ಬಿಡಾಡಿ ಆಪರೇಷನ್‌ ತಡೆಗೆ ಗೋಪಾಲಕರ ಮೊರೆ

ಅತಿವೃಷ್ಟಿ ತಂದಿಟ್ಟ ಸಂಕಷ್ಟ | ರಾಸುಗಳ ನಿರ್ವಹಣೆ ಕಷ್ಟ ಕಷ್ಟ | ಮಾಲೀಕರ ಪರಿಸ್ಥಿತಿ ನಿಕೃಷ್ಟ

Team Udayavani, Sep 12, 2019, 4:10 PM IST

12-Sepctember-16

ವಿಶ್ವನಾಥ ಕೋಟಿ
ಹುಬ್ಬಳ್ಳಿ:
ಅತಿವೃಷ್ಟಿಯಿಂದಾಗಿ ಗ್ರಾಮೀಣ ಭಾಗದಲ್ಲಿ ಮಾತ್ರವಲ್ಲ, ನಗರ ಪ್ರದೇಶಗಳಲ್ಲಿಯೂ ಹೈನುಗಾರಿಕೆಗೆ ತೊಂದರೆಯಾಗಿದೆ. ಸಂಗ್ರಹಿಸಿದ್ದ ಒಣ ಮೇವು ಕೊಳೆಯುತ್ತಿರುವುದು ರಾಸುಗಳ ನಿರ್ವಹಣೆ ದುಸ್ತರವಾಗಿಸಿದೆ. ಆದ್ದರಿಂದ ಮಹಾನಗರ ಪಾಲಿಕೆ ಬಿಡಾಡಿ ದನಗಳ ಕಾರ್ಯಾಚರಣೆ ಮುಂದೂಡಬೇಕೆಂಬುದು ಹೈನುಗಾರರ ಕೋರಿಕೆ!

ಮೇವಿನ ಕೊರತೆಯಿಂದಾಗಿ ಬೀದಿಗೆ ಬಿಡುವ ದನಗಳ ಪ್ರಮಾಣ ಹೆಚ್ಚಾಗಿದೆ. ಜಿಲ್ಲಾಧಿಕಾರಿ ಆದೇಶದನ್ವಯ ಮಹಾನಗರ ಪಾಲಿಕೆ ಬಿಡಾಡಿ ದನಗಳನ್ನು ಹಿಡಿಯುತ್ತಿದ್ದು, ಕಳೆದೊಂದು ತಿಂಗಳಲ್ಲಿ 70ಕ್ಕೂ ಹೆಚ್ಚು ದನಗಳನ್ನು ಹಿಡಿಯಲಾಗಿದೆ.

ಸಾಮಾನ್ಯವಾಗಿ ನಗರ ಪ್ರದೇಶದ ಗೌಳಿಗರು ಹಗಲು ಹೊತ್ತಿನಲ್ಲಿ ದನಗಳನ್ನು ಮೇಯಿಸಿಕೊಂಡು ಬಂದು ಸಂಜೆ ಹಾಗೂ ರಾತ್ರಿ ಒಣ ಮೇವು ಹಾಕುತ್ತಾರೆ. ಹಗಲು ಹೊತ್ತಿನಲ್ಲಿ ಹಸಿ ಮೇವೇ ಆಹಾರ. ರಾತ್ರಿ ವೇಳೆ ದನಗಳಿಗೆ ಹಾಕುವುದಕ್ಕಾಗಿ ಒಣ ಮೇವನ್ನು ಸಂಗ್ರಹಿಸುತ್ತಾರೆ. ಆದರೆ ಈ ಬಾರಿ ವಿಪರೀತ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದಾಗಿ ಹೆಚ್ಚಿನ ಒಣ ಮೇವು ಹಾನಿಗೀಡಾಗಿದೆ. ಇದು ಗೋಪಾಲಕರನ್ನು ಆತಂಕಕ್ಕೀಡು ಮಾಡಿದೆ.

ಅವಳಿನಗರದಲ್ಲಿ ಸುಮಾರು 500 ಬಿಡಾಡಿ ದನಗಳಿವೆ ಎಂದು ಅಂದಾಜಿಸಲಾಗಿದೆ. ಅವುಗಳಿಂದ ಸಂಚಾರಕ್ಕೆ ವ್ಯತ್ಯಯವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ ಬಿಡಾಡಿ ದನಗಳ ಕಾರ್ಯಾಚರಣೆ ನಡೆಸುತ್ತಿದೆ. ಇದು ಗೋಪಾಲಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮನೆಯಲ್ಲಿ ರಾಸುಗಳನ್ನಿಟ್ಟುಕೊಂಡು ಮೇವು ಹಾಕಲಾಗುವುದಿಲ್ಲ. ಅಲ್ಲದೇ ಒಣ ಮೇವು ತಂದು ಹಾಕಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ಒಣ ಮೇವು ಲಭ್ಯತೆಯ ಕೊರತೆ ಕೂಡ ಇದಕ್ಕೆ ಕಾರಣವಾಗಿದೆ. ಮಹಾನಗರ ಪಾಲಿಕೆ ಹಿಡಿದುಕೊಂಡು ಹೋದ ದನಗಳನ್ನು ಬಿಡಿಸಿಕೊಳ್ಳಲು ಪ್ರತಿ ದನಕ್ಕೆ ಸುಮಾರು 5000 ರೂ.ವರೆಗೆ ದಂಡ ಭರಿಸಬೇಕಾಗುತ್ತದೆ.

ಹಳ್ಳಿಗಳಲ್ಲಿ ಊರ ಹೊರಗೆ ಬಣವಿಗಳಲ್ಲಿ ಒಣ ಮೇವನ್ನು ದಾಸ್ತಾನು ಮಾಡಲಾಗುತ್ತದೆ. ಈ ಮೇವು ಹಲವು ತಿಂಗಳ ಕಾಲ ಅನುಕೂಲವಾಗುತ್ತದೆ. ಆದರೆ ನಗರಗಳಲ್ಲಿ ಜಾಗದ ಅಲಭ್ಯತೆಯಿಂದಾಗಿ ಬಣಿವೆ ಮಾಡಲು ಹೆಚ್ಚಿನ ಜನರಿಗೆ ಸಾಧ್ಯವಾಗುವುದಿಲ್ಲ. ಅಲ್ಲದೇ ಶೆಡ್‌ಗಳಲ್ಲಿ ಸಂಗ್ರಹಿಸಿಟ್ಟ ಮೇವು ಮಳೆಯಿಂದಾಗಿ ಹಾಳಾಗಿದೆ.

ಪಾಲಿಕೆ ಕಾರ್ಯಾಚರಣೆ ಸಂದರ್ಭದಲ್ಲಿ ಕೆಲ ದಿನಗಳ ಹಿಂದೆ ಧಾರವಾಡದಲ್ಲಿ ಗೌಳಿಗಳು ಆಕ್ಷೇಪಿಸಿದ್ದರು. ಮೇವಿನ ವ್ಯವಸ್ಥೆ ಮಾಡಿಕೊಳ್ಳಲು ಕೆಲ ಸಮಯ ನೀಡುವಂತೆ ಮನವಿ ಮಾಡಿದ್ದರು. ಮತ್ತೆ ಈಗ ಬಿಡಾಡಿ ದನಗಳ ತೆರವು ಕಾರ್ಯಾಚರಣೆ ಶುರುವಾಗಿದೆ. ರಸ್ತೆ ಸಂಚಾರಕ್ಕೆ ತೊಂದರೆಯಾಗದಂತೆ ತಡೆಯಲು ಕ್ರಮ ಅವಶ್ಯ. ಆದರೆ ಈ ವರ್ಷ ವಿಪರೀತ ಮಳೆಯಿಂದಾಗಿ ದನಗಳನ್ನು ನಿರ್ವಹಣೆ ಮಾಡುವವರಿಗೆ ಒಣ ಮೇವಿನ ಕೊರತೆ ಉಂಟಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಮಾನವೀಯ ದೃಷ್ಟಿಯಿಂದ ದನಗಳ ನಿರ್ವಹಣೆಗೆ ಅನುಕೂಲತೆ ಕಲ್ಪಿಸಿಕೊಡಬೇಕಿದೆ. ಒಣ ಮೇವು ರಿಯಾಯಿತಿ ದರದಲ್ಲಿ ಒದಗಿಸಿದರೆ ದನಗಳು ಬೀದಿಗೆ ಬರುವ ಪ್ರಮಾಣ ಇಳಿಮುಖವಾಗಬಹುದು. ಈ ಬಗ್ಗೆ ಕೂಡ ಜಿಲ್ಲಾಡಳಿತ ಗಮನ ಹರಿಸುವುದು ಅವಶ್ಯಕವಾಗಿದೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.