ಕೆಸರುಗದ್ದೆಯಂತಿದ್ದ ರಸ್ತೆ ಧೂಳುಮಯ

ನೀಲಿಜಿನ್‌ ರಸ್ತೆ ವ್ಯಾಪಾರಿ-ನಿವಾಸಿಗಳ ಗೋಳು | ಪಾಲಿಕೆ-ಜನಪ್ರತಿನಿಧಿಗಳ ಭರವಸೆ ಬರೀ ಓಳು

Team Udayavani, Aug 24, 2019, 1:16 PM IST

24-April-23

ಹುಬ್ಬಳ್ಳಿ: ಧೂಳುಮಯವಾದ ನೀಲಿಜಿನ್‌ ರಸ್ತೆ.

ಹೇಮರಡ್ಡಿ ಸೈದಾಪುರ
ಹುಬ್ಬಳ್ಳಿ:
ತೀವ್ರ ಮಳೆಯಿಂದ ಕೆಸರುಗದ್ದೆಯಂತೆ ಆಗಿದ್ದ ರಸ್ತೆಗಳೀಗ ಧೂಳುಮಯವಾಗಿವೆ. ಸಾರ್ವಜನಿಕರು ಓಡಾದಂತಹ ಸ್ಥಿತಿ ನಿರ್ಮಾಣವಾಗಿದ್ದು, ನೀಲಿಜಿನ್‌ ರಸ್ತೆಯ ನಿವಾಸಿಗಳ ಪಾಡಂತೂ ದೇವರಿಗೆ ಪ್ರೀತಿ.

ಇತ್ತೀಚೆಗೆ ಸುರಿದ ಮಳೆಯಿಂದ ನಗರದ ಬಹುತೇಕ ರಸ್ತೆಗಳಲ್ಲಿ ಆಳವಾದ ಗುಂಡಿಗಳು ನಿರ್ಮಾಣವಾಗಿವೆ. ಇದೀಗ ಕೊಂಚ ಮಳೆ ಕಡಿಮೆಯಾಗುತ್ತಿದ್ದಂತೆ ವಾಹನ ಸವಾರರ ಅನುಕೂಲಕ್ಕಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಮಹಾನಗರ ಪಾಲಿಕೆ ಮೊದಲ ಆದ್ಯತೆ ನೀಡಿದೆ. ಕೆಲವೊಂದು ರಸ್ತೆಗಳಲ್ಲಿ ವೆಟ್ಮಿಕ್ಸ್‌, ಕಟ್ಟಡದ ತ್ಯಾಜ್ಯ ಬಳಸಿಕೊಂಡು ಗುಂಡಿ ಮುಚ್ಚುತ್ತಿರುವುದರಿಂದ ಇದೀಗ ಬರೀ ಧೂಳು ರಾರಾಜಿಸುತ್ತಿದೆ. ಮಳೆರಾಯ ಗುಂಡಿ ನಿರ್ಮಾಣ ಮಾಡಿದರೆ ಮಹಾನಗರ ಪಾಲಿಕೆ ಜನತೆಗೆ ಧೂಳು ನೀಡುತ್ತಿದೆ ಎಂದು ಶಾಪ ಹಾಕುವಂತಾಗಿದೆ. ಲಾರಿ ಅಥವಾ ಬಸ್‌ ಹಿಂದೆ ಹೊರಟರೆ ಮುಖಕ್ಕೆ ಧೂಳು ರಾಚುತ್ತಿದೆ. ಕೆಲ ರಸ್ತೆಗಳಲ್ಲಿ ಸಂಚರಿಸುವುದು ಅನಿವಾರ್ಯವಾಗಿರುವುದರಿಂದ ಧೂಳು ಸೇವಿಸಿಕೊಂಡೇ ಓಡಾಡುವಂತಾಗಿದೆ.

ತೀವ್ರ ನಿರ್ಲಕ್ಷ್ಯಕ್ಕೊಳಗಾದ ರಸ್ತೆ: ನೀಲಿಜಿನ್‌ ರಸ್ತೆ ದುರಸ್ತಿ ಕಳೆದ ಮೂರ್‍ನಾಲ್ಕು ವರ್ಷದ ಬೇಡಿಕೆಯಾಗಿದೆ. ರಸ್ತೆಯಲ್ಲಿ ಗುಂಡಿ ಬದಲು ಗುಂಡಿಯಲ್ಲಿ ರಸ್ತೆ ಹುಡುಕುವಂತಾಗಿದೆ. ಮಹಾನಗರದ ಪೈಕಿ ಇದೊಂದು ರಸ್ತೆ ತೀವ್ರ ನಿರ್ಲಕ್ಷ್ಯಗೊಳಗಾಗಿದೆ. ಪ್ರತಿ ಮಳೆಯಲ್ಲಿ ಇಡೀ ರಸ್ತೆಯುದ್ದಕ್ಕೂ ಗುಂಡಿಗಳು ನಿರ್ಮಾಣವಾಗುತ್ತಿದ್ದು, ಅವುಗಳಿಗೆ ತಾತ್ಕಾಲಿಕವಾಗಿ ವೆಟ್ಮಿಕ್ಸ್‌ ಹಾಕಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಇದು ವಾಹನಗಳಿಗೇನೋ ಸುಗಮವಾಗುತ್ತದೆಯಾದರೂ ಈ ರಸ್ತೆಯಲ್ಲಿನ ಅಂಗಡಿ ಮುಗ್ಗಟ್ಟುಗಳ ವ್ಯಾಪಾರಿಗಳ ಪರಿಸ್ಥಿತಿ ಹೇಳತೀರದು. ಇಡೀ ದಿನ ಧೂಳಿನಲ್ಲಿ ವ್ಯಾಪಾರ ಮಾಡುವ ಸನ್ನಿವೇಶ ನಿರ್ಮಾಣವಾಗಿದೆ.

ದೊಡ್ಡ ವಾಹನ ಈ ರಸ್ತೆಯಲ್ಲಿ ಹಾದು ಹೋದರೆ ಸಾಕು ಇಡೀ ರಸ್ತೆ ಮಂಜು ಕವಿದ ಸ್ಥಿತಿಯಲ್ಲಿ ಧೂಳು ತುಂಬಿಕೊಳ್ಳುತ್ತದೆ. ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ರಸ್ತೆಯಲ್ಲಿ ನಿರ್ಮಾಣವಾಗಿದ್ದ ಗುಂಡಿಗಳನ್ನು ಮುಚ್ಚಲು ವೆಟ್ಮಿಕ್ಸ್‌ ಹಾಕಲಾಗಿದೆ. ಹೀಗಾಗಿ ಈಗಂತೂ ಈ ರಸ್ತೆಯಲ್ಲಿ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಇಲ್ಲಿನ ನಿವಾಸಿಗಳ ಪರಿಸ್ಥಿತಿ ಯಾವುದಕ್ಕೂ ಬೇಡವಾದಂತಾಗಿದೆ. ಬಸ್‌, ಲಾರಿ ಸೇರಿದಂತೆ ಬೃಹತ್‌ ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತಿವೆ.

ಹುಸಿಯಾದ ನಿರೀಕ್ಷೆ
ನೀಲಿಜಿನ್‌ ರಸ್ತೆಯನ್ನು ಸಿಆರ್‌ಎಫ್‌ ಯೋಜನೆಯಡಿ ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ರಾಜ್ಯ ಸಚಿವ ಜಗದೀಶ ಶೆಟ್ಟರ ಹಿಂದೆಯೇ ಭರವಸೆ ನೀಡಿದ್ದರು. ಇನ್ನೇನು ಕಾಂಕ್ರೀಟ್ ರಸ್ತೆ ನಿರ್ಮಾಣವಾಗೇಬಿಟ್ಟಿತು ಎಂದು ಸ್ಥಳೀಯರು ನಿರೀಕ್ಷೆಯಲ್ಲಿದ್ದರು. ಆದರೆ ಜನಪ್ರತಿನಿಧಿಗಳು ನೀಡಿದ ಆಶ್ವಾಸನೆ ಇನ್ನೂ ಭರವಸೆಯಾಗಿಯೇ ಉಳಿದಿದೆ. ಈ ರಸ್ತೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎನ್ನುವುದು ಸ್ಥಳೀಯರ ಅಸಮಾಧಾನಕ್ಕೆ ಕಾರಣವಾಗಿದೆ.

ನೀಲಿಜಿನ್‌ ರಸ್ತೆ ಅಭಿವೃದ್ಧಿ ಚರ್ಚೆ ಕಳೆದ ನಾಲ್ಕೈದು ವರ್ಷಗಳಿಂದ ನಡೆಯುತ್ತಿದೆ. ಗುಂಡಿ ಬಿದ್ದಾಗ ವೆಟ್ಮಿಕ್ಸ್‌, ನಂತರ ಒಂದಿಷ್ಟು ಡಾಂಬರ್‌ ಸುರಿಯಲಾಗುತ್ತಿದೆ. ಶಾಶ್ವತ ಪರಿಹಾರವಾಗಿ ಉತ್ತಮ ರಸ್ತೆ ನಿರ್ಮಾಣ ಮಾಡಲು ಸಾಧ್ಯವಾಗುತ್ತಿಲ್ಲ. ಮನವಿ, ಹೋರಾಟ ಎಲ್ಲಾ ಮುಗಿದಿದೆ. ನಮ್ಮ ಗೋಳು ಯಾರ ಮುಂದೆ ಹೇಳಬೇಕು. ಸಂಜೆಯಾಗುವುದರೊಳಗೆ ಅಂಗಡಿಯಲ್ಲಿ ಕೆಜಿಗಟ್ಟಲೆ ಧೂಳು ಸಂಗ್ರಹವಾಗುತ್ತಿದೆ.
ಸುಜಿತ್‌ ಜೈನ್‌,
ನೀಲಿಜಿನ್‌ ರಸ್ತೆ ವ್ಯಾಪಾರಿ

ಹಿಂದೆ ರಸ್ತೆತಡೆ ನಡೆಸಿದ ನಂತರ ಸ್ಥಳಕ್ಕೆ ಆಗಮಿಸಿದ್ದ ಪಾಲಿಕೆ ಅಧಿಕಾರಿಗಳು ರಸ್ತೆಗೆ ತೇಪೆ ಹಚ್ಚುವ ಕೆಲಸ ಮಾಡಿದ್ದರು. ಏಳೆಂಟು ತಿಂಗಳಲ್ಲಿ ಹಾಕಿದ ಡಾಂಬರ್‌ ಸಂಪೂರ್ಣ ಕಿತ್ತು ಹೋಯಿತು. ಮೊನ್ನೆ ಸುರಿದ ಮಳೆಗೆ ಒಂದೊಂದು ಅಡಿ ಆಳದ ಗುಂಡಿಗಳು ನಿರ್ಮಾಣವಾಗಿದ್ದು, ಅವುಗಳನ್ನು ಮುಚ್ಚಲು ಕಡಿ ಹಾಕಿದ್ದೇ ತಡ ಇಡೀ ರಸ್ತೆ ಧೂಳಿನಿಂದ ತುಂಬಿದೆ. ಕಣ್ಣು, ಮೂಗಿನಲ್ಲಿ ಬರೀ ಧೂಳು.
ಶೇಖರಯ್ಯ ಮಠಪತಿ,
 ಅಧ್ಯಕ್ಷ, ಆಟೋ ಚಾಲಕರ-ಮಾಲೀಕರ ಸಂಘ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.