ಯುಕೆಪಿಗಾಗಿ ಮೊಳಗಲಿ ಸಂಘಟಿತ ಧ್ವನಿ


Team Udayavani, Aug 22, 2019, 10:36 AM IST

Udayavani Kannada Newspaper

ಅಮರೇಗೌಡ ಗೋನವಾರ
ಹುಬ್ಬಳ್ಳಿ : ರಾಜ್ಯದ ಹೆಚ್ಚಿನ ಭೂ ಭಾಗ ಹೊಂದಿದ ಹಾಗೂ ಸುಮಾರು 15.36 ಲಕ್ಷ ಎಕರೆ ಪ್ರದೇಶಕ್ಕೆ ನೀರೊದಗಿಸುವ ಉದ್ದೇಶದ ಕೃಷ್ಣಾ ಮೇಲ್ದಂಡೆ ಯೋಜನೆ(ಯುಕೆಪಿ)ಯು ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಘೋಷಣೆಯಾಗುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಸಂಸದರು, ಶಾಸಕರು, ಸಂಘ-ಸಂಸ್ಥೆಗಳಿಂದ ಸಂಘಟಿತ ಧ್ವನಿ ಮೊಳಗಬೇಕಿದೆ.

ಈಗಾಗಲೇ ದೇಶದ 16 ಯೋಜನೆಗಳು ರಾಷ್ಟ್ರೀಯ ಸೌಲಭ್ಯ ಪಡೆದಿವೆ. ಯುಕೆಪಿ ಯೋಜನೆ ರಾಷ್ಟ್ರೀಯ ನೀರಾವರಿ ಯೋಜನೆ ಪಟ್ಟಿಗೆ ಸೇರುವ ಎಲ್ಲ ಅರ್ಹತೆ ಹೊಂದಿದೆ. ಇತ್ತೀಚೆಗೆ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಸಿಎಂ ಯಡಿಯೂರಪ್ಪನವರು, ಯುಕೆಪಿಯನ್ನು ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಘೋಷಿಸಬೇಕೆಂದು ಮನವಿ ಮಾಡಿರುವುದು ಈ ಭಾಗದ ಜನರ ಬೇಡಿಕೆಗೆ ಪುಷ್ಟಿ ದೊರೆತಂತಾಗಿದೆ.

1964, ಮೇ 22ರಂದು ಅಂದಿನ ಪ್ರಧಾನಿ ಲಾಲ್ ಬಹದ್ದೂರ್‌ ಶಾಸ್ತ್ರಿ ಅವರಿಂದ ಅಡಿಗಲ್ಲು ಕಂಡಿದ್ದ ಆಲಮಟ್ಟಿ ಜಲಾಶಯ, ಯುಕೆಪಿ ಯೋಜನೆ ಕಾಮಗಾರಿ ಸುಮಾರು 42 ವರ್ಷಗಳ ನಂತರ ಪೂರ್ಣಗೊಂಡಿತ್ತು. ಅಂದಾಜು 120 ಕೋಟಿ ವೆಚ್ಚದ ಯೋಜನೆ, 10,371 ಕೋಟಿ ವೆಚ್ಚದಲ್ಲಿ ಜಲಾಶಯ ಇನ್ನಿತರ ಕಾರ್ಯಗಳು ಪೂರ್ಣಗೊಂಡಿದ್ದವು. 1976ರಲ್ಲಿ ನ್ಯಾ| ಆರ್‌.ಎಸ್‌. ಬಚಾವತ್‌ ಆಯೋಗ ಹಾಗೂ 2010ರಲ್ಲಿ ನ್ಯಾ|ಬ್ರಿಜೇಶಕುಮಾರ ಆಯೋಗ ಕರ್ನಾಟಕ-ಮಹಾರಾಷ್ಟ್ರ ಹಾಗೂ ಅವಿಭಜಿತ ಆಂಧ್ರಕ್ಕೆ ನೀರು ಹಂಚಿಕೆ ಮಾಡಿದೆ.

ರಾಷ್ಟ್ರೀಯ ಯೋಜನೆ ಯಾಕೆ?: ಕೇಂದ್ರ ಸರ್ಕಾರ 11ನೇ ಹಣಕಾಸು ಯೋಜನೆಯಡಿ ರಾಷ್ಟ್ರೀಯ ನೀರಾವರಿ ಯೋಜನೆ ಘೋಷಿಸಿತ್ತು. ಈ ಮಾನ್ಯತೆ ಪಡೆಯಲು ಯಾವುದೇ ಯೋಜನೆಯು ಅಂತಾರಾಜ್ಯ ಯೋಜನೆಯಾಗಿರಬೇಕು, ಸುಮಾರು ಎರಡು ಲಕ್ಷ ಹೆಕ್ಟೇರ್‌ಗೂ ಅಧಿಕ ಪ್ರದೇಶಕ್ಕೆ ನೀರೊದಗಿಸಬೇಕು, ನೀರು ಹಂಚಿಕೆ ವಿವಾದ ಇತ್ಯರ್ಥಗೊಂಡಿರಬೇಕು. ಈ ಹಿನ್ನೆಲೆಯಲ್ಲಿ ಎಲ್ಲ ದೃಷ್ಟಿಯಿಂದಲೂ ಯುಕೆಪಿ ರಾಷ್ಟ್ರೀಯ ಯೋಜನೆ ಸ್ಥಾನದ ಅರ್ಹತೆ ಹೊಂದಿದೆ.

ರಾಷ್ಟ್ರೀಯ ನೀರಾವರಿ ಯೋಜನೆಯಡಿ ಆಂಧ್ರದ ಪೋಲಾವರಂ, ಮಹಾರಾಷ್ಟ್ರದ ಗೋಸಿ ಖುದ್‌ರ್ ಸೇರಿದಂತೆ ಒಟ್ಟು 16 ಯೋಜನೆಗಳು ಸೇರ್ಪಡೆಗೊಂಡಿವೆ. ಪಂಜಾಬ್‌, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಅಸ್ಸಾಂ, ಅರುಣಾಚಲ ಪ್ರದೇಶ ಸೇರಿವೆ. ಆದರೆ, ಕರ್ನಾಟಕದ ಯಾವುದೇ ಯೋಜನೆ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.

ಆಂಧ್ರದ ಪೋಲಾವರಂ ಯೋಜನೆ 16,010 ಕೋಟಿ ರೂ.ಗಳ ಪರಿಷ್ಕೃತ ಅಂದಾಜು ವೆಚ್ಚ ಹೊಂದಿದ್ದು, 4.68 ಲಕ್ಷ ಹೆಕ್ಟೇರ್‌ಗೆ ನೀರೊದಗಿಸಲಿದೆ, ಮಹಾರಾಷ್ಟ್ರದ ಗೋಸಿ ಖುದ್‌ರ್ ಯೋಜನೆ 7,777 ಕೋಟಿ ರೂ.ಅಂದಾಜು ವೆಚ್ಚದ್ದಾಗಿದ್ದು, 2.50 ಲಕ್ಷ ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಒದಗಿಸುತ್ತದೆ. ಆದರೆ ಯುಕೆಪಿ ಯೋಜನೆ ಒಟ್ಟು 6.48 ಲಕ್ಷ ಹೆಕ್ಟೇರ್‌ಗೆ ನೀರು ಒದಗಿಸುತ್ತಿದ್ದು, ಮೂರನೇ ಹಂತದ ಯೋಜನೆಗೆ ಅಂದಾಜು 82 ಸಾವಿರ ಕೋಟಿ ಅವಶ್ಯಕತೆ ಇದೆ. ರಾಜ್ಯ ಸರ್ಕಾರ ಇದುವರೆಗೆ ಕೇವಲ 7 ಸಾವಿರ ಕೋಟಿ ಬಿಡುಗಡೆ ಮಾಡಿದೆ.

ಆದರೆ ಇದು ರಾಷ್ಟ್ರೀಯ ನೀರಾವರಿ ಯೋಜನೆಯಾದರೆ ಯೋಜನೆಯ ಒಟ್ಟು ವೆಚ್ಚದ ಶೇ.90 ಅನುದಾನವನ್ನು ಕೇಂದ್ರ ಭರಿಸಲಿದೆ. ಜತೆಗೆ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕು. ಅನುದಾನ ಬಿಡುಗಡೆಯಾದ 18 ತಿಂಗಳೊಳಗೆ ಆಡಿಟ್ ವರದಿಯನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಬೇಕೆಂಬ ಹಲವು ನಿಯಮಗಳೊಂದಿಗೆ ಹಣ ನೀಡಲಾಗುತ್ತದೆ. ಹೀಗಾಗಿ ಯುಕೆಪಿ ಯೋಜನೆ ಆರ್ಥಿಕ ಕೊರತೆ ಇಲ್ಲದೆ ಪೂರ್ಣಗೊಳ್ಳಲಿದೆ.

ಯುಕೆಪಿ ಮೊದಲ ಹಂತದಲ್ಲಿ ಆಲಮಟ್ಟಿ-ನಾರಾಯಣಪುರ ಜಲಾಶಗಳಿಂದ 119 ಟಿಎಂಸಿ ಅಡಿ ನೀರು ಬಳಕೆ ಹಕ್ಕು ಪಡೆದಿದ್ದೇವೆ. ಎರಡನೇ ಹಂತದಲ್ಲಿ 54 ಟಿಎಂಸಿ ಅಡಿ ನೀರಿನ ಪಾಲಿದ್ದು, ಮೂರನೇ ಹಂತ ಜಾರಿಗೊಳ್ಳಬೇಕಿದೆ.

ರಾಜ್ಯ ಸರ್ಕಾರ ಯುಕೆಪಿ ಮೂರನೇ ಹಂತದಡಿ 2011ರ ಡಿಸೆಂಬರ್‌ನಲ್ಲಿ ಕ್ರಿಯಾಯೋಜನೆ ರೂಪಿಸಿತ್ತು. ಇದರಡಿ 130 ಟಿಎಂಸಿ ಅಡಿ ನೀರು ಬಳಸಬಹುದಾಗಿದೆ. ಆಲಮಟ್ಟಿ ಜಲಾಶಯ ಎತ್ತರವನ್ನು 519.6 ರಿಂದ 524.256 ಮೀಟರ್‌ಗೆ ಎತ್ತರಿಸುವುದು, ಇದಕ್ಕಾಗಿ ಬಾಗಲಕೋಟೆಯ ಕೆಲ ಭಾಗ ಸೇರಿದಂತೆ 22 ಗ್ರಾಮಗಳು ಹಾಗೂ ಒಂದು ಲಕ್ಷ ಎಕರೆಯಷ್ಟು ಭೂಮಿ ಮುಳುಗಡೆಯಾಗಲಿದ್ದು, ಈ ಯೋಜನೆಗೆ 17 ಸಾವಿರ ಕೋಟಿ ರೂ.ಗಳ ಅಂದಾಜು ವೆಚ್ಚ ರೂಪಿಸಲಾಗಿದೆ. ಇದರಡಿ ವಿವಿಧ ಏತ ನೀರಾವರಿ ಯೋಜನೆಗಳು, ನಾರಾಯಣಪುರ ಬಲದಂಡೆ ನಾಲೆ ವಿಸ್ತರಣೆ ಒಳಗೊಂಡಿದೆ.

ಬಿಜೆಪಿಗೆ ಹೆಚ್ಚು ಲಾಭ
ಯುಕೆಪಿಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿದಲ್ಲಿ ಬಿಜೆಪಿಗೆ ಹೆಚ್ಚಿನ ಲಾಭ ಆಗಲಿದೆ. ರಾಜ್ಯ-ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಬಲವೆಂದರೆ ಉತ್ತರ ಕರ್ನಾಟಕ. ಯುಕೆಪಿಗೆ ರಾಷ್ಟ್ರೀಯ ಯೋಜನೆ ಸ್ಥಾನ ಕೊಡಿಸಿ, ಸಕಾಲದಲ್ಲಿ ಯೋಜನೆ ಪೂರ್ಣಕ್ಕೆ ಶ್ರಮಿಸಿದರೆ, ಉತ್ತರದಲ್ಲಿ ಬಿಜೆಪಿ ಬಲ ಇನ್ನಷ್ಟು ಸದೃಢಗೊಳ್ಳಲಿದೆ.

ಕೃಷ್ಣಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ನೀರಾವರಿ ಯೋಜನೆ ಪಟ್ಟಿಗೆ ಸೇರಬೇಕೆಂಬುದು ನಮ್ಮೆಲ್ಲರ ಒತ್ತಾಯ. ಈ ಕುರಿತು ಉತ್ತರ ಕರ್ನಾಟಕದ ವಿವಿಧ ಮುಖಂಡರು, ಸಂಘಟಕರ ಜತೆ ಸಂಪರ್ಕಿಸಲಾಗುತ್ತಿದೆ. ಶೀಘ್ರವೇ ಹುಬ್ಬಳ್ಳಿಯಲ್ಲಿ ಪ್ರಮುಖರ ಸಭೆ ಕರೆಯಲಾಗುವುದು. ಯೋಜನೆ ವಿಚಾರವಾಗಿ ಕೇಂದ್ರ-ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು.
ಅಶೋಕ ಚಂದರಗಿ,
ಅಧ್ಯಕ್ಷರು, ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಬೆಳಗಾವಿ

ಟಾಪ್ ನ್ಯೂಸ್

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.