣಕ್ಕೆ ಗೋವಾ ಪಟ್ಟು ಹಿಡಿದಿತ್ತು. ಈ ಕಾರಣಕ್ಕೆ 2010ರಲ್ಲಿ ಕೇಂದ್ರ ಸರ್ಕಾರ ನ್ಯಾ| ಜೆ.ಎಂ. ಪಾಂಚಾಲ ನೇತೃತ್ವದಲ್ಲಿ ಮಹದಾಯಿ ನ್ಯಾಯಾಧಿಕರಣ ರಚಿಸಿತ್ತು.

ನ್ಯಾಯಾಧಿಕರಣ ತೀರ್ಪಿಗೆ ಒಪ್ಪುವುದಾಗಿಯೂ ಗೋವಾ ಹೇಳಿತ್ತು. ಇದೀಗ ಗೋವಾ ಮಹದಾಯಿ ನ್ಯಾಯಾಧಿಕರಣ ನೀಡಿದ ತೀರ್ಪನ್ನು ಒಪ್ಪುವುದಿಲ್ಲ ಎಂಬಂತೆ ವರ್ತಿಸತೊಡಗಿದೆ. ನ್ಯಾಯಾಧಿಕರಣ ಕರ್ನಾಟಕಕ್ಕೆ ಒಟ್ಟಾರೆ ಸುಮಾರು 13.5 ಟಿಎಂಸಿ ಅಡಿಯಷ್ಟು ನೀರು ಹಂಚಿಕೆ ಮಾಡಿದ್ದರೂ, ನ್ಯಾಯಾಧಿಕರಣ ತೀರ್ಪನ್ನೇ ಧಿಕ್ಕರಿಸುವ ರೀತಿಯಲ್ಲಿ ಮಹದಾಯಿಯಿಂದ ಒಂದು ಹನಿ ನೀರನ್ನು ನೀಡುವುದಿಲ್ಲ ಎಂದು ಗೋವಾ ಹೇಳತೊಡಗಿದೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಸಚಿವ ಪ್ರಕಾಶ ಜಾವಡೇಕರ್‌ ಅವರು, ಕಳಸಾ-ಬಂಡೂರಿ ಯೋಜನೆಯಡಿ ಕಳಸಾದಿಂದ 1.72 ಟಿಎಂಸಿ ಅಡಿ ಹಾಗೂ ಬಂಡೂರಿಯಿಂದ 2.18 ಟಿಎಂಸಿ ಅಡಿ ನೀರು ಬಳಕೆಯ ಕಾಮಗಾರಿಗೆ ಪರಿಸರ ಇಲಾಖೆ ಅನುಮತಿ ನೀಡಿದ್ದರು. ಇದರ ಹಿಂದೆ ರಾಜ್ಯದವರೇ ಆದ ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಪರಿಶ್ರಮ ಪ್ರಮುಖವಾಗಿತ್ತು. ಕೇಂದ್ರದ ಅನುಮತಿಗೆ ತೀವ್ರ ವಿರೋಧ ತೋರಿದ್ದ ಗೋವಾ ಸರ್ಕಾರ, ನ.4ರಂದು ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗಿ ಆಕ್ಷೇಪ ಸಲ್ಲಿಸಿತ್ತು.

ಗೋವಾದ ಆಕ್ಷೇಪಕ್ಕೆ ಸ್ಪಂದನೆ ಎಂಬಂತೆ ಕೇಂದ್ರ ಸರ್ಕಾರ ಕಳಸಾ-ಬಂಡೂರಿ ಯೋಜನೆಗೆ ನೀಡಿದ್ದ ಅನುಮತಿ ಪರಿಶೀಲನೆಗೆ ಸಮಿತಿ ರಚಿಸುವುದಾಗಿ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿಸಿದೆ.

2002ರಲ್ಲಾದ ಬರೆ ಬೀಳದಿರಲಿ: ಮಹದಾಯಿ ವಿವಾದ ಸುಮಾರು ನಾಲ್ಕು ದಶಕಗಳಿಂದ ಇದ್ದು, ಇತ್ಯರ್ಥ ಕಾಣದಾಗಿದ್ದರಿಂದ ರಾಜ್ಯ ಸರ್ಕಾರ 2000 ಇಸ್ವಿಯಲ್ಲಿ ಕಳಸಾ-ಬಂಡೂರಿ ನಾಲಾ ಯೋಜನೆ ರೂಪಿಸಿತ್ತು. ಈ ಯೋಜನೆಗೆ 2002ರಲ್ಲಿ ಅಂದಿನ ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ ಡಿಎ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿತ್ತು. ಆಗಲೂ ಗೋವಾ ಸರ್ಕಾರ ಕೇಂದ್ರದ ಮೇಲೆ ತೀವ್ರ ಒತ್ತಡ ತಂದು ತಾತ್ವಿಕ ಒಪ್ಪಿಗೆ ತಡೆ ಹಿಡಿಯುವಂತೆ ಮಾಡಿ ಕರ್ನಾಟಕಕ್ಕೆ ಅನ್ಯಾಯ ಮಾಡಿತ್ತು.

ಇದಾದ ಸುಮಾರು 16 ವರ್ಷಗಳ ನಂತರ ಮಹದಾಯಿ ನ್ಯಾಯಾಧಿಕರಣ ಹಂಚಿಕೆ ಪ್ರಕಾರ ರಾಜ್ಯಕ್ಕೆ ಸಿಕ್ಕ ಸುಮಾರು 5.5 ಟಿಎಂಸಿ ಅಡಿ ಕುಡಿಯುವ ನೀರಿನ ಯೋಜನೆಯಡಿ ಕಳಸಾ-ಬಂಡೂರಿ ನಾಲಾ ಯೋಜನೆ ಕಾಮಗಾರಿಗೆ ಕೇಂದ್ರ ಪರಿಸರ ಇಲಾಖೆ ನೀಡಿದ ಅನುಮತಿಯನ್ನು ತಡೆಯುವ ಲಾಬಿಗೆ ಗೋವಾ ಮುಂದಾಗಿದೆ. ಕಳಸಾ-ಬಂಡೂರಿ ನಾಲಾ ಯೋಜನೆಗೆ ಈಗಾಗಲೇ ಸುಮಾರು 125 ಕೋಟಿ ವೆಚ್ಚ ಮಾಡಲಾಗಿದ್ದು, ಜತೆಗೆ ಅಂದಾಜು 1,600 ಕೋಟಿ ವೆಚ್ಚದ ಯೋಜನೆಯ ವಿಸ್ತೃತ ವರದಿ (ಡಿಪಿಆರ್‌) ಸಲ್ಲಿಸಲಾಗಿದೆ.

ಕಳಸಾ-ಬಂಡೂರಿಗೆ ತಾನೇ ನೀಡಿದ ಅನುಮತಿಯ ಪರಿಶೀಲನೆಗೆ ಸಮಿತಿರಚಿಸುವುದಾಗಿ ಕೇಂದ್ರ ಸರ್ಕಾರ ಹೇಳಿರುವುದು ನೋಡಿದರೆ, 2002ರಲ್ಲಾದ ರೀತಿ ರಾಜ್ಯಕ್ಕೆ ಮತ್ತೂಮ್ಮೆ ಬರೆ ಎಳೆಯುವ ಕೆಲಸ ಆಗಲಿದೆ ಎಂಬ ಆತಂಕ ಮೂಡುವಂತಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.